ETV Bharat / bharat

ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ಹೊತ್ತ ಇನ್ನೂ 3 ವಿಮಾನಗಳು ತಾಯ್ನಾಡಿತ್ತ ಪ್ರಮಾಣ: ಸಚಿವ ಜೈಶಂಕರ್‌

author img

By

Published : Mar 1, 2022, 7:58 AM IST

ಭಾರತೀಯರನ್ನು ಉಕ್ರೇನ್‌ನಿಂದ ಕರೆ ತರುತ್ತಿರುವ 7ನೇ ವಿಮಾನ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ ಹೊರಟಿದ್ದು, ಇಂದು ಮುಂಬೈಗೆ ಆಗಮಿಸಲಿದೆ. ಈ ವಿಮಾನದಲ್ಲಿ 182 ಮಂದಿ ಇದ್ದಾರೆ. 8ನೇ ಹಾಗೂ 9ನೇ ವಿಮಾನಗಳೂ ಕೂಡ ಭಾರತಕ್ಕೆ ಹೊರಟಿವೆ.

Ukraine crisis: Seventh flight with 182 stranded Indians departs from Bucharest
ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ಹೊತ್ತ ಇನ್ನೂ 3 ವಿಮಾನಗಳು ತಾಯ್ನಾಡಿತ್ತ ಪ್ರಮಾಣ - ಸಚಿವ ಜೈಶಂಕರ್‌

ನವದೆಹಲಿ: ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ಏರ್‌ಲಿಫ್ಟ್‌ ಮಾಡುವ ಆರಪೇಷನ್‌ ಗಂಗಾ ಮುಂದುವರೆದಿದ್ದು, 182 ಮಂದಿಯನ್ನು ಹೊತ್ತ 7ನೇ ವಿಮಾನ, 216 ಮಂದಿಯ ಹೊತ್ತ 8ನೇ ವಿಮಾನ ಹಾಗೂ 218 ಮಂದಿಯನ್ನು ಹೊತ್ತ 9ನೇ ವಿಮಾನ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ ಮುಂಬೈನತ್ತ ಹೊರಟಿವೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಸಚಿವರು, 'ಆಪರೇಷನ್ ಗಂಗಾ'ದಡಿ ಮೂರು ವಿಮಾನಗಳು ಭಾರತೀಯ ಪ್ರಜೆಗಳನ್ನು ಹೊತ್ತು ನಿನ್ನೆ ಬುಕಾರೆಸ್ಟ್‌ನಿಂದ ಮುಂಬೈಗೆ ಪ್ರಯಾಣವನ್ನು ಪ್ರಾರಂಭಿಸಿವೆ ಎಂದು ಹೇಳಿದ್ದಾರೆ.

ಉಕ್ರೇನ್ ಬಿಕ್ಕಟ್ಟಿನ ಕುರಿತು ಸೋಮವಾರ ಸಂಜೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್‌ನಲ್ಲಿರುವ ಎಲ್ಲಾ ಭಾರತೀಯರು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ. ಇಡೀ ಸರ್ಕಾರಿ ಯಂತ್ರವು ಹಗಲಿರುಳು ಶ್ರಮಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

ಉಕ್ರೇನ್‌ ಪರಿಸ್ಥಿತಿ ಕುರಿತು ನಿನ್ನೆ ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎರಡನೇ ಉನ್ನತ ಮಟ್ಟದ ಸಭೆ ಇದಾಗಿದೆ. ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ಜನರಲ್ (ನಿವೃತ್ತ) ವಿಕೆ ಸಿಂಗ್ ನೇತೃತ್ವದ ತಂಡಗಳು ಉಕ್ರೇನ್‌ನಲ್ಲಿ ರಷ್ಯಾದ ಸೇನಾ ಕಾರ್ಯಾಚರಣೆಗಳ ಮಧ್ಯೆ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಉಕ್ರೇನ್‌ನ ನೆರೆಯ ದೇಶಗಳಿಗೆ ತೆರಳಲಿದ್ದಾರೆ.

