ETV Bharat / bharat

ಮಹಿಳೆ ಥಳಿಸಿ ಬಟ್ಟೆ ಹರಿದರು.. ರಾತ್ರಿಯಿಡಿ ಮರಕ್ಕೆ ಕಟ್ಟಿ ಹಾಕಿದರು:ನಾಲ್ವರ ಬಂಧನ, ತನಿಖೆ ಚುರುಕು

ಮಣಿಪುರ ಘಟನೆ ಮಾಸುವ ಮುನ್ನವೇ ಜಾರ್ಖಂಡ್​​ನಲ್ಲೂ ಮಹಿಳೆ ಥಳಿಸಿ, ಕಟ್ಟಿಹಾಕಿದ ಅಮಾನವೀಯ ಘಟನೆ ಜರುಗಿದೆ. ಮಹಿಳೆಯನ್ನು ಬೈಕ್ ಮೇಲೆ ಅಪಹರಿಸಿ ನಿರ್ಜನ ಪ್ರದೇಶಕ್ಕೆ ತಂದು ತೀವ್ರವಾಗಿ ಥಳಿಸಿ, ಬಟ್ಟೆ ಹರಿದು ರಾತ್ರಿಯಿಡಿ ಮರಕ್ಕೆ ಕಟ್ಟಿಹಾಕಿರುವ ಪ್ರಕರಣ ಗಿರಿದಿಹ್ ಜಿಲ್ಲೆಯ ಸರಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

author img

By

Published : Jul 27, 2023, 5:55 PM IST

casual picture
ಜಾರ್ಖಂಡ್​ದಲ್ಲೂ ಮಹಿಳೆ ಮೇಲೆ ಅಮಾನವೀಯ ಘಟನೆ ಸಾಂದರ್ಭಿಕ ಚಿತ್ರ

ಗಿರಿದಿಹ್, ಬಾಗೋದರ್(ಜಾರ್ಖಂಡ್): ಮಹಿಳೆಯನ್ನು ಥಳಿಸಿ, ಬಟ್ಟೆ ಹರಿದು ರಾತ್ರಿಯಿಡಿ ನಿರ್ಜನ ಪ್ರದೇಶದಲ್ಲಿ ಮರಕ್ಕೆ ಕಟ್ಟಿಹಾಕಿರುವ ಪ್ರಕರಣ ಜಾರ್ಖಂಡ್​ ರಾಜ್ಯದ ಗಿರಿದಿಹ್ ಜಿಲ್ಲೆಯ ಸರಿಯಾ ಪೊಲೀಸ್ ಠಾಣೆ ವ್ಯಾಪ್ತಿ ಜರುಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪ ಪ್ರತ್ಯಾರೋಪಗಳು ಶುರುವಾಗಿವೆ.

ಮಹಿಳೆಯನ್ನು ರಾತ್ರಿಯಿಡೀ ಮರಕ್ಕೆ ಕಟ್ಟಿಹಾಕಿರುವು ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿ, ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಬಿಡುಗಡೆಗೊಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಬುಧವಾರ ರಾತ್ರಿ 11 ಗಂಟೆಗೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

