ETV Bharat / bharat

‘ನೀವು ನ್ಯಾಯಾಧೀಶರನ್ನು ಕೆರಳಿಸಿರಬೇಕು’: ಕೋಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

author img

By

Published : Aug 4, 2023, 1:19 PM IST

ಅಂಡಮಾನ್ ಮತ್ತು ನಿಕೋಬಾರ್ ಮುಖ್ಯ ಕಾರ್ಯದರ್ಶಿಯನ್ನು ಅಮಾನತುಗೊಳಿಸಿದ ಕೋಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ ಮತ್ತು ಅಸಹಕಾರಕ್ಕಾಗಿ ಲೆಫ್ಟಿನೆಂಟ್​ ಗವರ್ನರ್​ಗೆ ದಂಡ ವಿಧಿಸಿದೆ

Supreme Court stays Calcutta HC order  Andaman Nicobar Islands secretary suspension  Fine UT LG DK Joshi Andaman Nicobar islands  Supreme Court Andaman Nicobar Chief Secretary  ನೀವು ನ್ಯಾಯಾಧೀಶರನ್ನು ಕೆರಳಿಸಿರಬೇಕು  ಕೋಲ್ಕತ್ತಾ ಹೈಕೋರ್ಟ್ ಆದೇಶ  ಕೋಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ  ಮುಖ್ಯ ಕಾರ್ಯದರ್ಶಿಯನ್ನು ಅಮಾನತು  ಅಸಹಕಾರಕ್ಕಾಗಿ ಎಲ್ಜಿಗೆ ದಂಡ  ಸಿಜೆಐ ಡಿವೈ ಚಂದ್ರಚೂಡ್  ದಿನಗೂಲಿ ಕಾರ್ಮಿಕರಿಗೆ ಹೆಚ್ಚಿನ ವೇತನ  You must have got judges riled up  Court tells Andaman Nicobar secretary
ಕೋಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮುಖ್ಯ ಕಾರ್ಯದರ್ಶಿ ಕೇಶವ ಚಂದ್ರ ಅವರನ್ನು ಅಮಾನತುಗೊಳಿಸಿ ಮತ್ತು ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿಕೆ ಜೋಶಿ ಅವರಿಗೆ ದಂಡ ವಿಧಿಸಿ ಕಲ್ಕತ್ತಾ ಹೈಕೋರ್ಟ್‌ನ ಪೋರ್ಟ್ ಬ್ಲೇರ್ ಸರ್ಕ್ಯೂಟ್ ಬೆಂಚ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ನಿರ್ದೇಶನಗಳನ್ನು ಜಾರಿಗೊಳಿಸದಿದ್ದಕ್ಕಾಗಿ ಲೆಫ್ಟಿನೆಂಟ್ ಗವರ್ನರ್ ತನ್ನ ಸ್ವಂತ ನಿಧಿಯಿಂದ 5 ಲಕ್ಷ ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿತ್ತು.

ಭಾರತದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ಮುಂದೆ ಪ್ರಸ್ತಾಪಿಸಿ, ತಕ್ಷಣವೇ ಆದೇಶ ನೀಡುವಂತೆ ಕೋರಿದರು. ಹೈಕೋರ್ಟ್ ನ್ಯಾಯಾಂಗ ನಿಂದನೆ ಅಧಿಕಾರವನ್ನು ಚಲಾಯಿಸಿದೆ ಮತ್ತು ಮುಖ್ಯ ಕಾರ್ಯದರ್ಶಿಯನ್ನು ಅಮಾನತುಗೊಳಿಸಿದೆ ಎಂದು ಎಜಿ ಸೂಚಿಸಿದರು. ಆಗ ಸಿಜೆಐ ಡಿವೈ ಚಂದ್ರಚೂಡ್ ಹಗುರವಾದ ದಾಟಿಯಲ್ಲಿ, "ಆ ಆದೇಶವನ್ನು ಪಡೆಯಲು ನೀವು ಕೆಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿರಬೇಕು" ಎಂದು ಕೇಳಿದರು.

