ಶ್ರೀನಗರ(ಜಮ್ಮು ಕಾಶ್ಮೀರ): ಕಾಶ್ಮೀರದಲ್ಲಿ ಸರಪಂಚ್ಗಳ ಮೇಲಿನ ಭಯೋತ್ಪಾದಕ ದಾಳಿ ಸರಣಿ ಮುಂದುವರೆದಿದೆ. ಕೆಲ ದಿನಗಳ ಹಿಂದಷ್ಟೇ ಸರಪಂಚ್ ಮೇಲೆ ದಾಳಿಯ ವರದಿಯಾಗಿದ್ದು, ಇದೀಗ ಶ್ರೀನಗರದ ಖೋನ್ಮೋಹ್ ಪ್ರದೇಶದಲ್ಲಿ ಮತ್ತೊಬ್ಬ ಸರಪಂಚ್ನನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ.
ಸಂಜೆ 6.30ರ ಸುಮಾರಿಗೆ ಘಟನೆ ನಡೆದಿದೆ. ಹತ್ಯೆಯಾದ ಸರಪಂಚ್ನನ್ನು ಸಮೀರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ.
ಶ್ರೀನಗರ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಹಂತಕರನ್ನು ಹಿಡಿಯಲು ತನಿಖೆ ಆರಂಭಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ನಿಗೂಢ ಸ್ಫೋಟ: ಓರ್ವ ಸಾವು, 14 ಮಂದಿಗೆ ಗಾಯ