ETV Bharat / bharat

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ: ಕೇಂದ್ರ ಕಾರಾಗೃಹಕ್ಕೆ ಖ್ಯಾತ ಸಾಹಿತಿ!

author img

By

Published : Jul 29, 2023, 8:26 PM IST

Updated : Jul 29, 2023, 8:40 PM IST

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯನ್ನು ಟೀಕಿಸಿದ ಖ್ಯಾತ ಪ್ರಕಾಶಕ ಬದ್ರಿ ಶೇಷಾದ್ರಿಯನ್ನು ಪೆರಂಬಲೂರು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿ, ತಿರುಚ್ಚಿ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ.

Writer Badri Seshadri  Badri Seshadri Sent to 14 Days Judicial Custody  Controversial Comments on Manipur Issue  ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಬಗ್ಗೆ ಅವಹೇಳನಕಾರಿ ಹೇಳಿಕೆ  ಕೇಂದ್ರ ಕಾರಾಗೃಹದಲ್ಲಿ ಖ್ಯಾತ ಸಾಹಿತಿ  ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ  ಖ್ಯಾತ ಪ್ರಕಾಶಕ ಬದ್ರಿ ಶೇಷಾದ್ರಿ  ತಿರುಚ್ಚಿ ಕೇಂದ್ರ ಕಾರಾಗೃಹ  ಮಣಿಪುರ ವಿಚಾರವಾಗಿ ವಿವಾದಾತ್ಮಕ ಹೇಳಿಕೆ  ಕುನ್ನಂ ಪೊಲೀಸರು ಬದ್ರಿ ಶೇಷಾದ್ರಿ ವಿರುದ್ಧ  ವೈದ್ಯಕೀಯ ಪರೀಕ್ಷೆ ಬಳಿಕ ಬದ್ರಿ ಶೇಷಾದ್ರಿ
ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಬಗ್ಗೆ ಅವಹೇಳನಕಾರಿ ಹೇಳಿಕೆ

ಪೆರಂಬಲೂರು, ತಮಿಳುನಾಡು: ಮಣಿಪುರ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಖ್ಯಾತ ಸಾಹಿತಿ ಮತ್ತು ವಾಗ್ಮಿ ಬದ್ರಿ ಶೇಷಾದ್ರಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೆರಂಬಲೂರು ಜಿಲ್ಲೆಯ ಕುನ್ನಂ ಬಳಿಯ ಕಡೂರಿನ ವಕೀಲ ಕವಿಅರಸು ನೀಡಿದ ದೂರಿನ ಮೇರೆಗೆ ಈ ಬಂಧನ ನಡೆದಿದೆ.

ದೂರಿನಲ್ಲಿ ಬದ್ರಿ ಶೇಷಾದ್ರಿ ಅವರು ಜನಪ್ರಿಯ ಯೂಟ್ಯೂಬ್ ಚಾನೆಲ್‌ನಲ್ಲಿ ನೀಡಿದ ಹೇಳಿಕೆಯನ್ನು ಎತ್ತಿ ತೋರಿಸಿದ್ದಾರೆ. ನಾವು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಕೈಗೆ ಬಂದೂಕು ಕೊಟ್ಟು ಮಣಿಪುರಕ್ಕೆ ಕಳುಹಿಸಬಹುದು. ಅವರು ಅಲ್ಲಿ ಶಾಂತಿಯನ್ನು ತರಬಹುದೇ?.. ಅದೊಂದು ಗುಡ್ಡಗಾಡು ಪ್ರದೇಶ. ಅಲ್ಲಿ ಕೊಲೆಗಳು ನಡೆಯುತ್ತದೆ ಎಂದು ಅವರು ಹೇಳಿದ್ದಾರೆ. ಈ ಹೇಳಿಕೆಗಳು ಶಾಂತಿ ಕದಡುವ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನು ಅವಮಾನಿಸುವಂತಿವೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ.

