ಚೆನ್ನೈ(ತಮಿಳುನಾಡು): ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳಾ ಸಾಫ್ಟ್ವೇರ್ ಇಂಜಿನಿಯರ್ಗಳು ಪ್ರಾಣ ಕಳೆದುಕೊಂಡ ದಾರುಣ ಘಟನೆ ಬುಧವಾರ ರಾತ್ರಿ 11.30ರ ಸುಮಾರಿಗೆ ತಮಿಳುನಾಡಿನಲ್ಲಿ ನಡೆದಿದೆ. ಚೆನ್ನೈನ ಐಟಿ ಕಾರಿಡಾರ್ನ ನವಲೂರಿನಲ್ಲಿರುವ ಹೆಚ್ಸಿಎಲ್ನಲ್ಲಿ ಕೆಲಸ ಮಾಡುತ್ತಿದ್ದ ಎಸ್.ಲಾವಣ್ಯ ಮತ್ತು ಆರ್.ಲಕ್ಷ್ಮಿ ಮೃತರೆಂದು ತಿಳಿದುಬಂದಿದೆ. ಕಂಪೆನಿಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರು ಇವರಿಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ವರ್ಕ್ ಫ್ರಂ ಹೋಮ್ ಎಫೆಕ್ಟ್ಗೆ ಟೆಕ್ಕಿ ಬಲಿ.. ಅತ್ತೆ, ಪತ್ನಿ ಕಿರುಕುಳಕ್ಕೆ ನವವಿವಾಹಿತ ಆತ್ಮಹತ್ಯೆ
ಹೋಂಡಾ ಸಿಟಿ ಕಾರನ್ನು ವೇಗವಾಗಿ ಚಾಲನೆ ಮಾಡಿಕೊಂಡು ಹೋಗ್ತಿದ್ದ ಮೋತೀಶ್ ಕುಮಾರ್ (20) ಅಪಘಾತಕ್ಕೆ ಕಾರಣವಾಗಿದ್ದಾನೆ. ವಾಹನದ ನಿಯಂತ್ರಣ ಕಳೆದುಕೊಂಡಿರುವ ಈತ ಯುವತಿಯರಿಬ್ಬರಿಗೂ ಡಿಕ್ಕಿ ಹೊಡೆದಿದ್ದಾನೆ. ಕಾರು ಈ ಸಂದರ್ಭದಲ್ಲಿ ಗಂಟೆಗೆ 130 ಕಿಮೀ ವೇಗದಲ್ಲಿ ಚಲಿಸುತ್ತಿತ್ತು ಎಂದು ತಿಳಿದು ಬಂದಿದೆ.
ಲಕ್ಷ್ಮೀ ಮೂಲತಃ ಕೇರಳದ ಪಾಲಕ್ಕಾಡ್ನವರು. ಲಾವಣ್ಯ ಆಂಧ್ರಪ್ರದೇಶದ ಚಿತ್ತೂರಿನವರಾಗಿದ್ದಾರೆ. ಅಪಘಾತದಿಂದ ಇಬ್ಬರು ಯುವತಿಯರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.