ETV Bharat / bharat

ಕಾವೇರಿ ನೀರಿಗಾಗಿ ಕೇಂದ್ರದ ಮೇಲೆ ಒತ್ತಡ: ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

author img

By ETV Bharat Karnataka Team

Published : Oct 9, 2023, 5:43 PM IST

ಕಾವೇರಿ ನದಿ ನೀರಿನ ಸಮಾನ ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ನಿರ್ದೇಶನ ನೀಡಲು ಒತ್ತಾಯಿಸಿ ತಮಿಳುನಾಡು ವಿಧಾನಸಭೆ ನಿರ್ಣಯ ಅಂಗೀಕರಿಸಿದೆ.

ತಮಿಳುನಾಡು ವಿಧಾನಸಭೆ
ತಮಿಳುನಾಡು ವಿಧಾನಸಭೆ

ಚೆನ್ನೈ (ತಮಿಳುನಾಡು) : ಕಾವೇರಿ ನೀರಿಗಾಗಿ ಸುಪ್ರೀಂ ಕೋರ್ಟ್​ನಲ್ಲಿ ಹೋರಾಡುತ್ತಿರುವ ತಮಿಳುನಾಡು ಸರ್ಕಾರ ಇದೀಗ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಆದೇಶದಂತೆ ನೀರು ಬಿಡಲು ಕರ್ನಾಟಕ ಸರ್ಕಾರಕ್ಕೆ, ಕೇಂದ್ರ ಸರ್ಕಾರ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯವೊಂದನ್ನು ಸರ್ವಾನುಮತದಿಂದ ಸೋಮವಾರ ಅಂಗೀಕರಿಸಿದೆ.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಡಿಸಿದ ನಿರ್ಣಯಕ್ಕೆ ಸರ್ವಪಕ್ಷಗಳು ಒಪ್ಪಿಗೆ ನೀಡಿವೆ. ಕೃಷಿಯ ಮೂಲಧಾರವಾಗಿರುವ ಕಾವೇರಿ ನೀರನ್ನು ಪಡೆಯುವ ಮೂಲಕ, ರೈತರ ಬದುಕು ರಕ್ಷಿಸುವ ನಿರ್ಣಯ ಇದಾಗಿದೆ ಎಂದು ಸರ್ಕಾರ ಹೇಳಿದೆ.

ಒಗ್ಗಟ್ಟಿನ ಮೂಲಕ ನೀರು ಪಡೆಯೋಣ: ವಿಧಾನಸಭೆ ಕಲಾಪದಲ್ಲಿ ಆಡಳಿತಾರೂಢ ಡಿಎಂಕೆ, ಪ್ರಮುಖ ಪ್ರತಿಪಕ್ಷ ಎಐಎಡಿಎಂಕೆ ಸೇರಿದಂತೆ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಧ್ವನಿಯೆತ್ತುವ ಮೂಲಕ ಕರ್ನಾಟಕದಿಂದ ನೀರು ಪಡೆಯೋಣ ಎಂಬ ನಿರ್ಣಯ ತೆಗೆದುಕೊಂಡವು. ನೀರಿನ ಸಮಸ್ಯೆಯ ಬಗ್ಗೆ ನಾವೆಲ್ಲರೂ ತುರ್ತಾಗಿ ಒಂದಾಗುವ ಅಗತ್ಯವಿದೆ. ಕರ್ನಾಟಕದಿಂದ ನೀರನ್ನು ಪಡೆದುಕೊಳ್ಳುವಲ್ಲಿ ಇರುವ ಸವಾಲುಗಳನ್ನು ಒಗ್ಗಟ್ಟಿನ ಹೋರಾಟದ ಮೂಲಕ, ತನ್ನ ನ್ಯಾಯಯುತ ಪಾಲನ್ನು ಪಡೆಯಬೇಕಾಗಿದೆ ಎಂಬುದನ್ನು ಸದನ ಒಪ್ಪಿಕೊಂಡಿತು.

