ETV Bharat / bharat

ಅವಳಿ ಸಹೋದರಿಯರು ನಾಪತ್ತೆ: ಮಕ್ಕಳನ್ನು ಪತ್ತೆ ಮಾಡುವಂತೆ ಸಿಎಂಗೆ ಪತ್ರ ಬರೆದ ತಂದೆ

author img

By

Published : Apr 8, 2023, 2:33 PM IST

ನನ್ನ ಮಕ್ಕಳನ್ನು ಹುಡುಕಿಕೊಡಿ..51ದಿನಗಳಿಂದ ನಿಗೂಢವಾಗಿ ಕಾಣೆಯಾಗಿರುವ ಮಕ್ಕಳನ್ನು ಪತ್ತೆ ಮಾಡುವಂತೆ ಚಿಮನ್‌ಭಾಯ್ ವಾಂಕರ್(ತಂದೆ) ಎಂಬುವವರು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್​ ಅವರಿಗೆ ಪತ್ರ ಬರೆದಿದ್ದಾರೆ.

Vadodara Twin sisters Missing
ನಾಪತ್ತೆಯಾದ ಅವಳಿ ಸಹೋದರಿಯರು

ವಡೋದರಾ(ಗುಜರಾತ್): ವಡೋದರದ ಹರಾನಿ ಪ್ರದೇಶದಲ್ಲಿ ವಾಸಿಸುತ್ತಿದ್ದ 24 ವರ್ಷದ ಅವಳಿ ಸಹೋದರಿಯರು ಕಳೆದ 51 ದಿನಗಳಿಂದ ನಾಪತ್ತೆಯಾಗಿದ್ದಾರೆ. ಸಾರಿಕಾ ಹಾಗೂ ಶೀತಲ ನಾಪತ್ತೆಯಾದವರು. ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಹುಡುಕಿಕೊಡುವಂತೆ ಇವರ ತಂದೆ ಚಿಮನ್‌ಭಾಯ್ ವಾಂಕರ್ ಎಂಬುವವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಪೊಲೀಸರಿಗೆ ದೂರು ನೀಡಿದರೂ ಸಮಾಧಾನಕರ ಉತ್ತರ ಸಿಗದ ಕಾರಣ ಮುಖ್ಯಮಂತ್ರಿಗೆ ಲಿಖಿತ ಮನವಿ ಸಲ್ಲಿಸಲಾಗಿದೆ. ಆದಷ್ಟು ಬೇಗ ಹೆಣ್ಣು ಮಕ್ಕಳನ್ನು ಪತ್ತೆ ಮಾಡುವಂತೆ ಮುಖ್ಯಮಂತ್ರಿ ಹಾಗೂ ರಾಜ್ಯ ಗೃಹ ಸಚಿವರಿಗೆ ಅವರು ಮನವಿ ಮಾಡಿದ್ದಾರೆ.

ನಗರದ ಹರಾನಿ ಪ್ರದೇಶದ ಮೋಟ್‌ನಾಥ್ ರೆಸಿಡೆನ್ಸಿಯಲ್ಲಿ ವಾಸಿಸುತ್ತಿದ್ದ ನೇಕಾರ ಕುಟುಂಬದ ಇಬ್ಬರು ಅವಳಿ ಸಹೋದರಿಯರು ದಿಢೀರ್ ನಾಪತ್ತೆಯಾಗಿದ್ದು, ಕುಟುಂಬದವರು ಆತಂಕಕ್ಕೆ ಒಳಗಾಗಿದ್ದಾರೆ. ಇಬ್ಬರ ಪೈಕಿ ಒಬ್ಬ ಸಹೋದರಿ ಎಂಎಸ್ ಯೂನಿವರ್ಸಿಟಿಯಲ್ಲಿ ಓದುತ್ತಿದ್ದರೆ, ಮತ್ತೊಬ್ಬ ಸಹೋದರಿ ಎಸಿಡಿಟಿ ಕಾಲೇಜಿನಲ್ಲಿ ಓದುತ್ತಿದ್ದಳು. ಕಳೆದ ಫೆ.17 ರಂದು ಇಬ್ಬರೂ ಸಹೋದರಿಯರು ಕಾಲೇಜು ವ್ಯಾಸಂಗಕ್ಕೆ ಹೋಗಿದ್ದು, ಸಂಜೆಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಭಾರಿ ಹುಡುಕಾಟ ನಡೆಸಿದ್ದಾರೆ. ಇವರ ಬಗ್ಗೆ ಸುಳಿವು ಸಿಗದ ಕಾರಣ ಹರಾನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.