ಕುನ್ನಂ ಪೊಲೀಸರು ಬದ್ರಿ ಶೇಷಾದ್ರಿ ವಿರುದ್ಧ ಸೆಕ್ಷನ್ 153, 153 ಎ, ಮತ್ತು 505 (1) (ಬಿ) ಅಡಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಾದ ನಂತರ ಪೊಲೀಸರು ಅವರನ್ನು ಚೆನ್ನೈನಲ್ಲಿ ಬಂಧಿಸಿ, ನಂತರ ವಿಚಾರಣೆ ಸೇರಿದಂತೆ ಹೆಚ್ಚಿನ ಕಾರ್ಯವಿಧಾನಗಳಿಗಾಗಿ ಪೆರಂಬಲೂರು ಜಿಲ್ಲೆಯ ಮಂಗಳಮೇಡು ಪೊಲೀಸ್ ಠಾಣೆಗೆ ಕರೆತರಲಾಯಿತು. ಕುನ್ನಂನಲ್ಲಿರುವ ಜಿಲ್ಲಾ ಕಾನೂನು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ಪೆರಂಬಲೂರು ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು.

ವೈದ್ಯಕೀಯ ಪರೀಕ್ಷೆ ಬಳಿಕ ಬದ್ರಿ ಶೇಷಾದ್ರಿ ಅವರನ್ನು ಜಿಲ್ಲಾ ಕಾನೂನು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಕವಿತಾ ಅವರು ಬದ್ರಿ ಶೇಷಾದ್ರಿ ಅವರನ್ನು 14 ದಿನಗಳ ಕಾಲ ರಿಮಾಂಡ್ ವಿಧಿಸಿ ಆದೇಶಿಸಿದರು.

ಬಂಧನವು ತಮಿಳುನಾಡು ಸರ್ಕಾರದ ಕ್ರಮಗಳನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗೆ ಕಾರಣವಾಯಿತು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಬಂಧನಕ್ಕೆ ತೀವ್ರ ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣವು ಗಮನ ಸೆಳೆದಿದೆ. ವಾಕ್ ಸ್ವಾತಂತ್ರ್ಯ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಅಥವಾ ಸಾಮಾಜಿಕ ಸಾಮರಸ್ಯವನ್ನು ಕದಡುವಂತಹ ಹೇಳಿಕೆಗಳನ್ನು ನೀಡುವಲ್ಲಿ ಸಾರ್ವಜನಿಕ ವ್ಯಕ್ತಿಗಳ ಜವಾಬ್ದಾರಿಯ ಬಗ್ಗೆ ಚರ್ಚೆಗಳನ್ನು ಹುಟ್ಟುಹಾಕಿದೆ. ಪರಿಸ್ಥಿತಿಯು ತೆರೆದುಕೊಳ್ಳುತ್ತಿದ್ದಂತೆ, ನ್ಯಾಯಾಲಯದ ನಿರ್ಧಾರಗಳನ್ನು ಸಾರ್ವಜನಿಕರು ಮತ್ತು ಸಂಬಂಧಪಟ್ಟ ಪಕ್ಷಗಳು ಸೂಕ್ಷ್ಮವಾಗಿ ಗಮನಿಸುತ್ತವೆ.

ಓದಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಕೆ. ಅಣ್ಣಾಮಲೈ ವಾಗ್ದಾಳಿ..

ಪೆರಂಬಲೂರು, ತಮಿಳುನಾಡು: ಮಣಿಪುರ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಖ್ಯಾತ ಸಾಹಿತಿ ಮತ್ತು ವಾಗ್ಮಿ ಬದ್ರಿ ಶೇಷಾದ್ರಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೆರಂಬಲೂರು ಜಿಲ್ಲೆಯ ಕುನ್ನಂ ಬಳಿಯ ಕಡೂರಿನ ವಕೀಲ ಕವಿಅರಸು ನೀಡಿದ ದೂರಿನ ಮೇರೆಗೆ ಈ ಬಂಧನ ನಡೆದಿದೆ.

