ETV Bharat / bharat

ಟಿಆರ್‌ಎಸ್ ಶಾಸಕರಿಗೆ ಆಮಿಷ ಆರೋಪ: ಪೊಲೀಸರ ಮೆಮೊ ವಜಾಗೊಳಿಸಿದ ಕೋರ್ಟ್​

ಮೊಯಿನಾಬಾದ್ ಪೊಲೀಸರು ಪ್ರಕರಣದಲ್ಲಿ ನಾಲ್ವರನ್ನು ಆರೋಪಿಗಳೆಂದು ಉಲ್ಲೇಖಿಸಿ ಮೆಮೊವನ್ನು(ಜ್ಞಾಪನಾ ಪತ್ರ) ಕೋರ್ಟ್​ಗೆ ಸಲ್ಲಿಸಿದ್ದರು. ಇದನ್ನು ಮಂಗಳವಾರ ಕೋರ್ಟ್​ ವಜಾಗೊಳಿಸಿತು.

author img

By

Published : Dec 6, 2022, 5:30 PM IST

ಟಿಆರ್‌ಎಸ್ ಶಾಸಕರಿಗೆ ಆಮಿಷವೊಡ್ಡಿದ ಆರೋಪ
ಟಿಆರ್‌ಎಸ್ ಶಾಸಕರಿಗೆ ಆಮಿಷವೊಡ್ಡಿದ ಆರೋಪ

ಹೈದರಾಬಾದ್​​: ಟಿಆರ್‌ಎಸ್ ಶಾಸಕರಿಗೆ ಆಮಿಷವೊಡ್ಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಯಿನಾಬಾದ್ ಪೊಲೀಸರು ಮೆಮೊವನ್ನು ಕೋರ್ಟ್​ಗೆ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಮೆಮೊ ವಜಾಗೊಳಿಸಿದೆ. ಬಿಜೆಪಿ ಮುಖಂಡ ಬಿ ಎಲ್ ಸಂತೋಷ್, ಕೇರಳದ ತುಷಾರ್, ಜಗ್ಗುಸ್ವಾಮಿ ಮತ್ತು ಕರೀಂನಗರದ ಶ್ರೀನಿವಾಸ್ ಅವರನ್ನು ಆರೋಪಿಗಳೆಂದು ಉಲ್ಲೇಖಿಸಿ ಮೆಮೊವನ್ನು ಸಲ್ಲಿಸಲಾಗಿತ್ತು. ಕಳೆದ ತಿಂಗಳ 22 ರಂದು ನಾಂಪಲ್ಲಿ ಭ್ರಷ್ಟಾಚಾರ ನಿಗ್ರಹ ಇಲಾಖೆಯ ವಿಶೇಷ ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಇದೀಗ ಮೆಮೊ ವಜಾಗೊಳಿಸಿದೆ.

ಹೈದರಾಬಾದ್​​: ಟಿಆರ್‌ಎಸ್ ಶಾಸಕರಿಗೆ ಆಮಿಷವೊಡ್ಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಯಿನಾಬಾದ್ ಪೊಲೀಸರು ಮೆಮೊವನ್ನು ಕೋರ್ಟ್​ಗೆ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಮೆಮೊ ವಜಾಗೊಳಿಸಿದೆ. ಬಿಜೆಪಿ ಮುಖಂಡ ಬಿ ಎಲ್ ಸಂತೋಷ್, ಕೇರಳದ ತುಷಾರ್, ಜಗ್ಗುಸ್ವಾಮಿ ಮತ್ತು ಕರೀಂನಗರದ ಶ್ರೀನಿವಾಸ್ ಅವರನ್ನು ಆರೋಪಿಗಳೆಂದು ಉಲ್ಲೇಖಿಸಿ ಮೆಮೊವನ್ನು ಸಲ್ಲಿಸಲಾಗಿತ್ತು. ಕಳೆದ ತಿಂಗಳ 22 ರಂದು ನಾಂಪಲ್ಲಿ ಭ್ರಷ್ಟಾಚಾರ ನಿಗ್ರಹ ಇಲಾಖೆಯ ವಿಶೇಷ ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಇದೀಗ ಮೆಮೊ ವಜಾಗೊಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.