ETV Bharat / bharat

ನಮ್ಮ ತಾಳ್ಮೆಯ ಕಟ್ಟೆ ಒಡೆದಿದೆ: ದಬ್ಬಾಳಿಕೆ ಮಾಡುವ ಸಚಿವರನ್ನು ವಜಾಗೊಳಿಸುವಂತೆ ಮಹಿಳಾ ಮುಖಂಡರ ಮನವಿ

ಮಹಿಳೆಯರ ಮೇಲಿನ ದಬ್ಬಾಳಿಕೆ ಮತ್ತು ಅವರಿಗಾಗುತ್ತಿರುವ ಅವಮಾನಗಳನ್ನು ನಾವು ಸಹಿಸುವುದಿಲ್ಲ. ಇದರಿಂದ ನಮ್ಮನ್ನು ಹೊರತರುವಂತೆ ಮಹಾವಿಕಾಸ್ ಅಘಾಡಿಯ ಮಹಿಳಾ ಮುಖಂಡರು ಮಹಾರಾಷ್ಟ್ರದ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

author img

By

Published : Nov 14, 2022, 6:27 PM IST

We Will not tolerate insulting women  Jaya Bachchan and women leaders meet MH governor
We Will not tolerate insulting women Jaya Bachchan and women leaders meet MH governor

ಮಹಾರಾಷ್ಟ್ರ: ರಾಜ್ಯದಲ್ಲಿ ಅಧಿಕಾರ ಹಸ್ತಾಂತರವಾದಾಗಿನಿಂದಲೂ ಏಕನಾಥ್​ ಶಿಂಧೆ ಸರ್ಕಾರದ ಕೆಲವು ಸಚಿವರು ಮಹಿಳೆಯರ ವಿರುದ್ಧ ಆಧಾರ ರಹಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರ ವಿರುದ್ಧ ಮಹಾವಿಕಾಸ ಅಘಾಡಿ ಮಹಿಳಾ ನಾಯಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಿ ಆಧಾರ ರಹಿತ ಹೇಳಿಕೆ ಕೊಡುತ್ತಿರುವ ಸಚಿವರನ್ನು ಈ ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯ ಮಾಡಿದ್ದಾರೆ.

We Will not tolerate insulting women  Jaya Bachchan and women leaders meet MH governor
ಮಹಿಳಾ ಮುಖಂಡರ ಮನವಿ

ಇದೇ ವೇಳೆ ಮಹಿಳೆಯರ ವಿವಿಧ ಬೇಡಿಕೆಗಳನ್ನು ರಾಜ್ಯಪಾಲರ ಮುಂದೆ ಇಡಲಾಯಿತು. ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್, ಎನ್‌ಸಿಪಿ ನಾಯಕಿ ಫೌಜಿಯಾ ಖಾನ್, ಎನ್‌ಸಿಪಿ ನಾಯಕಿ ವಿದ್ಯಾ ಚವಾಣ್, ರಾಜ್ಯ ಪ್ರವಾಸೋದ್ಯಮ ಸಚಿವೆ ಅದಿತಿ ತಟ್ಕರೆ, ಅದಿತಿ ನಲವ್ಡೆ, ಠಾಕ್ರೆ ಗುಂಪಿನ ಸಂಸದೆ ಪ್ರಿಯಾಂಕಾ ಚತುರ್ವೇದಿ, ರಿತುಜಾ ಲಟ್ಕೆ, ಶಾಸಕಿ ಮನಿಷಾ ಕಯಂಡೆ ಸೇರಿದಂತೆ ಮಹಿಳಾ ಮುಖಂಡರ ನಿಯೋಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸಚಿವರಿಂದ ಮಹಿಳೆಯರನ್ನು ಅವಮಾನಿಸಲಾಗುತ್ತಿದೆ. ನಮ್ಮ ಬಗ್ಗೆ ವಿನಾಕಾರಣ ಹೇಳಿ ನೀಡಲಾಗುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ. ನಮ್ಮ ತಾಳ್ಮೆಯ ಕಟ್ಟೆ ಒಡೆದಿದೆ. ಉತ್ತರ ಪ್ರದೇಶದಲ್ಲಿಯೂ ಸಹ ದಿನನಿತ್ಯ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ದೌರ್ಜನ್ಯ ನಿಲ್ಲಬೇಕು. ಮಹಿಳೆಯರು ಸಬಲರಾಗುತ್ತಿದ್ದಾರೆ. ಪುರುಷರ ದಬ್ಬಾಳಿಕೆಯನ್ನು ನಾವು ಸಹಿಸುವುದಿಲ್ಲ ಎಂದು ಸಂಸದೆ ಜಯಾ ಬಚ್ಚನ್ ಈ ವೇಳೆ ಆಕ್ರೋಶ ಹೊರ ಹಾಕಿದ್ದಾರೆ.