ಸಿಸಿಟಿವಿ ದೃಶ್ಯ ಪರಿಶೀಲನೆ: ಆದರೆ ಸಯಾಜಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಪೊಲೀಸರು ಮನೆಯವರಿಗೆ ತಿಳಿಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಕಾಣೆಯಾಗಿರುವ ಬಗ್ಗೆ ಸಯಾಜಿಗಂಜ್ ಪೊಲೀಸ್ ಠಾಣೆಯಲ್ಲಿ ಫೆ.17 ರಂದು ದೂರು ದಾಖಲಿಸಿದ್ದಾರೆ. ನಾಪತ್ತೆ ದೂರು ಸ್ವೀಕರಿಸಿದ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಎಂಎಸ್ ವಿಶ್ವವಿದ್ಯಾಲಯದ ಸಿಸಿಟಿವಿ ದೃಶ್ಯಾವಳಿಗಳನ್ನೂ ಪೊಲೀಸರು ಪರಿಶೀಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಸಹೋದರಿಯರಿಬ್ಬರೂ ಕಾಲೇಜು ಬಿಟ್ಟು ಹೋಗುತ್ತಿರುವುದು ಕಂಡು ಬಂದಿದೆ. ಆದರೆ ನಂತರ ಎಲ್ಲಿಗೆ ಹೋಗುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಇರಲಿಲ್ಲ.

ಮುಖ್ಯಮಂತ್ರಿಗೆ ಪತ್ರ: ತಂದೆ ಚಿಮನ್‌ಭಾಯ್ ವಾಂಕರ್ ಅವರ ಆರೋಪದ ಮೇಲೆ ಪೊಲೀಸರು ಕಿಶನ್ ಸೋಲಂಕಿ ಎಂಬ ಯುವಕನನ್ನು ವಿಚಾರಣೆಗೆ ಒಳಪಡಿಸಿದರು. ಆದರೆ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿಲ್ಲ. ಪೊಲೀಸ್ ತನಿಖೆಯಲ್ಲಿ ಸಕಾರಾತ್ಮಕ ಉತ್ತರ ಸಿಗದ ಹಿನ್ನೆಲೆ ಚಿಮನ್‌ಭಾಯ್ ಅವರು ಮುಖ್ಯಮಂತ್ರಿ, ಗೃಹ ಖಾತೆ ರಾಜ್ಯ ಸಚಿವರು, ಪೊಲೀಸ್ ಮಹಾನಿರ್ದೇಶಕರು ಮತ್ತು ವಡೋದರಾ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

51 ದಿನ ಕಳೆದರೂ ಈ ಸಹೋದರಿಯರ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ.ನಗರ ಪೊಲೀಸ್ ಆಯುಕ್ತರು ಸಂಪೂರ್ಣ ತನಿಖೆಯನ್ನು ಅಪರಾಧ ವಿಭಾಗಕ್ಕೆ ಹಸ್ತಾಂತರಿಸಿದ್ದಾರೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ರಾಜ್ಯ ಗೃಹ ಸಚಿವ ಹರ್ಷ ಶಾಂಘ್ವಿ ಕೂಡ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಕಳೆದ 15 ದಿನಗಳಿಂದ ಅಪರಾಧ ವಿಭಾಗದ ಪೊಲೀಸರು ಅವಳಿ ಸಹೋದರಿಯರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವರನ್ನು ಪತ್ತೆಹಚ್ಚಲು ಕ್ಯಾಲಿಫೋರ್ನಿಯಾದಿಂದ ಅವರ ವಾಟ್ಸಾಪ್ ಡೇಟಾವನ್ನು ಹುಡುಕಲಾಗಿದೆ ಎಂಬ ಮಾಹಿತಿಯನ್ನು ಅಪರಾಧ ವಿಭಾಗ ನೀಡಿದೆ. ಸಾರಿಕಾ ಮತ್ತು ಶೀತಲ್ ಅವರು ತಮ್ಮ ವೈಫೈನಿಂದ ವಾಟ್ಸಾಪ್ ಡೇಟಾವನ್ನು ಬಳಸುತ್ತಿರುವ ಕಾರಣ ಮಾಹಿತಿಯನ್ನು ಕ್ಯಾಲಿಫೋರ್ನಿಯಾದಿಂದ ಮಾತ್ರ ಪಡೆಯಬಹುದು. ಹಾಗಾಗಿ ಲಿಖಿತವಾಗಿ ಮಾಹಿತಿ ಕಳುಹಿಸುವಂತೆ ಪೊಲೀಸರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ತಂದೆ ಚಿಮನ್ ವಾಂಕರ್ ಇಬ್ಬರು ಹೆಣ್ಣು ಮಕ್ಕಳನ್ನು ಭೇಟಿಯಾಗದೇ ತುಂಬಾ ನೊಂದಿದ್ದು, ಆದಷ್ಟು ಬೇಗ ಮನೆಗೆ ಮರಳುವಂತೆ ಮನವಿ ಮಾಡಿದ್ದಾರೆ.

