ETV Bharat / bharat

ಸೋಮವಾರದಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ವ್ಯಾಕ್ಸಿನ್​​: ಕೇಜ್ರಿವಾಲ್​ ಘೋಷಣೆ

author img

By

Published : May 1, 2021, 7:21 PM IST

18 ವರ್ಷ ಮೇಲ್ಪಟ್ಟವರಿಗೆ ಸೋಮವಾರದಿಂದ ಕೊರೊನಾ ವ್ಯಾಕ್ಸಿನ್​ ಲಸಿಕೆ ನೀಡಲಾಗುವುದು ಎಂದು ದೆಹಲಿ ಸಿಎಂ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.

Arvind Kejriwal
Arvind Kejriwal

ನವದೆಹಲಿ: ದೇಶದಲ್ಲಿ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ವ್ಯಾಕ್ಸಿನ್​ ನೀಡುವ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ಆದರೆ, ಲಸಿಕೆಯ ಕೊರತೆಯಿಂದಾಗಿ ಅನೇಕ ರಾಜ್ಯಗಳಲ್ಲಿ ವ್ಯಾಕ್ಸಿನೇಷನ್​​ ಕಾರ್ಯಕ್ರಮ ಪ್ರಾರಂಭಗೊಂಡಿಲ್ಲ. ಸೋಮವಾರದಿಂದ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡುವುದಾಗಿ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.

ಕೇಂದ್ರ ಸರ್ಕಾರ ಅನೇಕ ರಾಜ್ಯಗಳಿಗೆ ವ್ಯಾಕ್ಸಿನ್​ ರಿಲೀಸ್ ಮಾಡಿರುವ ಕಾರಣ ಈ ಅಭಿಯಾನಕ್ಕೆ ಸೋಮವಾರದಿಂದ ಚಾಲನೆ ಸಿಗುವ ಸಾಧ್ಯತೆ ಇದೆ. ಇದೀಗ ತಮಗೆ 4.5 ಲಕ್ಷ ಕೋವಿಡ್​ ಡೋಸ್​ ಲಭ್ಯವಾಗಿದ್ದು, ಸೋಮವಾರದಿಂದ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್​ ನೀಡಲಾಗುವುದು ಎಂದು ದೆಹಲಿ ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಇನ್ನೂ ಒಂದು ವಾರ ಲಾಕ್​ಡೌನ್​ ವಿಸ್ತರಣೆ: ಕೇಜ್ರಿವಾಲ್ ಘೋಷಣೆ

ಕೋವಿಡ್ ಲಸಿಕೆ ಕೊರತೆಯಿಂದಾಗಿ ದೆಹಲಿ, ಮಹಾರಾಷ್ಟ್ರ, ತಮಿಳುನಾಡು, ಮಧ್ಯಪ್ರದೇಶ, ಕರ್ನಾಟಕ, ಪಶ್ಚಿಮ ಬಂಗಾಳ, ರಾಜಸ್ಥಾನ, ಜಾರ್ಖಂಡ್​ ಹಾಗೂ ಪಂಜಾಬ್​ನಲ್ಲಿ ಈ ಅಭಿಯಾನಕ್ಕೆ ಚಾಲನೆ ಸಿಕ್ಕರೂ ಲಸಿಕೆ ಲಭ್ಯವಾಗುತ್ತಿಲ್ಲ. ಹೀಗಾಗಿ 18 ವರ್ಷ ಮೇಲ್ಟಟ್ಟವರಿಗೆ ವ್ಯಾಕ್ಸಿನೇಷನ್​ ನೀಡುವ ಕಾರ್ಯ ವಿಳಂಬವಾಗುವ ಸಾಧ್ಯತೆ ದಟ್ಟವಾಗಿದೆ.

ದೆಹಲಿಯಲ್ಲಿ ನಿತ್ಯ ಕೋವಿಡ್​ ಸೋಂಕಿತ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿರುವ ಕಾರಣ ಇದೀಗ ಮತ್ತೊಂದು ವಾರ ಲಾಕ್​ಡೌನ್ ಘೋಷಣೆ ಮಾಡಲಾಗಿದ್ದು, ಕೇಜ್ರಿವಾಲ್ ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ನವದೆಹಲಿ: ದೇಶದಲ್ಲಿ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ವ್ಯಾಕ್ಸಿನ್​ ನೀಡುವ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ಆದರೆ, ಲಸಿಕೆಯ ಕೊರತೆಯಿಂದಾಗಿ ಅನೇಕ ರಾಜ್ಯಗಳಲ್ಲಿ ವ್ಯಾಕ್ಸಿನೇಷನ್​​ ಕಾರ್ಯಕ್ರಮ ಪ್ರಾರಂಭಗೊಂಡಿಲ್ಲ. ಸೋಮವಾರದಿಂದ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡುವುದಾಗಿ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.

ಕೇಂದ್ರ ಸರ್ಕಾರ ಅನೇಕ ರಾಜ್ಯಗಳಿಗೆ ವ್ಯಾಕ್ಸಿನ್​ ರಿಲೀಸ್ ಮಾಡಿರುವ ಕಾರಣ ಈ ಅಭಿಯಾನಕ್ಕೆ ಸೋಮವಾರದಿಂದ ಚಾಲನೆ ಸಿಗುವ ಸಾಧ್ಯತೆ ಇದೆ. ಇದೀಗ ತಮಗೆ 4.5 ಲಕ್ಷ ಕೋವಿಡ್​ ಡೋಸ್​ ಲಭ್ಯವಾಗಿದ್ದು, ಸೋಮವಾರದಿಂದ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್​ ನೀಡಲಾಗುವುದು ಎಂದು ದೆಹಲಿ ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಇನ್ನೂ ಒಂದು ವಾರ ಲಾಕ್​ಡೌನ್​ ವಿಸ್ತರಣೆ: ಕೇಜ್ರಿವಾಲ್ ಘೋಷಣೆ

ಕೋವಿಡ್ ಲಸಿಕೆ ಕೊರತೆಯಿಂದಾಗಿ ದೆಹಲಿ, ಮಹಾರಾಷ್ಟ್ರ, ತಮಿಳುನಾಡು, ಮಧ್ಯಪ್ರದೇಶ, ಕರ್ನಾಟಕ, ಪಶ್ಚಿಮ ಬಂಗಾಳ, ರಾಜಸ್ಥಾನ, ಜಾರ್ಖಂಡ್​ ಹಾಗೂ ಪಂಜಾಬ್​ನಲ್ಲಿ ಈ ಅಭಿಯಾನಕ್ಕೆ ಚಾಲನೆ ಸಿಕ್ಕರೂ ಲಸಿಕೆ ಲಭ್ಯವಾಗುತ್ತಿಲ್ಲ. ಹೀಗಾಗಿ 18 ವರ್ಷ ಮೇಲ್ಟಟ್ಟವರಿಗೆ ವ್ಯಾಕ್ಸಿನೇಷನ್​ ನೀಡುವ ಕಾರ್ಯ ವಿಳಂಬವಾಗುವ ಸಾಧ್ಯತೆ ದಟ್ಟವಾಗಿದೆ.

ದೆಹಲಿಯಲ್ಲಿ ನಿತ್ಯ ಕೋವಿಡ್​ ಸೋಂಕಿತ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿರುವ ಕಾರಣ ಇದೀಗ ಮತ್ತೊಂದು ವಾರ ಲಾಕ್​ಡೌನ್ ಘೋಷಣೆ ಮಾಡಲಾಗಿದ್ದು, ಕೇಜ್ರಿವಾಲ್ ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.