ETV Bharat / bharat

ಟೂಲ್​ಕಿಟ್ ಕೇಸ್​: ಮಾನವ ಹಕ್ಕು ಪ್ರತಿಪಾದಿಸಿ ದಿಶಾಗೆ ಬೆಂಬಲ ವ್ಯಕ್ತಪಡಿಸಿದ ಗ್ರೆಟಾ ಥನ್​ಬರ್ಗ್

author img

By

Published : Feb 20, 2021, 11:44 AM IST

ಶಾಂತಿಯುತ ಪ್ರತಿಭಟನೆ ಹಾಗೂ ಸಭೆ ನಡೆಸುವ ಹಕ್ಕುಗಳು ಪ್ರಜಾಪ್ರಭುತ್ವದ ಮೂಲ ಹಕ್ಕುಗಳಾಗಿರಬೇಕು ಎಂದು ಗ್ರೆಟಾ ಥನ್​ಬರ್ಗ್ ಹೇಳಿದ್ದಾರೆ.

Toolkit Case
ಗ್ರೆಟಾ ಥನ್​ಬರ್ಗ್

ನವದೆಹಲಿ: ರೈತ ಆಂದೋಲನಕ್ಕೆ ಸಂಬಂಧಿಸಿದಂತೆ ಟೂಲ್​ಕಿಟ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪರಿಸರ ಕಾರ್ಯಕರ್ತೆ ದಿಶಾ ರವಿಗೆ ಸ್ವೀಡನ್​ನ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್​ಬರ್ಗ್​ ಬೆಂಬಲ ವ್ಯಕ್ತಪಡಿಸಿದ್ದಾರೆ.

ಫೆಬ್ರವರಿ 13 ರಂದು ಬೆಂಗಳೂರಿನಲ್ಲಿ ದಿಶಾ ರವಿಯನ್ನು ದೆಹಲಿ ಪೊಲೀಸರು ಅರೆಸ್ಟ್ ಮಾಡಿದ್ದರು. ನಿನ್ನೆ ಅವರ ಕಸ್ಟಡಿ ಅವಧಿ ಮುಗಿದಿದ್ದು, ಮೂರು ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಆದೇಶ ಹೊರಡಿಸಿದೆ.

ಇದಕ್ಕೆ ಪ್ರತಿಕ್ರಯಿಸಿರುವ ಗ್ರೆಟಾ ಥನ್​ಬರ್ಗ್, ವಾಕ್ ಸ್ವಾತಂತ್ರ್ಯ, ಶಾಂತಿಯುತ ಪ್ರತಿಭಟನೆ ಹಾಗೂ ಸಭೆ ನಡೆಸುವ ಹಕ್ಕುಗಳು ಚೌಕಾಸಿ ಇಲ್ಲದ ಮಾನವ ಹಕ್ಕುಗಳಾಗಿವೆ. ಇವು ಯಾವುದೇ ಪ್ರಜಾಪ್ರಭುತ್ವದ ಮೂಲಭೂತ ಹಕ್ಕುಗಳಾಗಿರಬೇಕು. ದಿಶಾ ರವಿಯೊಂದಿಗೆ ನಾವಿದ್ದೇವೆ ಎಂದು ಟ್ವೀಟ್​ ಮಾಡಿದ್ದಾರೆ.