  • Maharashtra | Today's we've met the Governor & we will soon meet the President too. The insult of women will not be tolerated. Any person including politicians who makes objectional comments against women should be thrown out to set an example: Samajwadi Party MP Jaya Bachchan pic.twitter.com/cH8eMYNsUZ

    — ANI (@ANI) November 14, 2022 " class="align-text-top noRightClick twitterSection" data=" ">

ಶೀಘ್ರದಲ್ಲಿಯೇ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಈ ಬಗ್ಗೆ ನಮ್ಮ ಅಭಿಪ್ರಾಯ ಮಂಡಿಸಲಿದ್ದೇವೆ ಎಂದೂ ಹೇಳಿದ ಅವರು, ಮಹಿಳೆಯರ ಬಗ್ಗೆ ಇಂತಹ ಹೇಳಿಕೆ ನೀಡುವವರನ್ನು ಕೂಡಲೇ ರಾಜಕೀಯದಿಂದ ದೂರವಿಡಬೇಕು. ಇಂತಹವರು ರಾಜಕೀಯದ ವರ್ಚಸ್ಸು ಹಾಳು ಮಾಡುತ್ತಿದ್ದಾರೆ ಎಂದು ಜಯಾ ಬಚ್ಚನ್ ಹೇಳಿದ್ದಾರೆ.

ಮಹಿಳೆಯರ ಮೇಲಿನ ಟೀಕೆಗೆ ಕಡಿವಾಣ ಹಾಕಬೇಕು. ಈ ಕುರಿತು ರಾಜ್ಯಪಾಲರಿಗೆ ಹೇಳಿಕೆ ನೀಡಲಾಗಿದ್ದು, ಮುಖ್ಯಮಂತ್ರಿಗೆ ಪತ್ರ ಕಳುಹಿಸಲಾಗುವುದು ಎಂದು ಸಂಸದೆ ಪ್ರಿಯಾಂಕಾ ಚತುರ್ವೇದಿ ತಿಳಿಸಿದ್ದಾರೆ. ಅಲ್ಲದೇ ಈ ಹಿಂದೆ ಈ ಬಗ್ಗೆ ರಾಜ್ಯಪಾಲರಿಗೆ ನಮ್ಮ ನೋವು ಹೇಳಿಕೊಂಡಿದ್ದೆವು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ನೀಡಿರುವುದಾಗಿ ರಾಜ್ಯಪಾಲರು ಹೇಳಿದ್ದರು.

ಆದರೆ, ಅದು ಏನಾಯಿತೋ ತಿಳಿಯಲಿಲ್ಲ. ಆದರೆ, ಈ ಸಾರಿ ಮಹಿಳೆಯರಿಗೆ ಸಂಬಂಧಿಸಿದಂತೆ ಯಾವ ಸೂಚನೆಗಳನ್ನು ನೀಡಲಾಗಿದೆ ಎಂಬುದನ್ನು ಎಲ್ಲ ಮಹಿಳೆಯರಿಗೆ ತಿಳಿಯುವಂತೆ ಈ ಪತ್ರವನ್ನು ಸಾರ್ವಜನಿಕಗೊಳಿಸಬೇಕು ಎಂದು ಚತುರ್ವೇದಿ ಹೇಳಿದರು.

We Will not tolerate insulting women  Jaya Bachchan and women leaders meet MH governor
ಮಹಿಳಾ ಮುಖಂಡರ ಮನವಿ

ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ ವಿರುದ್ಧ ರಾಜ್ಯ ಸಚಿವ ಅಬ್ದುಲ್ ಸತ್ತಾರ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶಿವಸೇನೆ (ಉದ್ಧವ್ ಬಣ), ಎನ್‌ಸಿಪಿ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ಇತರ ಸಮಾನ ಮನಸ್ಕ ಪಕ್ಷಗಳ ನಾಯಕರನ್ನು ಒಳಗೊಂಡ ಮಹಿಳಾ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದೆ.