ಘಟನೆ ಬಗ್ಗೆ ಸಂತ್ರಸ್ತೆ ಹೇಳಿದ್ದೇನು?: ’’ರಾತ್ರಿ ಯಾರೋ ಮನೆ ಎದುರು ಬಂದು ಕರೆದರು. ಯಾರೋ ಏನೂ ಅಂಥ ಹೊರಗೆ ಬಂದಾಗ ಇಬ್ಬರು ಯುವಕರು ನಿಂತಿದ್ದರು. ತಕ್ಷಣ ನನ್ನನು ಎಳೆದುಕೊಂಡು ಇಬ್ಬರು ಹಿಡಿದು ಬೈಕ್ ಮೇಲೆ ಕೂಡಿಸಿದರು. ತಪ್ಪಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಆಗಲಿಲ್ಲ. ಆ ವೇಳೆ ನನ್ನನ್ನು ತೀವ್ರವಾಗಿ ಹೊಡೆದರು. ನಂತರ ಒಂದು ಕಿ.ಮೀ ದೂರದ ನಿರ್ಜನ ಪ್ರದೇಶಕ್ಕೆ ತಂದು ಮತ್ತೆ ನನ್ನ ಮೇಲೆ ಹಲ್ಲೆ ನಡೆಸಿದರು. ಧರಿಸಿದ್ದ ಬಟ್ಟೆಗಳನ್ನು ಹರಿದು ಹಾಕಿದರು. ನಂತರ ಹಗ್ಗದಿಂದ ನೀಲಗಿರಿ ಮರಕ್ಕೆ ಕಟ್ಟಿ ಹಾಕಿದರು. ರಾತ್ರಿಯಿಡಿ ಮರಕ್ಕೆ ಕಟ್ಟಿದ್ದರಿಂದ ತೀವ್ರ ಭಯಗೊಂಡಿದ್ದ ನಾನು, ಅಸ್ವಸ್ಥಳಾಗಿದ್ದೆ‘‘ ಎಂದು ಸಂತ್ರೆಸ್ತೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಸದ್ಯ ಮಹಿಳೆಗೆ ಸ್ಥಳೀಯ ದೇವಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್:ಯುವಕರು ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿರುವ ಮಾಹಿತಿ ಸಿಕ್ಕ ತಕ್ಷಣ ಪೊಲೀಸರು ಗುರುವಾರ ಬೆಳಗ್ಗೆ ಸ್ಥಳಕ್ಕಾಗಮಿಸಿ ಮಹಿಳೆಯನ್ನು ಬಿಡುಗಡೆಗೊಳಿಸಿ ನರ್ಸಿಂಗ್ ಹೋಂಗೆ ದಾಖಲಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿವೆ. ಇದರೊಂದಿಗೆ ಆರೋಪಿಗಳನ್ನು ಬಂಧಿಸಿ ಕಠೋರ ಶಿಕ್ಷೆ ನೀಡಬೇಕೆಂಬ ಆಗ್ರಹವೂ ಕೇಳಿ ಬಂದಿದೆ.

ಈ ಪ್ರಕರಣವನ್ನು ಭೇದಿಸಿದ ಸರಿಯಾ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರನ್ನು ಬಂಧಿಸಲಾಗಿದೆ. ಕಬಾಡಿಯಾ ತೋಲಾ ನಿವಾಸಿಗಳಾದ ವಿಕಾಸ್ ಕುಮಾರ್ ಸೋನಾರ್, ಶ್ರವಣ್ ಸೋನಾರ್, ರೇಖಾ ದೇವಿ ಮುನ್ನಿದೇವಿ ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ.

ಪೊಲೀಸರು ಹೇಳುವುದಿಷ್ಟು: ಅಕ್ರಮ ಸಂಬಂಧವೇ ಈ ಘಟನೆ ನಡೆಯಲು ಕಾರಣ ಎಂಬುದು ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಬಯಲಿಗೆ ಬಂದಿದೆ. ‘‘ಸಂತ್ರಸ್ತೆಯ ಹೇಳಿಕೆ ಆಧರಿಸಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ , ಇನ್ನಷ್ಟು ತನಿಖೆ ನಡೆಯುತ್ತಿದೆ‘‘ ಎಂದು ಎಸ್‌ಡಿಪಿಒ ನೌಶಾದ್ ಆಲಂ ತಿಳಿಸಿದ್ದಾರೆ.

ಇದನ್ನೂಓದಿ: ಬಾಗಲಕೋಟೆ: ಅತ್ಯಾಚಾರಿ ಅಪರಾಧಿಗೆ ಅಜೀವ ಜೀವಾವಧಿ ಶಿಕ್ಷೆ

ಗಿರಿದಿಹ್, ಬಾಗೋದರ್(ಜಾರ್ಖಂಡ್): ಮಹಿಳೆಯನ್ನು ಥಳಿಸಿ, ಬಟ್ಟೆ ಹರಿದು ರಾತ್ರಿಯಿಡಿ ನಿರ್ಜನ ಪ್ರದೇಶದಲ್ಲಿ ಮರಕ್ಕೆ ಕಟ್ಟಿಹಾಕಿರುವ ಪ್ರಕರಣ ಜಾರ್ಖಂಡ್​ ರಾಜ್ಯದ ಗಿರಿದಿಹ್ ಜಿಲ್ಲೆಯ ಸರಿಯಾ ಪೊಲೀಸ್ ಠಾಣೆ ವ್ಯಾಪ್ತಿ ಜರುಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪ ಪ್ರತ್ಯಾರೋಪಗಳು ಶುರುವಾಗಿವೆ.