ಜಲಸಂಪನ್ಮೂಲಗಳ ಸಮಾನ ಹಂಚಿಕೆಯ ಬಗ್ಗೆ ಕರ್ನಾಟಕದ ರಾಷ್ಟ್ರೀಯ ಪಕ್ಷಗಳ ಮೇಲೆ ಕೇಂದ್ರ ಸರ್ಕಾರ ಒತ್ತಡ ಹೇರಬೇಕು. ಈ ಬಗ್ಗೆ ಸಂಸತ್ತಿನಲ್ಲಿ ಸಂಸದರು ಧ್ವನಿ ಎತ್ತಬೇಕು ಎಂದು ವಿಪಕ್ಷ ನಾಯಕ ಪಳನಿಸ್ವಾಮಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸ್ಟಾಲಿನ್, ಡಿಎಂಕೆ ಸಂಸದರು ಸಂಸತ್ತಿನಲ್ಲಿ ಕಾವೇರಿ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಟೀಕೆ, ಟಿಪ್ಪಣಿಗಳ ಬದಲಾಗಿ ಎಲ್ಲ ಪಕ್ಷಗಳು ಒಂದಾಗಿ ನೀರು ಪಡೆದುಕೊಳ್ಳಲು ಹೋರಾಟ ನಡೆಸಬೇಕಿದೆ ಎಂದು ಹೇಳಿದರು.

ಕಲಾಪದಿಂದ ಹೊರ ನಡೆದ ಬಿಜೆಪಿ: ಕಾವೇರಿ ನೀರಿಗಾಗಿ ಹೋರಾಟ ನಡೆಸಲು ಎಲ್ಲ ಪಕ್ಷಗಳು ಕೈಜೋಡಿಲು ಮುಂದಾಗಿದ್ದರೆ, ಸದನದಲ್ಲಿ ನೀರಿನ ಸಮಸ್ಯೆಗೆ ಸಂಬಂಧಿಸಿದ ಚರ್ಚೆಗಳು ಮತ್ತು ನಿರ್ಣಯಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಕಲಾಪದಿಂದ ಹೊರನಡೆದರು.

ಕರ್ನಾಟಕದ ವಾದವೇನು?: ಮುಂಗಾರು ಮಳೆಯ ಕೊರತೆಯಿಂದ ಕಾವೇರಿ ಕೊಳ್ಳ ಸೇರಿದಂತೆ ರಾಜ್ಯದಲ್ಲಿ ಬರಗಾಲ ಉಂಟಾಗಿದೆ. ಹೀಗಾಗಿ ಅಣೆಕಟ್ಟೆಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ನಿಗದಿಯಂತೆ ತಮಿಳುನಾಡಿಗೆ ನೀಡು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ವಾದ ಮಂಡಿಸಿದೆ.

ಆದರೆ, ಈ ವಾದವನ್ನು ಕೇಳಿಸಿಕೊಳ್ಳದೇ, ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತು ಸಮಿತಿಯು ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 15 ರವರೆಗೆ ಪ್ರತಿನಿತ್ಯ 15 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಿ ಎಂದು ಆದೇಶಿಸಿದೆ. ಬಳಿಕ ಇದನ್ನು 3 ಸಾವಿರ ಕ್ಯೂಸೆಕ್ ಇಳಿಸಿ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಲಾಗಿದೆ. ಇದರ ವಿರುದ್ಧ ಸರ್ಕಾರ ಸುಪ್ರೀಂ ಕೋರ್ಟ್ ಮತ್ತು ಸಿಡಬ್ಲ್ಯೂಎಂಎಗೆ ಮರುಪರಿಶೀಲನಾ ಅರ್ಜಿಗಳನ್ನು ಸಲ್ಲಿಸಿದೆ. ನೀರು ಹರಿಸುವ ನಿರ್ಧಾರದ ವಿರುದ್ಧ ರೈತರಿಂದ ಭಾರಿ ಪ್ರತಿಭಟನೆಗಳು ನಡೆಯುತ್ತಿವೆ.

