ETV Bharat / bharat

ವಿಡಿಯೋ ಕಾನ್ಫರೆನ್ಸ್​ ವಿಚಾರಣೆ ವೇಳೆ ಮಹಿಳೆಯೊಂದಿಗೆ ಅನುಚಿತ ವರ್ತನೆ ಆರೋಪ: ವಕೀಲ ಅಮಾನತು

author img

By

Published : Dec 22, 2021, 10:18 AM IST

ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಮದ್ರಾಸ್ ಹೈಕೋರ್ಟ್‌ನ ವಕೀಲನೊಬ್ಬನನ್ನು ಅಮಾನತುಗೊಳಿಸಿದ್ದು, ಭಾರತದ ನ್ಯಾಯಾಲಯಗಳು, ನ್ಯಾಯಮಂಡಳಿಗಳು ಮತ್ತು ಇತರ ಪ್ರಾಧಿಕಾರಗಳಲ್ಲಿ ಕಾರ್ಯನಿರ್ವಹಿಸುವುದಕ್ಕೆ ತಡೆ ನೀಡಿದೆ.

TN lawyer suspended from practicing for 'improper' behaviour during virtual hearing
ವಿಡಿಯೋ ಕಾನ್ಫರೆನ್ಸ್​ ವಿಚಾರಣೆ ವೇಳೆ ಮಹಿಳೆಯೊಂದಿಗೆ ಅನುಚಿತ ವರ್ತನೆ: ವಕೀಲನ ಅಮಾನತುಗೊಳಿಸಿದ ಮದ್ರಾಸ್ ಹೈಕೋರ್ಟ್​

ಚೆನ್ನೈ(ತಮಿಳುನಾಡು): ವಿಡಿಯೋ ಕಾನ್ಫರೆನ್ಸ್​ ಮೂಲಕ ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ವೇಳೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮದ್ರಾಸ್ ಹೈಕೋರ್ಟ್‌ ವಕೀಲನೊಬ್ಬನನ್ನು ಅಮಾನತುಗೊಳಿಸಿದೆ.

ಆರ್‌ಡಿ ಸಂತಾನ ಕೃಷ್ಣನ್ ಅವರನ್ನು ಅನುಚಿತ ವರ್ತನೆ ಆರೋಪದ ಮೇಲೆ ಅಮಾನತು ಮಾಡಲಾಗಿದ್ದು, ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿದೆ. ಈ ಶಿಸ್ತುಕ್ರಮ ಪೂರ್ಣಗೊಳ್ಳುವವರೆಗೆ ಅವರು ಭಾರತದ ನ್ಯಾಯಾಲಯಗಳು, ನ್ಯಾಯಮಂಡಳಿಗಳು ಮತ್ತು ಇತರ ಪ್ರಾಧಿಕಾರಗಳಲ್ಲಿ ವಕೀಲರಾಗಿ ಕಾರ್ಯನಿರ್ವಹಿಸುವುದನ್ನು ತಡೆಯಲಾಗಿದೆ ಎಂದು ತಮಿಳುನಾಡು ಮತ್ತು ಪುದುಚೇರಿಯ ಬಾರ್ ಕೌನ್ಸಿಲ್ ಆದೇಶ ನೀಡಿದೆ.

ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶರಾದ ಪಿ.ಎನ್ ಪ್ರಕಾಶ್ ಮತ್ತು ಆರ್.ಹೇಮಲತಾ ಅವರು ಸಂತಾನಕೃಷ್ಣನ್ ವಿರುದ್ಧ ದೂರು ದಾಖಲಿಸಿದ್ದು, ಈ ಕುರಿತು ಕೂಲಂಕಷವಾಗಿ ತನಿಖೆ ನಡೆಸಿ ಡಿಸೆಂಬರ್ 23ರಂದು ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಸೋಮವಾರ ನ್ಯಾಯಾಧೀಶರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣವೊಂದನ್ನು ವಿಚಾರಣೆ ನಡೆಸುತ್ತಿದ್ದಾಗ, ಮಹಿಳೆಯೊಂದಿಗೆ ಸಂತಾನ ಕೃಷ್ಣನ್ ಅನುಚಿತವಾಗಿ ವರ್ತನೆ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಕ್ಲಿಪ್ಪಿಂಗ್ ಪ್ರಸಾರವಾಗದಂತೆ ಕ್ರಮಕೈಗೊಳ್ಳುವಂತೆ ನಗರ ಪೊಲೀಸ್​ ಆಯುಕ್ತರಿಗೂ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿತ್ತು.

