ಇಟಾ(ಉತ್ತರ ಪ್ರದೇಶ): ಢಾಬಾವೊಂದರಲ್ಲಿ ಚೆನ್ನಾಗಿ ತಿಂದು ಪೊಲೀಸ್ ಅಧಿಕಾರಿಗಳಿಬ್ಬರು ಬಿಲ್ ನೀಡಲು ಹಿಂದೇಟು ಹಾಕಿದ್ದು, ಈ ವೇಳೆ ಪ್ರಶ್ನೆ ಮಾಡಿರುವ 10 ಜನರ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡಿ ಬಂಧಿಸಿ, ಜೈಲಿಗಟ್ಟಿದ್ದಾರೆ.
ಉತ್ತರ ಪ್ರದೇಶ ಇಟಾದ ಕೊಟ್ವಾಲಿ ಗ್ರಾಮೀಣ ಪೊಲೀಸ್ ಠಾಣೆಯ ಸಂತೋಷ್ ಕುಮಾರ್ ಮತ್ತು ಶೈಲೇಂದ್ರ ಯಾದವ್ ಎಂಬ ಇಬ್ಬರು ಪೊಲೀಸರು ಈ ಕೃತ್ಯ ಕೈಗೊಂಡಿದ್ದಾರೆ. ಊಟ ಸೇವನೆ ಮಾಡಿದ ಬಳಿಕ ಹಣ ಪಾವತಿ ಮಾಡಲು ನಿರಾಕರಿಸಿದ್ದು, ಇದು ವಾಗ್ವಾದಕ್ಕೆ ಕಾರಣವಾಗಿದೆ. ಹೀಗಾಗಿ ಅಲ್ಲಿ ಕೆಲಸ ಮಾಡುತ್ತಿದ್ದ 10 ಮಂದಿ ವಿರುದ್ಧ ನಕಲಿ ಗ್ಯಾಂಗ್ ಲೂಟಿ ಪ್ರಕರಣ ದಾಖಲು ಮಾಡಿ, ಜೈಲಿಗೆ ಕಳುಹಿಸಿದ್ದಾರೆ.
ಇದನ್ನೂ ಓದಿ: 5 ಕೋಟಿ ಜನರಿಗೆ ಕೋವಿಡ್ ವ್ಯಾಕ್ಸಿನ್ ನೀಡಿದ ಭಾರತ!
ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸ್ ಅಧಿಕಾರಿಗಳ ವಿರುದ್ಧ ಢಾಬಾದ ಮಾಲೀಕರು ದೂರು ದಾಖಲು ಮಾಡಿದ್ದು, ಲಂಚ ನೀಡುವಂತೆ ಬೇಡಿಕೆ ಸಹ ಇಟ್ಟಿದ್ದಾರೆ ಎಂದಿದ್ದಾರೆ.ಇದರ ಬಗ್ಗೆ ತನಿಖೆ ಆರಂಭಗೊಂಡಿದ್ದು, ಅಪರಾಧ ವಿಭಾಗದ ಎಸ್ಪಿ ರಾಹುಲ್ ಕುಮಾರ್ ನೋಡಿಕೊಳ್ಳುತ್ತಿದ್ದಾರೆ. ಈ ಪ್ರಕರಣದಲ್ಲಿ ಜನರನ್ನ ನಕಲಿ ರೀತಿಯಲ್ಲಿ ಜೈಲಿಗೆ ಕಳುಹಿಸಿದ್ರೆ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.