ಈ ಆದೇಶವು ದಿನಗೂಲಿ ಕಾರ್ಮಿಕರನ್ನು ಕಾಯಂಗೊಳಿಸುವುದಕ್ಕೆ ಸಂಬಂಧಿಸಿದೆ ಎಂದು ಲೆಫ್ಟಿನೆಂಟ್​ ಜನರಲ್​​ ಪೀಠಕ್ಕೆ ವಿವರಿಸಿದರು. ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಅರ್ಜಿಯ ಕುರಿತು ನೋಟಿಸ್ ಜಾರಿಗೊಳಿಸಿ ಮುಂದಿನ ಶುಕ್ರವಾರಕ್ಕೆ (ಆಗಸ್ಟ್ 11) ಮುಂದೂಡಿತು.

ಮುಖ್ಯ ಕಾರ್ಯದರ್ಶಿಯನ್ನು ಅಮಾನತುಗೊಳಿಸಿದ ಆದೇಶ ಮತ್ತು ಎಲ್‌ಜಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿರುವುದು ಸ್ವಲ್ಪ ಹೆಚ್ಚು ಎಂದು ಸಿಜೆಐ ಹೇಳಿದರು. ಬಳಿಕ ಹೈಕೋರ್ಟ್​ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್​ ತಡೆಯಾಜ್ಞೆ ನೀಡಿತು.

ಪ್ರಕರಣದ ಹಿನ್ನೆಲೆ: ದಿನಗೂಲಿ ಕಾರ್ಮಿಕರಿಗೆ ಹೆಚ್ಚಿನ ವೇತನ ಹಾಗೂ ತುಟ್ಟಿ ಭತ್ಯೆ ಪಾವತಿ ಮಾಡಬೇಕು ಎನ್ನುವ ತನ್ನ ಆದೇಶ ಉಲ್ಲಂಘಿಸಿದ ಅಂಡಮಾನ್ ನಿಕೋಬಾರ್‌ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿ ಕೇಶವ್‌ ಚಂದ್ರ ಅವರನ್ನು ಕೋಲ್ಕತ್ತ ಹೈಕೋರ್ಟ್‌ನ ಪೋರ್ಟ್‌ ಬ್ಲೇಯರ್‌ ಪೀಠ ಅಮಾನತು ಮಾಡಿತ್ತು. ಅಷ್ಟೇ ಅಲ್ಲದೆ ಲೆಫ್ಟಿನೆಂಟ್‌ ಗವರ್ನರ್‌ ಡಿಕೆ ಜೋಶಿ ಅವರಿಗೆ 5 ಲಕ್ಷ ದಂಡ ವಿಧಿಸಿತ್ತು.

ಕೇಂದ್ರಾಡಳಿತ ಪ್ರದೇಶದ ಆಡಳಿತದಡಿಯಲ್ಲಿದ್ದ ಸುಮಾರು 4 ಸಾವಿರ ದಿನಗೂಲಿ ಕಾರ್ಮಿಕರಿಗೆ (Daily Rated Mazdoors) ವೇತನ ಹಾಗೂ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಕಳೆದ ವರ್ಷ ಡಿಸೆಂಬರ್‌ 19ರಂದು ಆದೇಶಿಸಿತ್ತು. ಆದರೆ ಅದನ್ನು ಪಾವತಿ ಮಾಡಲು ಆಡಳಿತ ವಿಫಲವಾಗಿತ್ತು. ಪ್ರಕರಣದಲ್ಲಿ ಮುಖ್ಯ ಕಾರ್ಯದರ್ಶಿ ಹಾಗೂ ಲೆಫ್ಟಿನೆಂಟ್ ಗವರ್ನರ್‌ ಅವರು ತಪ್ಪಿತಸ್ಥರು ಎಂದು ಹೇಳಿರುವ ಹೈಕೋರ್ಟ್, ಮುಖ್ಯ ಕಾರ್ಯದರ್ಶಿ ಅವರನ್ನು ಅಮಾನತು ಮಾಡಿ ಲೆಫ್ಟಿನೆಂಟ್‌ ಗವರ್ನರ್‌ಗೆ ದಂಡ ವಿಧಿಸಿತ್ತು.