ಇದನ್ನೂ ಓದಿ: ಸಿಖ್ಖರ ವಿರುದ್ಧ ಅವಹೇಳನಕಾರಿ ಹೇಳಿಕೆ: ಮುಂಬೈ ಪೊಲೀಸರ ಮುಂದೆ ಹಾಜರಾಗದ ಕಂಗನಾ

ಚೆನ್ನೈ(ತಮಿಳುನಾಡು): ವಿಡಿಯೋ ಕಾನ್ಫರೆನ್ಸ್​ ಮೂಲಕ ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ವೇಳೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮದ್ರಾಸ್ ಹೈಕೋರ್ಟ್‌ ವಕೀಲನೊಬ್ಬನನ್ನು ಅಮಾನತುಗೊಳಿಸಿದೆ.

ಆರ್‌ಡಿ ಸಂತಾನ ಕೃಷ್ಣನ್ ಅವರನ್ನು ಅನುಚಿತ ವರ್ತನೆ ಆರೋಪದ ಮೇಲೆ ಅಮಾನತು ಮಾಡಲಾಗಿದ್ದು, ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿದೆ. ಈ ಶಿಸ್ತುಕ್ರಮ ಪೂರ್ಣಗೊಳ್ಳುವವರೆಗೆ ಅವರು ಭಾರತದ ನ್ಯಾಯಾಲಯಗಳು, ನ್ಯಾಯಮಂಡಳಿಗಳು ಮತ್ತು ಇತರ ಪ್ರಾಧಿಕಾರಗಳಲ್ಲಿ ವಕೀಲರಾಗಿ ಕಾರ್ಯನಿರ್ವಹಿಸುವುದನ್ನು ತಡೆಯಲಾಗಿದೆ ಎಂದು ತಮಿಳುನಾಡು ಮತ್ತು ಪುದುಚೇರಿಯ ಬಾರ್ ಕೌನ್ಸಿಲ್ ಆದೇಶ ನೀಡಿದೆ.

ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶರಾದ ಪಿ.ಎನ್ ಪ್ರಕಾಶ್ ಮತ್ತು ಆರ್.ಹೇಮಲತಾ ಅವರು ಸಂತಾನಕೃಷ್ಣನ್ ವಿರುದ್ಧ ದೂರು ದಾಖಲಿಸಿದ್ದು, ಈ ಕುರಿತು ಕೂಲಂಕಷವಾಗಿ ತನಿಖೆ ನಡೆಸಿ ಡಿಸೆಂಬರ್ 23ರಂದು ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಸೋಮವಾರ ನ್ಯಾಯಾಧೀಶರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಕರಣವೊಂದನ್ನು ವಿಚಾರಣೆ ನಡೆಸುತ್ತಿದ್ದಾಗ, ಮಹಿಳೆಯೊಂದಿಗೆ ಸಂತಾನ ಕೃಷ್ಣನ್ ಅನುಚಿತವಾಗಿ ವರ್ತನೆ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಕ್ಲಿಪ್ಪಿಂಗ್ ಪ್ರಸಾರವಾಗದಂತೆ ಕ್ರಮಕೈಗೊಳ್ಳುವಂತೆ ನಗರ ಪೊಲೀಸ್​ ಆಯುಕ್ತರಿಗೂ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿತ್ತು.

ಇದನ್ನೂ ಓದಿ: ಸಿಖ್ಖರ ವಿರುದ್ಧ ಅವಹೇಳನಕಾರಿ ಹೇಳಿಕೆ: ಮುಂಬೈ ಪೊಲೀಸರ ಮುಂದೆ ಹಾಜರಾಗದ ಕಂಗನಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.