ಕೋಲ್ಕತ್ತಾ: ನಾರದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಇಬ್ಬರು ಸಚಿವರು ಸೇರಿದಂತೆ ನಾಲ್ವರ ಬಂಧನ ಮಾಡ್ತಿದ್ದಂತೆ ಕೋಲ್ಕತ್ತಾದಲ್ಲಿ ಹೈಡ್ರಾಮಾ ನಿರ್ಮಾಣಗೊಂಡಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮನ್ನು ಬಂಧನ ಮಾಡುವಂತೆ ಸಿಬಿಐ ಕಚೇರಿಗೆ ಆಗಮಿಸಿ ಧರಣಿ ನಡೆಸಿದರು. ಆದರೆ ದಿನದ ಅಂತ್ಯದಲ್ಲಿ ಬಂಧಿತ ಸಚಿವರಿಗೆ ಕೋರ್ಟ್ನಿಂದ ಜಾಮೀನು ಸಿಕ್ಕಿತು.
ನಿಜಾಮ್ ಪ್ಯಾಲೇಸ್ನಲ್ಲಿರುವ ಸಿಬಿಐ ಕಚೇರಿಗೆ ಆಗಮಿಸಿದ ಮಮತಾ ಬ್ಯಾನರ್ಜಿ ಅಲ್ಲಿನ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಅಸಮಾಧಾನಗೊಂಡ ಮಮತಾ ತನ್ನನ್ನು ಬಂಧಿಸುವಂತೆ ಆಗ್ರಹಿಸಿದರು. ಸಂಜೆ ಆರು ಗಂಟೆಯವರೆಗೂ ಅಲ್ಲೇ ವಾಸ್ತವ್ಯ ಹೂಡಿದ್ದ ದೀದಿ ತದನಂತರ ತೆರಳಿದರು. ಈ ವೇಳೆ ಮಾತನಾಡಿದ ಅವರು, ಇದಕ್ಕೆ ಸಂಬಂಧಿಸಿದಂತೆ ಕೋರ್ಟ್ ತೀರ್ಪು ನೀಡಲಿದೆ ಎಂದರು.
ಇದನ್ನೂ ಓದಿ: ನನಗೆ ಕೋವಿಡ್ ಬರಲ್ಲ, ಯಾಕೆಂದ್ರೆ ನಾನು 'ಹಸುವಿನ ಮೂತ್ರ' ಕುಡಿಯುತ್ತೇನೆ ಎಂದ ಸಾಧ್ವಿ!
ಇಬ್ಬರು ಸಚಿವರು ಸೇರಿದಂತೆ ನಾಲ್ವರ ಬಂಧನ ಮಾಡಿರುವ ಸಿಬಿಐ ನಡೆ ಕಾನೂನು ಬಾಹಿರವಾಗಿದ್ದು, ಇದರಲ್ಲಿ ರಾಜಕೀಯ ಷಡ್ಯಂತ್ರವಿದೆ ಎಂದು ಮಮತಾ ಬ್ಯಾನರ್ಜಿ ವಕ್ತಾರ ಅನಿಂದ್ಯೌ ರೌತ್ ಆರೋಪಿಸಿದ್ದಾರೆ.
-
#WATCH | TMC supporters hold protest outside the CBI office over the arrest of its leaders. pic.twitter.com/0lBPK92zfA
— ANI (@ANI) May 17, 2021 " class="align-text-top noRightClick twitterSection" data="
">#WATCH | TMC supporters hold protest outside the CBI office over the arrest of its leaders. pic.twitter.com/0lBPK92zfA
— ANI (@ANI) May 17, 2021#WATCH | TMC supporters hold protest outside the CBI office over the arrest of its leaders. pic.twitter.com/0lBPK92zfA
— ANI (@ANI) May 17, 2021
ಕಲ್ಲು ತೂರಾಟ ನಡೆಸಿದ ಟಿಎಂಸಿ ಕಾರ್ಯಕರ್ತರು
ಸಚಿವರ ಬಂಧನವಾಗುತ್ತಿದ್ದಂತೆ ಸಿಬಿಐ ಕಚೇರಿ ಮುಂದೆ ಜಮಾವಣೆಗೊಂಡ ಟಿಎಂಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಸಿಬಿಐ ಹಾಗೂ ಬಿಜೆಪಿ ನೇತೃತ್ವದ ಎನ್ಡಿಎ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಸಿಬಿಐನ ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ಸಹ ನಡೆಸಿದರು. ಗುಂಪು ಚದುರಿಸಲು ಭದ್ರತಾ ಪಡೆ ಲಾಠಿ ಚಾರ್ಜ್ ನಡೆಸಿದರು.
