ETV Bharat / bharat

SP ತಂತ್ರಕ್ಕೆ BJP​​ ಪ್ರತಿತಂತ್ರ.. ಅಖಿಲೇಶ್ ವಿರುದ್ಧ ಕೇಂದ್ರ ಮಂತ್ರಿ ಕಣಕ್ಕೆ..

author img

By

Published : Jan 31, 2022, 3:43 PM IST

ಕರ್ಹಾಲ್​ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಉದ್ದೇಶದಿಂದ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿದಿದ್ದು, ಅಖಿಲೇಶ್ ಯಾದವ್​ಗೆ ಟಾಂಗ್ ನೀಡಲು ಸಜ್ಜಾಗಿದ್ದಾರೆ..

BJP fields Union Minister SP Singh Baghel against Akhilesh
BJP fields Union Minister SP Singh Baghel against Akhilesh

ಲಖನೌ(ಉತ್ತರ ಪ್ರದೇಶ): ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್​​ ಮೈನ್​ಪುರಿ ಜಿಲ್ಲೆಯ ಕರ್ಹಾಲ್ ವಿಧಾನಸಭೆ​ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ತಂತ್ರಕ್ಕೆ ಪ್ರತಿತಂತ್ರ ರೂಪಿಸಿರುವ ಆಡಳಿತ ಪಕ್ಷ ಬಿಜೆಪಿ ಇದೀಗ ಕೇಂದ್ರ ಸಚಿವರಿಗೆ ಟಿಕೆಟ್ ನೀಡುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್​ನಲ್ಲಿ ಸಚಿವರಾಗಿರುವ ಎಸ್​​ಪಿ ಸಿಂಗ್​ ಬಾಘೇಲ್​ ಉತ್ತರಪ್ರದೇಶದಲ್ಲಿ ಪ್ರಬಲ ದಲಿತ ನಾಯಕರಾಗಿದ್ದು, ಆಗ್ರಾ ಲೋಕಸಭೆ ಕ್ಷೇತ್ರದ ಸಂಸದರಾಗಿ ಈ ಹಿಂದೆ ಆಯ್ಕೆಯಾಗಿದ್ದರು. ಇದೀಗ ಅಖಿಲೇಶ್ ಯಾದವ್​ ವಿರುದ್ಧ ಇವರನ್ನ ಕಣಕ್ಕಿಳಿಸಲಾಗಿದೆ.

ಇದನ್ನೂ ಓದಿರಿ: ಯುಪಿ ಚುನಾವಣೆಯಲ್ಲಿ ಅಖಿಲೇಶ್​ ಯಾದವ್​ ಸ್ಪರ್ಧೆ.. ಕರ್ಹಾಲ್​ ಕ್ಷೇತ್ರದಿಂದ ಅಖಾಡಕ್ಕಿಳಿದ SP ಸಂಸದ

ಕರ್ಹಾಲ್​ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಉದ್ದೇಶದಿಂದ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿದಿದ್ದು, ಅಖಿಲೇಶ್ ಯಾದವ್​ಗೆ ಟಾಂಗ್ ನೀಡಲು ಸಜ್ಜಾಗಿದ್ದಾರೆ.

ಪೂರ್ವ ಉತ್ತರ ಪ್ರದೇಶದ ಅಜಂಗಢದಿಂದ ಲೋಕಸಭೆ ಸಂಸದರಾಗಿರುವ ಅಖಿಲೇಶ್ ಯಾದವ್​​, ಈವರೆಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ. ಆದರೆ, ಇದೇ ಮೊದಲ ಸಲ ಅವರು ಕಣಕ್ಕಿಳಿದಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಲಖನೌ(ಉತ್ತರ ಪ್ರದೇಶ): ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್​​ ಮೈನ್​ಪುರಿ ಜಿಲ್ಲೆಯ ಕರ್ಹಾಲ್ ವಿಧಾನಸಭೆ​ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ತಂತ್ರಕ್ಕೆ ಪ್ರತಿತಂತ್ರ ರೂಪಿಸಿರುವ ಆಡಳಿತ ಪಕ್ಷ ಬಿಜೆಪಿ ಇದೀಗ ಕೇಂದ್ರ ಸಚಿವರಿಗೆ ಟಿಕೆಟ್ ನೀಡುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್​ನಲ್ಲಿ ಸಚಿವರಾಗಿರುವ ಎಸ್​​ಪಿ ಸಿಂಗ್​ ಬಾಘೇಲ್​ ಉತ್ತರಪ್ರದೇಶದಲ್ಲಿ ಪ್ರಬಲ ದಲಿತ ನಾಯಕರಾಗಿದ್ದು, ಆಗ್ರಾ ಲೋಕಸಭೆ ಕ್ಷೇತ್ರದ ಸಂಸದರಾಗಿ ಈ ಹಿಂದೆ ಆಯ್ಕೆಯಾಗಿದ್ದರು. ಇದೀಗ ಅಖಿಲೇಶ್ ಯಾದವ್​ ವಿರುದ್ಧ ಇವರನ್ನ ಕಣಕ್ಕಿಳಿಸಲಾಗಿದೆ.

ಇದನ್ನೂ ಓದಿರಿ: ಯುಪಿ ಚುನಾವಣೆಯಲ್ಲಿ ಅಖಿಲೇಶ್​ ಯಾದವ್​ ಸ್ಪರ್ಧೆ.. ಕರ್ಹಾಲ್​ ಕ್ಷೇತ್ರದಿಂದ ಅಖಾಡಕ್ಕಿಳಿದ SP ಸಂಸದ

ಕರ್ಹಾಲ್​ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಉದ್ದೇಶದಿಂದ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿದಿದ್ದು, ಅಖಿಲೇಶ್ ಯಾದವ್​ಗೆ ಟಾಂಗ್ ನೀಡಲು ಸಜ್ಜಾಗಿದ್ದಾರೆ.

ಪೂರ್ವ ಉತ್ತರ ಪ್ರದೇಶದ ಅಜಂಗಢದಿಂದ ಲೋಕಸಭೆ ಸಂಸದರಾಗಿರುವ ಅಖಿಲೇಶ್ ಯಾದವ್​​, ಈವರೆಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ. ಆದರೆ, ಇದೇ ಮೊದಲ ಸಲ ಅವರು ಕಣಕ್ಕಿಳಿದಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.