ಪ್ರಕರಣ ಹಿನ್ನೆಲೆ

ಭಾರತ ಸರ್ಕಾರದ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸುವ ಕುರಿತ ಮಾಹಿತಿವುಳ್ಳ ಟೂಲ್​ಕಿಟ್ ಅನ್ನು ಗ್ರೆಟಾ ಥನ್​ಬರ್ಗ್ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಟೂಲ್​ಕಿಟ್ ಅನ್ನು ಸಿದ್ಧಪಡಿಸಲು ದಿಶಾ ರವಿ ಜೊತೆ ಶಾಂತನು ಮತ್ತು ನಿಕಿತಾ ಎಂಬವರು ಸಹಾಯ ಮಾಡಿದ್ದರು. ಅಲ್ಲದೇ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಟೂಲ್​ಕಿಟ್​ ಆಧರಿಸಿ ಗಣರಾಜ್ಯೋತ್ಸವ ದಿನದಂದು ಖಲಿಸ್ತಾನ್​ ಪ್ರತ್ಯೇಕತಾವಾದಿ ಗುಂಪುಗಳು ರೈತರೊಂದಿಗೆ ಸೇರಿಕೊಂಡು ಹಿಂಸಾಚಾರ ಎಸಗಿದ್ದಾರೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ನವದೆಹಲಿ: ರೈತ ಆಂದೋಲನಕ್ಕೆ ಸಂಬಂಧಿಸಿದಂತೆ ಟೂಲ್​ಕಿಟ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪರಿಸರ ಕಾರ್ಯಕರ್ತೆ ದಿಶಾ ರವಿಗೆ ಸ್ವೀಡನ್​ನ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್​ಬರ್ಗ್​ ಬೆಂಬಲ ವ್ಯಕ್ತಪಡಿಸಿದ್ದಾರೆ.

ಫೆಬ್ರವರಿ 13 ರಂದು ಬೆಂಗಳೂರಿನಲ್ಲಿ ದಿಶಾ ರವಿಯನ್ನು ದೆಹಲಿ ಪೊಲೀಸರು ಅರೆಸ್ಟ್ ಮಾಡಿದ್ದರು. ನಿನ್ನೆ ಅವರ ಕಸ್ಟಡಿ ಅವಧಿ ಮುಗಿದಿದ್ದು, ಮೂರು ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಆದೇಶ ಹೊರಡಿಸಿದೆ.

ಇದಕ್ಕೆ ಪ್ರತಿಕ್ರಯಿಸಿರುವ ಗ್ರೆಟಾ ಥನ್​ಬರ್ಗ್, ವಾಕ್ ಸ್ವಾತಂತ್ರ್ಯ, ಶಾಂತಿಯುತ ಪ್ರತಿಭಟನೆ ಹಾಗೂ ಸಭೆ ನಡೆಸುವ ಹಕ್ಕುಗಳು ಚೌಕಾಸಿ ಇಲ್ಲದ ಮಾನವ ಹಕ್ಕುಗಳಾಗಿವೆ. ಇವು ಯಾವುದೇ ಪ್ರಜಾಪ್ರಭುತ್ವದ ಮೂಲಭೂತ ಹಕ್ಕುಗಳಾಗಿರಬೇಕು. ದಿಶಾ ರವಿಯೊಂದಿಗೆ ನಾವಿದ್ದೇವೆ ಎಂದು ಟ್ವೀಟ್​ ಮಾಡಿದ್ದಾರೆ.

ಪ್ರಕರಣ ಹಿನ್ನೆಲೆ

ಭಾರತ ಸರ್ಕಾರದ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸುವ ಕುರಿತ ಮಾಹಿತಿವುಳ್ಳ ಟೂಲ್​ಕಿಟ್ ಅನ್ನು ಗ್ರೆಟಾ ಥನ್​ಬರ್ಗ್ ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಟೂಲ್​ಕಿಟ್ ಅನ್ನು ಸಿದ್ಧಪಡಿಸಲು ದಿಶಾ ರವಿ ಜೊತೆ ಶಾಂತನು ಮತ್ತು ನಿಕಿತಾ ಎಂಬವರು ಸಹಾಯ ಮಾಡಿದ್ದರು. ಅಲ್ಲದೇ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಟೂಲ್​ಕಿಟ್​ ಆಧರಿಸಿ ಗಣರಾಜ್ಯೋತ್ಸವ ದಿನದಂದು ಖಲಿಸ್ತಾನ್​ ಪ್ರತ್ಯೇಕತಾವಾದಿ ಗುಂಪುಗಳು ರೈತರೊಂದಿಗೆ ಸೇರಿಕೊಂಡು ಹಿಂಸಾಚಾರ ಎಸಗಿದ್ದಾರೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.