ಫೆಬ್ರವರಿ 24 ರಂದು ಉಕ್ರೇನ್ ಬಿಕ್ಕಟ್ಟಿನ ಕುರಿತು ದೆಹಲಿಯಲ್ಲಿ ಭದ್ರತಾ ಕ್ಯಾಬಿನೆಟ್‌ ಸಮಿತಿ (ಸಿಸಿಎಸ್) ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ವಹಿಸಿದ್ದರು. ಸಂಘರ್ಷ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಮತ್ತು ಭಾರತೀಯ ನಾಗರಿಕರನ್ನು ಮರಳಿ ಕರೆತರಲು ಕೇಂದ್ರ ಸರ್ಕಾರವು 'ಆಪರೇಷನ್ ಗಂಗಾ' ಯೋಜನೆಯನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: ಉಕ್ರೇನ್​​​- ರಷ್ಯಾ ನಡುವೆ ಯಶಸ್ವಿಯಾಗದ ಮಾತುಕತೆ.. ಆದರೂ ಸಂಧಾನಕ್ಕೆ ಕೆಲ ಅಂಶಗಳನ್ನು ಕಂಡುಕೊಂಡ ಉಭಯ ರಾಷ್ಟ್ರಗಳು

ನವದೆಹಲಿ: ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ಏರ್‌ಲಿಫ್ಟ್‌ ಮಾಡುವ ಆರಪೇಷನ್‌ ಗಂಗಾ ಮುಂದುವರೆದಿದ್ದು, 182 ಮಂದಿಯನ್ನು ಹೊತ್ತ 7ನೇ ವಿಮಾನ, 216 ಮಂದಿಯ ಹೊತ್ತ 8ನೇ ವಿಮಾನ ಹಾಗೂ 218 ಮಂದಿಯನ್ನು ಹೊತ್ತ 9ನೇ ವಿಮಾನ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ ಮುಂಬೈನತ್ತ ಹೊರಟಿವೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಸಚಿವರು, 'ಆಪರೇಷನ್ ಗಂಗಾ'ದಡಿ ಮೂರು ವಿಮಾನಗಳು ಭಾರತೀಯ ಪ್ರಜೆಗಳನ್ನು ಹೊತ್ತು ನಿನ್ನೆ ಬುಕಾರೆಸ್ಟ್‌ನಿಂದ ಮುಂಬೈಗೆ ಪ್ರಯಾಣವನ್ನು ಪ್ರಾರಂಭಿಸಿವೆ ಎಂದು ಹೇಳಿದ್ದಾರೆ.

ಉಕ್ರೇನ್ ಬಿಕ್ಕಟ್ಟಿನ ಕುರಿತು ಸೋಮವಾರ ಸಂಜೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್‌ನಲ್ಲಿರುವ ಎಲ್ಲಾ ಭಾರತೀಯರು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ. ಇಡೀ ಸರ್ಕಾರಿ ಯಂತ್ರವು ಹಗಲಿರುಳು ಶ್ರಮಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

ಉಕ್ರೇನ್‌ ಪರಿಸ್ಥಿತಿ ಕುರಿತು ನಿನ್ನೆ ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎರಡನೇ ಉನ್ನತ ಮಟ್ಟದ ಸಭೆ ಇದಾಗಿದೆ. ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ಜನರಲ್ (ನಿವೃತ್ತ) ವಿಕೆ ಸಿಂಗ್ ನೇತೃತ್ವದ ತಂಡಗಳು ಉಕ್ರೇನ್‌ನಲ್ಲಿ ರಷ್ಯಾದ ಸೇನಾ ಕಾರ್ಯಾಚರಣೆಗಳ ಮಧ್ಯೆ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಉಕ್ರೇನ್‌ನ ನೆರೆಯ ದೇಶಗಳಿಗೆ ತೆರಳಲಿದ್ದಾರೆ.

ಫೆಬ್ರವರಿ 24 ರಂದು ಉಕ್ರೇನ್ ಬಿಕ್ಕಟ್ಟಿನ ಕುರಿತು ದೆಹಲಿಯಲ್ಲಿ ಭದ್ರತಾ ಕ್ಯಾಬಿನೆಟ್‌ ಸಮಿತಿ (ಸಿಸಿಎಸ್) ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ವಹಿಸಿದ್ದರು. ಸಂಘರ್ಷ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಮತ್ತು ಭಾರತೀಯ ನಾಗರಿಕರನ್ನು ಮರಳಿ ಕರೆತರಲು ಕೇಂದ್ರ ಸರ್ಕಾರವು 'ಆಪರೇಷನ್ ಗಂಗಾ' ಯೋಜನೆಯನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: ಉಕ್ರೇನ್​​​- ರಷ್ಯಾ ನಡುವೆ ಯಶಸ್ವಿಯಾಗದ ಮಾತುಕತೆ.. ಆದರೂ ಸಂಧಾನಕ್ಕೆ ಕೆಲ ಅಂಶಗಳನ್ನು ಕಂಡುಕೊಂಡ ಉಭಯ ರಾಷ್ಟ್ರಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.