ಕರ್ನಾಲ್ (ಹರಿಯಾಣ): ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಕರ್ನಾಲ್ನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಅವಘಡ ಸಂಭವಿಸಿದ್ದು, ಇನ್ನೂ ಓರ್ವ ವ್ಯಕ್ತಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಐಪಿಎಸ್ ಅಧಿಕಾರಿ ಎಂದ್ಹೇಳಿಕೊಂಡು ದೋಖಾ : ಬರೋಬ್ಬರಿ ₹11 ಕೋಟಿ ಲಪಟಾಯಿಸಿದ ಕಿರಾತಕಿ
ಈ ಕುರಿತು ಮೃತರ ಸಂಬಂಧಿಕರಿಗೆ ಮಾಹಿತಿ ರವಾನಿಸಿದ್ದು, ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.