ನಾಲ್ವರಿಗೂ ಜಾಮೀನು
ಪಶ್ಚಿಮ ಬಂಗಾಳ ಸಚಿವರಾಗಿರುವ ಫಿರ್ಹಾದ್ ಹಕೀಮ್ ಮತ್ತು ಸುಬ್ರತಾ ಮುಖರ್ಜಿ ಜತೆಗೆ ಟಿಎಂಸಿ ಶಾಸಕ ಮದನ್ ಮಿತ್ರ ಹಾಗೂ ಮಾಜಿ ಸಚಿವ ಶೋವನ್ ಚಟರ್ಜಿಯನ್ನ ಸಿಬಿಐ ಬಂಧಿಸಿ ವಿಚಾರಣೆ ನಡೆಸಿತು. ಸಿಬಿಐನಿಂದ ಬಂಧನಕ್ಕೊಳಗಾಗಿರುವ ಎಲ್ಲರಿಗೂ ಸಿಬಿಐ ಕೋರ್ಟ್ ಇದೀಗ ಜಾಮೀನು ಮಂಜೂರು ಮಾಡಿದೆ.
-
West Bengal: TMC Ministers Firhad Hakim, Subrata Mukherjee, MLA Madan Mitra & Former Mayor Sovhan Chatterjee were brought to the CBI office in connection with Narada Scam
— ANI (@ANI) May 17, 2021 " class="align-text-top noRightClick twitterSection" data="
">West Bengal: TMC Ministers Firhad Hakim, Subrata Mukherjee, MLA Madan Mitra & Former Mayor Sovhan Chatterjee were brought to the CBI office in connection with Narada Scam
— ANI (@ANI) May 17, 2021West Bengal: TMC Ministers Firhad Hakim, Subrata Mukherjee, MLA Madan Mitra & Former Mayor Sovhan Chatterjee were brought to the CBI office in connection with Narada Scam
— ANI (@ANI) May 17, 2021
ಏನಿದು ನಾರದ ಲಂಚ ಪ್ರಕರಣ?
ತೃಣಮೂಲ ಕಾಂಗ್ರೆಸ್ನ ರಾಜಕಾರಣಿಗಳು ಹಾಗೂ ಕೆಲ ಉನ್ನತ ಶ್ರೇಣಿ ಅಧಿಕಾರಿಗಳನ್ನ ಗುರಿಯಾಗಿಸಿಕೊಂಡು 2014ರಲ್ಲಿ ನಾರದ ಟಿವಿ ನ್ಯೂಸ್ ದೃಶ್ಯ ಬಿತ್ತರಿಸಿತ್ತು. ಇದರಲ್ಲಿ ಸೆರೆಯಾದವರು ಟಿಎಂಸಿ ಸಚಿವರು, ಸಂಸದರು, ಶಾಸಕರು ಎಂದು ಹೇಳಲಾಗಿತ್ತು. 2017ರ ಮಾರ್ಚ್ ತಿಂಗಳಲ್ಲಿ ಕೋಲ್ಕತ್ತಾ ಹೈಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶ ನೀಡಿತ್ತು.ಇದೇ ವಿಚಾರವಾಗಿ ಸಿಬಿಐ ಇದೀಗ ಕೆಲವರ ಬಂಧನ ಮಾಡಿತ್ತು.
ಮಮತಾ ವಿರುದ್ಧ ಬಿಜೆಪಿ ದೂರು ದಾಖಲು
ವಿಧಾನಸಭಾ ಚುನಾವಣೆಗೂ ಮೊದಲು ಬಿಜೆಪಿ ನಾಯಕರ ವಿರುದ್ಧ ಬಾಹ್ಯ ಮಾಹಿತಿ ಸೋರಿಕೆ ಮಾಡಿದ್ದಕ್ಕಾಗಿ ಎಫ್ಐಆರ್ ದಾಖಲು ಮಾಡಲಾಗಿದೆ. ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು ಮಾಡಿದ್ದು, ತಮ್ಮ ದೂರಿನಲ್ಲಿ ನಾಲ್ಕು ಅಂಶ ಉಲ್ಲೇಖಿಸಿದ್ದಾರೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಚು. ಆಯೋಗ ನಿಯೋಜನೆ ಮಾಡಿದ್ದ ಕೇಂದ್ರ ಪಡೆಗಳ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಅಂಶವನ್ನು ಇಲ್ಲಿ ಉಲ್ಲೇಖಿಸಲಾಗಿದೆ.