ಅಗತ್ಯ ಪ್ರಮಾಣದಲ್ಲಿ ಕಾವೇರಿ ನೀರು ಪೂರೈಕೆಯಾಗದೇ ಭತ್ತದ ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್‌ಗೆ 13,500 ರೂ. ಪರಿಹಾರ ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ.

ಇದನ್ನೂ ಓದಿ: ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆ: ಸಿಎಂ ಸಿದ್ದರಾಮಯ್ಯ

ಚೆನ್ನೈ (ತಮಿಳುನಾಡು) : ಕಾವೇರಿ ನೀರಿಗಾಗಿ ಸುಪ್ರೀಂ ಕೋರ್ಟ್​ನಲ್ಲಿ ಹೋರಾಡುತ್ತಿರುವ ತಮಿಳುನಾಡು ಸರ್ಕಾರ ಇದೀಗ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಆದೇಶದಂತೆ ನೀರು ಬಿಡಲು ಕರ್ನಾಟಕ ಸರ್ಕಾರಕ್ಕೆ, ಕೇಂದ್ರ ಸರ್ಕಾರ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯವೊಂದನ್ನು ಸರ್ವಾನುಮತದಿಂದ ಸೋಮವಾರ ಅಂಗೀಕರಿಸಿದೆ.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಡಿಸಿದ ನಿರ್ಣಯಕ್ಕೆ ಸರ್ವಪಕ್ಷಗಳು ಒಪ್ಪಿಗೆ ನೀಡಿವೆ. ಕೃಷಿಯ ಮೂಲಧಾರವಾಗಿರುವ ಕಾವೇರಿ ನೀರನ್ನು ಪಡೆಯುವ ಮೂಲಕ, ರೈತರ ಬದುಕು ರಕ್ಷಿಸುವ ನಿರ್ಣಯ ಇದಾಗಿದೆ ಎಂದು ಸರ್ಕಾರ ಹೇಳಿದೆ.

ಒಗ್ಗಟ್ಟಿನ ಮೂಲಕ ನೀರು ಪಡೆಯೋಣ: ವಿಧಾನಸಭೆ ಕಲಾಪದಲ್ಲಿ ಆಡಳಿತಾರೂಢ ಡಿಎಂಕೆ, ಪ್ರಮುಖ ಪ್ರತಿಪಕ್ಷ ಎಐಎಡಿಎಂಕೆ ಸೇರಿದಂತೆ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಧ್ವನಿಯೆತ್ತುವ ಮೂಲಕ ಕರ್ನಾಟಕದಿಂದ ನೀರು ಪಡೆಯೋಣ ಎಂಬ ನಿರ್ಣಯ ತೆಗೆದುಕೊಂಡವು. ನೀರಿನ ಸಮಸ್ಯೆಯ ಬಗ್ಗೆ ನಾವೆಲ್ಲರೂ ತುರ್ತಾಗಿ ಒಂದಾಗುವ ಅಗತ್ಯವಿದೆ. ಕರ್ನಾಟಕದಿಂದ ನೀರನ್ನು ಪಡೆದುಕೊಳ್ಳುವಲ್ಲಿ ಇರುವ ಸವಾಲುಗಳನ್ನು ಒಗ್ಗಟ್ಟಿನ ಹೋರಾಟದ ಮೂಲಕ, ತನ್ನ ನ್ಯಾಯಯುತ ಪಾಲನ್ನು ಪಡೆಯಬೇಕಾಗಿದೆ ಎಂಬುದನ್ನು ಸದನ ಒಪ್ಪಿಕೊಂಡಿತು.