ಮಹಿಳೆಯನ್ನು ರಾತ್ರಿಯಿಡೀ ಮರಕ್ಕೆ ಕಟ್ಟಿಹಾಕಿರುವು ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿ, ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಬಿಡುಗಡೆಗೊಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಬುಧವಾರ ರಾತ್ರಿ 11 ಗಂಟೆಗೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

ಘಟನೆ ಬಗ್ಗೆ ಸಂತ್ರಸ್ತೆ ಹೇಳಿದ್ದೇನು?: ’’ರಾತ್ರಿ ಯಾರೋ ಮನೆ ಎದುರು ಬಂದು ಕರೆದರು. ಯಾರೋ ಏನೂ ಅಂಥ ಹೊರಗೆ ಬಂದಾಗ ಇಬ್ಬರು ಯುವಕರು ನಿಂತಿದ್ದರು. ತಕ್ಷಣ ನನ್ನನು ಎಳೆದುಕೊಂಡು ಇಬ್ಬರು ಹಿಡಿದು ಬೈಕ್ ಮೇಲೆ ಕೂಡಿಸಿದರು. ತಪ್ಪಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಆಗಲಿಲ್ಲ. ಆ ವೇಳೆ ನನ್ನನ್ನು ತೀವ್ರವಾಗಿ ಹೊಡೆದರು. ನಂತರ ಒಂದು ಕಿ.ಮೀ ದೂರದ ನಿರ್ಜನ ಪ್ರದೇಶಕ್ಕೆ ತಂದು ಮತ್ತೆ ನನ್ನ ಮೇಲೆ ಹಲ್ಲೆ ನಡೆಸಿದರು. ಧರಿಸಿದ್ದ ಬಟ್ಟೆಗಳನ್ನು ಹರಿದು ಹಾಕಿದರು. ನಂತರ ಹಗ್ಗದಿಂದ ನೀಲಗಿರಿ ಮರಕ್ಕೆ ಕಟ್ಟಿ ಹಾಕಿದರು. ರಾತ್ರಿಯಿಡಿ ಮರಕ್ಕೆ ಕಟ್ಟಿದ್ದರಿಂದ ತೀವ್ರ ಭಯಗೊಂಡಿದ್ದ ನಾನು, ಅಸ್ವಸ್ಥಳಾಗಿದ್ದೆ‘‘ ಎಂದು ಸಂತ್ರೆಸ್ತೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಸದ್ಯ ಮಹಿಳೆಗೆ ಸ್ಥಳೀಯ ದೇವಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್:ಯುವಕರು ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿರುವ ಮಾಹಿತಿ ಸಿಕ್ಕ ತಕ್ಷಣ ಪೊಲೀಸರು ಗುರುವಾರ ಬೆಳಗ್ಗೆ ಸ್ಥಳಕ್ಕಾಗಮಿಸಿ ಮಹಿಳೆಯನ್ನು ಬಿಡುಗಡೆಗೊಳಿಸಿ ನರ್ಸಿಂಗ್ ಹೋಂಗೆ ದಾಖಲಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿವೆ. ಇದರೊಂದಿಗೆ ಆರೋಪಿಗಳನ್ನು ಬಂಧಿಸಿ ಕಠೋರ ಶಿಕ್ಷೆ ನೀಡಬೇಕೆಂಬ ಆಗ್ರಹವೂ ಕೇಳಿ ಬಂದಿದೆ.

ಈ ಪ್ರಕರಣವನ್ನು ಭೇದಿಸಿದ ಸರಿಯಾ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರನ್ನು ಬಂಧಿಸಲಾಗಿದೆ. ಕಬಾಡಿಯಾ ತೋಲಾ ನಿವಾಸಿಗಳಾದ ವಿಕಾಸ್ ಕುಮಾರ್ ಸೋನಾರ್, ಶ್ರವಣ್ ಸೋನಾರ್, ರೇಖಾ ದೇವಿ ಮುನ್ನಿದೇವಿ ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ.

ಪೊಲೀಸರು ಹೇಳುವುದಿಷ್ಟು: ಅಕ್ರಮ ಸಂಬಂಧವೇ ಈ ಘಟನೆ ನಡೆಯಲು ಕಾರಣ ಎಂಬುದು ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಬಯಲಿಗೆ ಬಂದಿದೆ. ‘‘ಸಂತ್ರಸ್ತೆಯ ಹೇಳಿಕೆ ಆಧರಿಸಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ , ಇನ್ನಷ್ಟು ತನಿಖೆ ನಡೆಯುತ್ತಿದೆ‘‘ ಎಂದು ಎಸ್‌ಡಿಪಿಒ ನೌಶಾದ್ ಆಲಂ ತಿಳಿಸಿದ್ದಾರೆ.

ಇದನ್ನೂಓದಿ: ಬಾಗಲಕೋಟೆ: ಅತ್ಯಾಚಾರಿ ಅಪರಾಧಿಗೆ ಅಜೀವ ಜೀವಾವಧಿ ಶಿಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.