ವಡೋದರಾ(ಗುಜರಾತ್): ವಡೋದರದ ಹರಾನಿ ಪ್ರದೇಶದಲ್ಲಿ ವಾಸಿಸುತ್ತಿದ್ದ 24 ವರ್ಷದ ಅವಳಿ ಸಹೋದರಿಯರು ಕಳೆದ 51 ದಿನಗಳಿಂದ ನಾಪತ್ತೆಯಾಗಿದ್ದಾರೆ. ಸಾರಿಕಾ ಹಾಗೂ ಶೀತಲ ನಾಪತ್ತೆಯಾದವರು. ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಹುಡುಕಿಕೊಡುವಂತೆ ಇವರ ತಂದೆ ಚಿಮನ್‌ಭಾಯ್ ವಾಂಕರ್ ಎಂಬುವವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಪೊಲೀಸರಿಗೆ ದೂರು ನೀಡಿದರೂ ಸಮಾಧಾನಕರ ಉತ್ತರ ಸಿಗದ ಕಾರಣ ಮುಖ್ಯಮಂತ್ರಿಗೆ ಲಿಖಿತ ಮನವಿ ಸಲ್ಲಿಸಲಾಗಿದೆ. ಆದಷ್ಟು ಬೇಗ ಹೆಣ್ಣು ಮಕ್ಕಳನ್ನು ಪತ್ತೆ ಮಾಡುವಂತೆ ಮುಖ್ಯಮಂತ್ರಿ ಹಾಗೂ ರಾಜ್ಯ ಗೃಹ ಸಚಿವರಿಗೆ ಅವರು ಮನವಿ ಮಾಡಿದ್ದಾರೆ.

ನಗರದ ಹರಾನಿ ಪ್ರದೇಶದ ಮೋಟ್‌ನಾಥ್ ರೆಸಿಡೆನ್ಸಿಯಲ್ಲಿ ವಾಸಿಸುತ್ತಿದ್ದ ನೇಕಾರ ಕುಟುಂಬದ ಇಬ್ಬರು ಅವಳಿ ಸಹೋದರಿಯರು ದಿಢೀರ್ ನಾಪತ್ತೆಯಾಗಿದ್ದು, ಕುಟುಂಬದವರು ಆತಂಕಕ್ಕೆ ಒಳಗಾಗಿದ್ದಾರೆ. ಇಬ್ಬರ ಪೈಕಿ ಒಬ್ಬ ಸಹೋದರಿ ಎಂಎಸ್ ಯೂನಿವರ್ಸಿಟಿಯಲ್ಲಿ ಓದುತ್ತಿದ್ದರೆ, ಮತ್ತೊಬ್ಬ ಸಹೋದರಿ ಎಸಿಡಿಟಿ ಕಾಲೇಜಿನಲ್ಲಿ ಓದುತ್ತಿದ್ದಳು. ಕಳೆದ ಫೆ.17 ರಂದು ಇಬ್ಬರೂ ಸಹೋದರಿಯರು ಕಾಲೇಜು ವ್ಯಾಸಂಗಕ್ಕೆ ಹೋಗಿದ್ದು, ಸಂಜೆಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಭಾರಿ ಹುಡುಕಾಟ ನಡೆಸಿದ್ದಾರೆ. ಇವರ ಬಗ್ಗೆ ಸುಳಿವು ಸಿಗದ ಕಾರಣ ಹರಾನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.