ಇದನ್ನೂ ಒದಿ: ಬಸ್​ ನಿಲ್ದಾಣದ ಗುಂಬಜ್​ಗಳನ್ನು ನಾನೇ ಜೆಸಿಬಿಯಿಂದ ಒಡೆದು ಹಾಕುತ್ತೇನೆ: ಸಂಸದ ಪ್ರತಾಪ್ ಸಿಂಹ


ಮಹಾರಾಷ್ಟ್ರ: ರಾಜ್ಯದಲ್ಲಿ ಅಧಿಕಾರ ಹಸ್ತಾಂತರವಾದಾಗಿನಿಂದಲೂ ಏಕನಾಥ್​ ಶಿಂಧೆ ಸರ್ಕಾರದ ಕೆಲವು ಸಚಿವರು ಮಹಿಳೆಯರ ವಿರುದ್ಧ ಆಧಾರ ರಹಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರ ವಿರುದ್ಧ ಮಹಾವಿಕಾಸ ಅಘಾಡಿ ಮಹಿಳಾ ನಾಯಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಿ ಆಧಾರ ರಹಿತ ಹೇಳಿಕೆ ಕೊಡುತ್ತಿರುವ ಸಚಿವರನ್ನು ಈ ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯ ಮಾಡಿದ್ದಾರೆ.

We Will not tolerate insulting women  Jaya Bachchan and women leaders meet MH governor
ಮಹಿಳಾ ಮುಖಂಡರ ಮನವಿ

ಇದೇ ವೇಳೆ ಮಹಿಳೆಯರ ವಿವಿಧ ಬೇಡಿಕೆಗಳನ್ನು ರಾಜ್ಯಪಾಲರ ಮುಂದೆ ಇಡಲಾಯಿತು. ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್, ಎನ್‌ಸಿಪಿ ನಾಯಕಿ ಫೌಜಿಯಾ ಖಾನ್, ಎನ್‌ಸಿಪಿ ನಾಯಕಿ ವಿದ್ಯಾ ಚವಾಣ್, ರಾಜ್ಯ ಪ್ರವಾಸೋದ್ಯಮ ಸಚಿವೆ ಅದಿತಿ ತಟ್ಕರೆ, ಅದಿತಿ ನಲವ್ಡೆ, ಠಾಕ್ರೆ ಗುಂಪಿನ ಸಂಸದೆ ಪ್ರಿಯಾಂಕಾ ಚತುರ್ವೇದಿ, ರಿತುಜಾ ಲಟ್ಕೆ, ಶಾಸಕಿ ಮನಿಷಾ ಕಯಂಡೆ ಸೇರಿದಂತೆ ಮಹಿಳಾ ಮುಖಂಡರ ನಿಯೋಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸಚಿವರಿಂದ ಮಹಿಳೆಯರನ್ನು ಅವಮಾನಿಸಲಾಗುತ್ತಿದೆ. ನಮ್ಮ ಬಗ್ಗೆ ವಿನಾಕಾರಣ ಹೇಳಿ ನೀಡಲಾಗುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ. ನಮ್ಮ ತಾಳ್ಮೆಯ ಕಟ್ಟೆ ಒಡೆದಿದೆ. ಉತ್ತರ ಪ್ರದೇಶದಲ್ಲಿಯೂ ಸಹ ದಿನನಿತ್ಯ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ದೌರ್ಜನ್ಯ ನಿಲ್ಲಬೇಕು. ಮಹಿಳೆಯರು ಸಬಲರಾಗುತ್ತಿದ್ದಾರೆ. ಪುರುಷರ ದಬ್ಬಾಳಿಕೆಯನ್ನು ನಾವು ಸಹಿಸುವುದಿಲ್ಲ ಎಂದು ಸಂಸದೆ ಜಯಾ ಬಚ್ಚನ್ ಈ ವೇಳೆ ಆಕ್ರೋಶ ಹೊರ ಹಾಕಿದ್ದಾರೆ.