ಜಲಸಂಪನ್ಮೂಲಗಳ ಸಮಾನ ಹಂಚಿಕೆಯ ಬಗ್ಗೆ ಕರ್ನಾಟಕದ ರಾಷ್ಟ್ರೀಯ ಪಕ್ಷಗಳ ಮೇಲೆ ಕೇಂದ್ರ ಸರ್ಕಾರ ಒತ್ತಡ ಹೇರಬೇಕು. ಈ ಬಗ್ಗೆ ಸಂಸತ್ತಿನಲ್ಲಿ ಸಂಸದರು ಧ್ವನಿ ಎತ್ತಬೇಕು ಎಂದು ವಿಪಕ್ಷ ನಾಯಕ ಪಳನಿಸ್ವಾಮಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸ್ಟಾಲಿನ್, ಡಿಎಂಕೆ ಸಂಸದರು ಸಂಸತ್ತಿನಲ್ಲಿ ಕಾವೇರಿ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಟೀಕೆ, ಟಿಪ್ಪಣಿಗಳ ಬದಲಾಗಿ ಎಲ್ಲ ಪಕ್ಷಗಳು ಒಂದಾಗಿ ನೀರು ಪಡೆದುಕೊಳ್ಳಲು ಹೋರಾಟ ನಡೆಸಬೇಕಿದೆ ಎಂದು ಹೇಳಿದರು.

ಕಲಾಪದಿಂದ ಹೊರ ನಡೆದ ಬಿಜೆಪಿ: ಕಾವೇರಿ ನೀರಿಗಾಗಿ ಹೋರಾಟ ನಡೆಸಲು ಎಲ್ಲ ಪಕ್ಷಗಳು ಕೈಜೋಡಿಲು ಮುಂದಾಗಿದ್ದರೆ, ಸದನದಲ್ಲಿ ನೀರಿನ ಸಮಸ್ಯೆಗೆ ಸಂಬಂಧಿಸಿದ ಚರ್ಚೆಗಳು ಮತ್ತು ನಿರ್ಣಯಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಕಲಾಪದಿಂದ ಹೊರನಡೆದರು.

ಕರ್ನಾಟಕದ ವಾದವೇನು?: ಮುಂಗಾರು ಮಳೆಯ ಕೊರತೆಯಿಂದ ಕಾವೇರಿ ಕೊಳ್ಳ ಸೇರಿದಂತೆ ರಾಜ್ಯದಲ್ಲಿ ಬರಗಾಲ ಉಂಟಾಗಿದೆ. ಹೀಗಾಗಿ ಅಣೆಕಟ್ಟೆಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ನಿಗದಿಯಂತೆ ತಮಿಳುನಾಡಿಗೆ ನೀಡು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ವಾದ ಮಂಡಿಸಿದೆ.

ಆದರೆ, ಈ ವಾದವನ್ನು ಕೇಳಿಸಿಕೊಳ್ಳದೇ, ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತು ಸಮಿತಿಯು ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 15 ರವರೆಗೆ ಪ್ರತಿನಿತ್ಯ 15 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಿ ಎಂದು ಆದೇಶಿಸಿದೆ. ಬಳಿಕ ಇದನ್ನು 3 ಸಾವಿರ ಕ್ಯೂಸೆಕ್ ಇಳಿಸಿ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಲಾಗಿದೆ. ಇದರ ವಿರುದ್ಧ ಸರ್ಕಾರ ಸುಪ್ರೀಂ ಕೋರ್ಟ್ ಮತ್ತು ಸಿಡಬ್ಲ್ಯೂಎಂಎಗೆ ಮರುಪರಿಶೀಲನಾ ಅರ್ಜಿಗಳನ್ನು ಸಲ್ಲಿಸಿದೆ. ನೀರು ಹರಿಸುವ ನಿರ್ಧಾರದ ವಿರುದ್ಧ ರೈತರಿಂದ ಭಾರಿ ಪ್ರತಿಭಟನೆಗಳು ನಡೆಯುತ್ತಿವೆ.

ಅಗತ್ಯ ಪ್ರಮಾಣದಲ್ಲಿ ಕಾವೇರಿ ನೀರು ಪೂರೈಕೆಯಾಗದೇ ಭತ್ತದ ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್‌ಗೆ 13,500 ರೂ. ಪರಿಹಾರ ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ.

ಇದನ್ನೂ ಓದಿ: ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರು ಪರಿಶೀಲನಾ ಅರ್ಜಿ ಸಲ್ಲಿಕೆ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.