ETV Bharat / bharat

ಹುತಾತ್ಮ ಯೋಧರಿಗೆ ಅಂತಿಮ ನಮನ: ಮನಕಲಕುವ ಕುಟುಂಬಸ್ಥರ ರೋಧನ

author img

By

Published : Apr 5, 2021, 10:20 AM IST

ಭದ್ರತಾ ಪಡೆ ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ ಒಟ್ಟು 22 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಪಾರ್ಥಿವ ಶರೀರಗಳನ್ನು ಬಿಜಾಪುರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆೆ. ಈ ವೇಳೆ ಯೋಧರ ಕುಟುಂಬ ಸದಸ್ಯರ ರೋಧನ ಮನಕಲಕುವಂತಿತ್ತು.

Wreath laying ceremony of soldiers
ಹುತಾತ್ಮರಾದ ಜವಾನರಿಗೆ ಅಂತಿಮ ನಮನ

ಛತ್ತೀಸ್​ಗಡ: ಶನಿವಾರದಿಂದ ಪ್ರಾರಂಭವಾದ ಭದ್ರತಾ ಪಡೆ ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ ಒಟ್ಟು 22 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದರು. ಇಂದು ಅವರ ಪಾರ್ಥಿವ ಶರೀರಗಳನ್ನು ಬಿಜಾಪುರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆೆ.

ಸುಕ್ಮಾ-ಬಿಜಾಪುರ ಗಡಿಯಲ್ಲಿ ನಕ್ಸಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಸೈನಿಕರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಕೆ ಮಾಡಲಾಗುತ್ತಿದೆ. ಪಾರ್ಥಿವ ಶರೀರದ ಮುಂದೆ, ಕುಟುಂಬಸ್ಥರು ಕಣ್ಣೀರು ಹಾಕುತ್ತಿರುವ ದೃಶ್ಯ ಮನಕಲಕುವಂತಿದೆ.

ವೀರ ಯೋಧರಿಗೆ ಅಂತಿಮ ನಮನ

ಇದನ್ನೂ ಓದಿ: ನಕ್ಸಲ್ ದಾಳಿ.. ಎನ್​​ಕೌಂಟರ್​ ವೇಳೆ ಭದ್ರತಾ ಪಡೆಯ ಶಸ್ತ್ರಾಸ್ತ್ರಗಳ ಲೂಟಿ.. ಹುತಾತ್ಮರಿಗೆ ಗಣ್ಯರ ನಮನ

ಘಟನೆಯ ಬಗ್ಗೆ ಛತ್ತೀಸ್‌ಗಢ ಸಿಎಂ ಭೂಪೇಂದ್ರ ಬಾಗೇಲ್​ ಮಾತನಾಡಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರಿಯಲಿದೆ. ನಕ್ಸಲ್​ ಪೀಡಿತ ಪ್ರದೇಶಗಳನ್ನು ತ್ವರಿತವಾಗಿ ಕಾರ್ಯಾಚರಣೆ ನಡೆಸಿ ನಿಗ್ರಹಿಸಲಾಗುವುದು ಎಂಬ ಎಚ್ಚರಿಕೆ ನೀಡಿದ್ದಾರೆ.

ಛತ್ತೀಸ್​ಗಡ: ಶನಿವಾರದಿಂದ ಪ್ರಾರಂಭವಾದ ಭದ್ರತಾ ಪಡೆ ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ ಒಟ್ಟು 22 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದರು. ಇಂದು ಅವರ ಪಾರ್ಥಿವ ಶರೀರಗಳನ್ನು ಬಿಜಾಪುರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆೆ.

ಸುಕ್ಮಾ-ಬಿಜಾಪುರ ಗಡಿಯಲ್ಲಿ ನಕ್ಸಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಸೈನಿಕರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಕೆ ಮಾಡಲಾಗುತ್ತಿದೆ. ಪಾರ್ಥಿವ ಶರೀರದ ಮುಂದೆ, ಕುಟುಂಬಸ್ಥರು ಕಣ್ಣೀರು ಹಾಕುತ್ತಿರುವ ದೃಶ್ಯ ಮನಕಲಕುವಂತಿದೆ.

ವೀರ ಯೋಧರಿಗೆ ಅಂತಿಮ ನಮನ

ಇದನ್ನೂ ಓದಿ: ನಕ್ಸಲ್ ದಾಳಿ.. ಎನ್​​ಕೌಂಟರ್​ ವೇಳೆ ಭದ್ರತಾ ಪಡೆಯ ಶಸ್ತ್ರಾಸ್ತ್ರಗಳ ಲೂಟಿ.. ಹುತಾತ್ಮರಿಗೆ ಗಣ್ಯರ ನಮನ

ಘಟನೆಯ ಬಗ್ಗೆ ಛತ್ತೀಸ್‌ಗಢ ಸಿಎಂ ಭೂಪೇಂದ್ರ ಬಾಗೇಲ್​ ಮಾತನಾಡಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರಿಯಲಿದೆ. ನಕ್ಸಲ್​ ಪೀಡಿತ ಪ್ರದೇಶಗಳನ್ನು ತ್ವರಿತವಾಗಿ ಕಾರ್ಯಾಚರಣೆ ನಡೆಸಿ ನಿಗ್ರಹಿಸಲಾಗುವುದು ಎಂಬ ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.