ದೂರಿನಲ್ಲಿ ಬದ್ರಿ ಶೇಷಾದ್ರಿ ಅವರು ಜನಪ್ರಿಯ ಯೂಟ್ಯೂಬ್ ಚಾನೆಲ್‌ನಲ್ಲಿ ನೀಡಿದ ಹೇಳಿಕೆಯನ್ನು ಎತ್ತಿ ತೋರಿಸಿದ್ದಾರೆ. ನಾವು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಕೈಗೆ ಬಂದೂಕು ಕೊಟ್ಟು ಮಣಿಪುರಕ್ಕೆ ಕಳುಹಿಸಬಹುದು. ಅವರು ಅಲ್ಲಿ ಶಾಂತಿಯನ್ನು ತರಬಹುದೇ?.. ಅದೊಂದು ಗುಡ್ಡಗಾಡು ಪ್ರದೇಶ. ಅಲ್ಲಿ ಕೊಲೆಗಳು ನಡೆಯುತ್ತದೆ ಎಂದು ಅವರು ಹೇಳಿದ್ದಾರೆ. ಈ ಹೇಳಿಕೆಗಳು ಶಾಂತಿ ಕದಡುವ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನು ಅವಮಾನಿಸುವಂತಿವೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ.

ಕುನ್ನಂ ಪೊಲೀಸರು ಬದ್ರಿ ಶೇಷಾದ್ರಿ ವಿರುದ್ಧ ಸೆಕ್ಷನ್ 153, 153 ಎ, ಮತ್ತು 505 (1) (ಬಿ) ಅಡಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಾದ ನಂತರ ಪೊಲೀಸರು ಅವರನ್ನು ಚೆನ್ನೈನಲ್ಲಿ ಬಂಧಿಸಿ, ನಂತರ ವಿಚಾರಣೆ ಸೇರಿದಂತೆ ಹೆಚ್ಚಿನ ಕಾರ್ಯವಿಧಾನಗಳಿಗಾಗಿ ಪೆರಂಬಲೂರು ಜಿಲ್ಲೆಯ ಮಂಗಳಮೇಡು ಪೊಲೀಸ್ ಠಾಣೆಗೆ ಕರೆತರಲಾಯಿತು. ಕುನ್ನಂನಲ್ಲಿರುವ ಜಿಲ್ಲಾ ಕಾನೂನು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ಪೆರಂಬಲೂರು ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು.

ವೈದ್ಯಕೀಯ ಪರೀಕ್ಷೆ ಬಳಿಕ ಬದ್ರಿ ಶೇಷಾದ್ರಿ ಅವರನ್ನು ಜಿಲ್ಲಾ ಕಾನೂನು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಕವಿತಾ ಅವರು ಬದ್ರಿ ಶೇಷಾದ್ರಿ ಅವರನ್ನು 14 ದಿನಗಳ ಕಾಲ ರಿಮಾಂಡ್ ವಿಧಿಸಿ ಆದೇಶಿಸಿದರು.

ಬಂಧನವು ತಮಿಳುನಾಡು ಸರ್ಕಾರದ ಕ್ರಮಗಳನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗೆ ಕಾರಣವಾಯಿತು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಬಂಧನಕ್ಕೆ ತೀವ್ರ ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣವು ಗಮನ ಸೆಳೆದಿದೆ. ವಾಕ್ ಸ್ವಾತಂತ್ರ್ಯ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಅಥವಾ ಸಾಮಾಜಿಕ ಸಾಮರಸ್ಯವನ್ನು ಕದಡುವಂತಹ ಹೇಳಿಕೆಗಳನ್ನು ನೀಡುವಲ್ಲಿ ಸಾರ್ವಜನಿಕ ವ್ಯಕ್ತಿಗಳ ಜವಾಬ್ದಾರಿಯ ಬಗ್ಗೆ ಚರ್ಚೆಗಳನ್ನು ಹುಟ್ಟುಹಾಕಿದೆ. ಪರಿಸ್ಥಿತಿಯು ತೆರೆದುಕೊಳ್ಳುತ್ತಿದ್ದಂತೆ, ನ್ಯಾಯಾಲಯದ ನಿರ್ಧಾರಗಳನ್ನು ಸಾರ್ವಜನಿಕರು ಮತ್ತು ಸಂಬಂಧಪಟ್ಟ ಪಕ್ಷಗಳು ಸೂಕ್ಷ್ಮವಾಗಿ ಗಮನಿಸುತ್ತವೆ.

ಓದಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಕೆ. ಅಣ್ಣಾಮಲೈ ವಾಗ್ದಾಳಿ..

Last Updated : Jul 29, 2023, 8:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.