ದಕ್ಷಿಣ 24 ಪರಗಣ (ಪಶ್ಚಿಮ ಬಂಗಾಳ): ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಯುನೈಟೆಡ್ ಫ್ರಂಟ್ ಪಕ್ಷಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ಟಿಎಂಸಿ ಕಾರ್ಯಕರ್ತ ಮೃತಪಟ್ಟಿದ್ದಾನೆ.
ಕಳೆದ ರಾತ್ರಿ ನಡೆದ ಘಟನೆಯಲ್ಲಿ ಎರಡೂ ಪಕ್ಷಗಳ 10ಕ್ಕೂ ಹೆಚ್ಚು ಕಾರ್ಯಕರ್ತರು ಗಾಯಗೊಂಡಿದ್ದು, ಯುನೈಟೆಡ್ ಫ್ರಂಟ್ನ ಮೂವರು ಕಾಣೆಯಾಗಿದ್ದಾರೆ. ನಮ್ಮವರ ಮೇಲೆ ಯುನೈಟೆಡ್ ಫ್ರಂಟ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂದು ಟಿಎಂಸಿ ಆರೋಪಿಸಿದರೆ, ನಮ್ಮ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆಂದು ಯುನೈಟೆಡ್ ಫ್ರಂಟ್ ಆರೋಪಿಸಿದೆ.