ಅಂಡಮಾನ್ ನಿಕೋಬಾರ್‌ ಆಡಳಿತದ ಸುಮಾರು 4 ಸಾವಿರ ಮಂದಿ ದಿನಗೂಲಿ ನೌಕರರು 1986ರ ಸುಪ್ರೀಂ ಕೋರ್ಟ್‌ ತೀರ್ಪಿನ ಅನ್ವಯ ಸಿಗಬೇಕಾದ ವೇತನ ಹಾಗೂ ತುಟ್ಟಿ ಭತ್ಯೆ ಪಡೆಯುತ್ತಿರಲಿಲ್ಲ. 2022ರ ಸೆಪ್ಟೆಂಬರ್‌ 22 ರಂದು ಆಯ್ದ ಕೆಲ ದಿನಗೂಲಿ ಕಾರ್ಮಿಕರಿಗೆ ವೇತನ ಹಾಗೂ ತುಟ್ಟಿ ಭತ್ಯೆಯನ್ನು ಆಡಳಿತ ಹೆಚ್ಚಳ ಮಾಡಿತ್ತು. ಇದನ್ನು ಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿತ್ತು. ಇದಾದ ಬಳಿಕ 2023 ಮೇ 9 ರಿಂದ ಅನ್ವಯವಾಗುವಂತೆ ಉಳಿದ ನೌಕರರಿಗೂ ವೇತನ ಹೆಚ್ಚಳ ಮಾಡುವುದಾಗಿ ಆಡಳಿತ ಘೋಷಿಸಿತ್ತು.

ಮುಖ್ಯ ಕಾರ್ಯದರ್ಶಿ ಹಾಗೂ ಲೆಫ್ಟಿನೆಂಟ್‌ ಗವರ್ನರ್‌ ಅವರ ಈ ನಡೆ ನ್ಯಾಯಾಂಗ ನಿಂದನೆ ಎಂದು ಹೈಕೋರ್ಟ್‌ ಈ ಕ್ರಮ ತೆಗೆದುಕೊಂಡಿದೆ. ಆಡಳಿತ ಈ ನಡವಳಿಕೆಯನ್ನು ಗಮನದಲ್ಲಿಟ್ಟುಕೊಂಡು, ಅಂಡಮಾನ್ ಮತ್ತು ನಿಕೋಬಾರ್ ಆಡಳಿತದ ಮುಖ್ಯ ಕಾರ್ಯದರ್ಶಿ ಕೇಶವ ಚಂದ್ರ ಅವರನ್ನು ತಕ್ಷಣವೇ ಅಮಾನತುಗೊಳಿಸುವಂತೆ ನಿರ್ದೇಶಿಸುವುದನ್ನು ಬಿಟ್ಟು ಈ ನ್ಯಾಯಾಲಯವು ಯಾವುದೇ ಆಯ್ಕೆ ಇಲ್ಲ. ನಂತರದ ಹಿರಿಯ ಅಧಿಕಾರಿ ಮುಖ್ಯ ಕಾರ್ಯದರ್ಶಿಯ ಕೆಲಸವನ್ನು ವಹಿಸಿಕೊಳ್ಳಲಿದ್ದಾರೆ ಎಂದು ನ್ಯಾಯಮೂರ್ತಿ ರಾಜಶೇಖರ್ ಮಂಥಾ ಮತ್ತು ನ್ಯಾಯಮೂರ್ತಿ ಬಿಭಾಸ್ ರಂಜನ್ ಡೆ ಅವರು ಹೊರಡಿಸಿದ ಆದೇಶದಲ್ಲಿ ಹೇಳಲಾಗಿತ್ತು.