  • Maharashtra | Today's we've met the Governor & we will soon meet the President too. The insult of women will not be tolerated. Any person including politicians who makes objectional comments against women should be thrown out to set an example: Samajwadi Party MP Jaya Bachchan pic.twitter.com/cH8eMYNsUZ

    — ANI (@ANI) November 14, 2022 " class="align-text-top noRightClick twitterSection" data=" ">

ಶೀಘ್ರದಲ್ಲಿಯೇ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಈ ಬಗ್ಗೆ ನಮ್ಮ ಅಭಿಪ್ರಾಯ ಮಂಡಿಸಲಿದ್ದೇವೆ ಎಂದೂ ಹೇಳಿದ ಅವರು, ಮಹಿಳೆಯರ ಬಗ್ಗೆ ಇಂತಹ ಹೇಳಿಕೆ ನೀಡುವವರನ್ನು ಕೂಡಲೇ ರಾಜಕೀಯದಿಂದ ದೂರವಿಡಬೇಕು. ಇಂತಹವರು ರಾಜಕೀಯದ ವರ್ಚಸ್ಸು ಹಾಳು ಮಾಡುತ್ತಿದ್ದಾರೆ ಎಂದು ಜಯಾ ಬಚ್ಚನ್ ಹೇಳಿದ್ದಾರೆ.

ಮಹಿಳೆಯರ ಮೇಲಿನ ಟೀಕೆಗೆ ಕಡಿವಾಣ ಹಾಕಬೇಕು. ಈ ಕುರಿತು ರಾಜ್ಯಪಾಲರಿಗೆ ಹೇಳಿಕೆ ನೀಡಲಾಗಿದ್ದು, ಮುಖ್ಯಮಂತ್ರಿಗೆ ಪತ್ರ ಕಳುಹಿಸಲಾಗುವುದು ಎಂದು ಸಂಸದೆ ಪ್ರಿಯಾಂಕಾ ಚತುರ್ವೇದಿ ತಿಳಿಸಿದ್ದಾರೆ. ಅಲ್ಲದೇ ಈ ಹಿಂದೆ ಈ ಬಗ್ಗೆ ರಾಜ್ಯಪಾಲರಿಗೆ ನಮ್ಮ ನೋವು ಹೇಳಿಕೊಂಡಿದ್ದೆವು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ನೀಡಿರುವುದಾಗಿ ರಾಜ್ಯಪಾಲರು ಹೇಳಿದ್ದರು.

ಆದರೆ, ಅದು ಏನಾಯಿತೋ ತಿಳಿಯಲಿಲ್ಲ. ಆದರೆ, ಈ ಸಾರಿ ಮಹಿಳೆಯರಿಗೆ ಸಂಬಂಧಿಸಿದಂತೆ ಯಾವ ಸೂಚನೆಗಳನ್ನು ನೀಡಲಾಗಿದೆ ಎಂಬುದನ್ನು ಎಲ್ಲ ಮಹಿಳೆಯರಿಗೆ ತಿಳಿಯುವಂತೆ ಈ ಪತ್ರವನ್ನು ಸಾರ್ವಜನಿಕಗೊಳಿಸಬೇಕು ಎಂದು ಚತುರ್ವೇದಿ ಹೇಳಿದರು.

We Will not tolerate insulting women  Jaya Bachchan and women leaders meet MH governor
ಮಹಿಳಾ ಮುಖಂಡರ ಮನವಿ

ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ ವಿರುದ್ಧ ರಾಜ್ಯ ಸಚಿವ ಅಬ್ದುಲ್ ಸತ್ತಾರ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶಿವಸೇನೆ (ಉದ್ಧವ್ ಬಣ), ಎನ್‌ಸಿಪಿ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ಇತರ ಸಮಾನ ಮನಸ್ಕ ಪಕ್ಷಗಳ ನಾಯಕರನ್ನು ಒಳಗೊಂಡ ಮಹಿಳಾ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದೆ.

ಇದನ್ನೂ ಒದಿ: ಬಸ್​ ನಿಲ್ದಾಣದ ಗುಂಬಜ್​ಗಳನ್ನು ನಾನೇ ಜೆಸಿಬಿಯಿಂದ ಒಡೆದು ಹಾಕುತ್ತೇನೆ: ಸಂಸದ ಪ್ರತಾಪ್ ಸಿಂಹ


ETV Bharat Logo

Copyright © 2024 Ushodaya Enterprises Pvt. Ltd., All Rights Reserved.