ಸಿಸಿಟಿವಿ ದೃಶ್ಯ ಪರಿಶೀಲನೆ: ಆದರೆ ಸಯಾಜಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಪೊಲೀಸರು ಮನೆಯವರಿಗೆ ತಿಳಿಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಕಾಣೆಯಾಗಿರುವ ಬಗ್ಗೆ ಸಯಾಜಿಗಂಜ್ ಪೊಲೀಸ್ ಠಾಣೆಯಲ್ಲಿ ಫೆ.17 ರಂದು ದೂರು ದಾಖಲಿಸಿದ್ದಾರೆ. ನಾಪತ್ತೆ ದೂರು ಸ್ವೀಕರಿಸಿದ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಎಂಎಸ್ ವಿಶ್ವವಿದ್ಯಾಲಯದ ಸಿಸಿಟಿವಿ ದೃಶ್ಯಾವಳಿಗಳನ್ನೂ ಪೊಲೀಸರು ಪರಿಶೀಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಸಹೋದರಿಯರಿಬ್ಬರೂ ಕಾಲೇಜು ಬಿಟ್ಟು ಹೋಗುತ್ತಿರುವುದು ಕಂಡು ಬಂದಿದೆ. ಆದರೆ ನಂತರ ಎಲ್ಲಿಗೆ ಹೋಗುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಇರಲಿಲ್ಲ.

ಮುಖ್ಯಮಂತ್ರಿಗೆ ಪತ್ರ: ತಂದೆ ಚಿಮನ್‌ಭಾಯ್ ವಾಂಕರ್ ಅವರ ಆರೋಪದ ಮೇಲೆ ಪೊಲೀಸರು ಕಿಶನ್ ಸೋಲಂಕಿ ಎಂಬ ಯುವಕನನ್ನು ವಿಚಾರಣೆಗೆ ಒಳಪಡಿಸಿದರು. ಆದರೆ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿಲ್ಲ. ಪೊಲೀಸ್ ತನಿಖೆಯಲ್ಲಿ ಸಕಾರಾತ್ಮಕ ಉತ್ತರ ಸಿಗದ ಹಿನ್ನೆಲೆ ಚಿಮನ್‌ಭಾಯ್ ಅವರು ಮುಖ್ಯಮಂತ್ರಿ, ಗೃಹ ಖಾತೆ ರಾಜ್ಯ ಸಚಿವರು, ಪೊಲೀಸ್ ಮಹಾನಿರ್ದೇಶಕರು ಮತ್ತು ವಡೋದರಾ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

51 ದಿನ ಕಳೆದರೂ ಈ ಸಹೋದರಿಯರ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ.ನಗರ ಪೊಲೀಸ್ ಆಯುಕ್ತರು ಸಂಪೂರ್ಣ ತನಿಖೆಯನ್ನು ಅಪರಾಧ ವಿಭಾಗಕ್ಕೆ ಹಸ್ತಾಂತರಿಸಿದ್ದಾರೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ರಾಜ್ಯ ಗೃಹ ಸಚಿವ ಹರ್ಷ ಶಾಂಘ್ವಿ ಕೂಡ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಕಳೆದ 15 ದಿನಗಳಿಂದ ಅಪರಾಧ ವಿಭಾಗದ ಪೊಲೀಸರು ಅವಳಿ ಸಹೋದರಿಯರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವರನ್ನು ಪತ್ತೆಹಚ್ಚಲು ಕ್ಯಾಲಿಫೋರ್ನಿಯಾದಿಂದ ಅವರ ವಾಟ್ಸಾಪ್ ಡೇಟಾವನ್ನು ಹುಡುಕಲಾಗಿದೆ ಎಂಬ ಮಾಹಿತಿಯನ್ನು ಅಪರಾಧ ವಿಭಾಗ ನೀಡಿದೆ. ಸಾರಿಕಾ ಮತ್ತು ಶೀತಲ್ ಅವರು ತಮ್ಮ ವೈಫೈನಿಂದ ವಾಟ್ಸಾಪ್ ಡೇಟಾವನ್ನು ಬಳಸುತ್ತಿರುವ ಕಾರಣ ಮಾಹಿತಿಯನ್ನು ಕ್ಯಾಲಿಫೋರ್ನಿಯಾದಿಂದ ಮಾತ್ರ ಪಡೆಯಬಹುದು. ಹಾಗಾಗಿ ಲಿಖಿತವಾಗಿ ಮಾಹಿತಿ ಕಳುಹಿಸುವಂತೆ ಪೊಲೀಸರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ತಂದೆ ಚಿಮನ್ ವಾಂಕರ್ ಇಬ್ಬರು ಹೆಣ್ಣು ಮಕ್ಕಳನ್ನು ಭೇಟಿಯಾಗದೇ ತುಂಬಾ ನೊಂದಿದ್ದು, ಆದಷ್ಟು ಬೇಗ ಮನೆಗೆ ಮರಳುವಂತೆ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.