ಅಲ್ಲದೆ ಲೆಫ್ಟಿನೆಂಟ್‌ ಗವರ್ನರ್‌ ಅವರ ನಡವಳಿಕೆಯನ್ನು ಗಮನಿಸಿ, ಅವರ ಸ್ವಂತ ನಿಧಿಯಿಂದ 5 ಲಕ್ಷವನ್ನು ಕೋಲ್ಕತ್ತ ಹೈಕೋರ್ಟ್‌ನ ಪೋರ್ಟ್ ಬ್ಲೇರ್ ಪೀಠದ ರಿಜಿಸ್ಟ್ರಾರ್‌ನಲ್ಲಿ 7 ದಿನಗಳ ಒಳಗಾಗಿ ಠೇವಣಿ ಇಡುವಂತೆ ಕೋರ್ಟ್‌ ನಿರ್ದೇಶಿಸುತ್ತದೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಓದಿ: ''ಸಂವಿಧಾನದ 370ನೇ ವಿಧಿಯು ಶಾಶ್ವತ ಲಕ್ಷಣವನ್ನು ಪಡೆದುಕೊಂಡಿದೆಯೇ ಎಂಬುದು ಚರ್ಚಾಸ್ಪದವಾಗಿದೆ'': ಕಪಿಲ್ ಸಿಬಲ್‌ಗೆ ತಿಳಿಸಿದ ಸುಪ್ರೀಂ ಕೋರ್ಟ್​..

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮುಖ್ಯ ಕಾರ್ಯದರ್ಶಿ ಕೇಶವ ಚಂದ್ರ ಅವರನ್ನು ಅಮಾನತುಗೊಳಿಸಿ ಮತ್ತು ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿಕೆ ಜೋಶಿ ಅವರಿಗೆ ದಂಡ ವಿಧಿಸಿ ಕಲ್ಕತ್ತಾ ಹೈಕೋರ್ಟ್‌ನ ಪೋರ್ಟ್ ಬ್ಲೇರ್ ಸರ್ಕ್ಯೂಟ್ ಬೆಂಚ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ನಿರ್ದೇಶನಗಳನ್ನು ಜಾರಿಗೊಳಿಸದಿದ್ದಕ್ಕಾಗಿ ಲೆಫ್ಟಿನೆಂಟ್ ಗವರ್ನರ್ ತನ್ನ ಸ್ವಂತ ನಿಧಿಯಿಂದ 5 ಲಕ್ಷ ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿತ್ತು.

ಭಾರತದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ಮುಂದೆ ಪ್ರಸ್ತಾಪಿಸಿ, ತಕ್ಷಣವೇ ಆದೇಶ ನೀಡುವಂತೆ ಕೋರಿದರು. ಹೈಕೋರ್ಟ್ ನ್ಯಾಯಾಂಗ ನಿಂದನೆ ಅಧಿಕಾರವನ್ನು ಚಲಾಯಿಸಿದೆ ಮತ್ತು ಮುಖ್ಯ ಕಾರ್ಯದರ್ಶಿಯನ್ನು ಅಮಾನತುಗೊಳಿಸಿದೆ ಎಂದು ಎಜಿ ಸೂಚಿಸಿದರು. ಆಗ ಸಿಜೆಐ ಡಿವೈ ಚಂದ್ರಚೂಡ್ ಹಗುರವಾದ ದಾಟಿಯಲ್ಲಿ, "ಆ ಆದೇಶವನ್ನು ಪಡೆಯಲು ನೀವು ಕೆಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿರಬೇಕು" ಎಂದು ಕೇಳಿದರು.

ಈ ಆದೇಶವು ದಿನಗೂಲಿ ಕಾರ್ಮಿಕರನ್ನು ಕಾಯಂಗೊಳಿಸುವುದಕ್ಕೆ ಸಂಬಂಧಿಸಿದೆ ಎಂದು ಲೆಫ್ಟಿನೆಂಟ್​ ಜನರಲ್​​ ಪೀಠಕ್ಕೆ ವಿವರಿಸಿದರು. ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಅರ್ಜಿಯ ಕುರಿತು ನೋಟಿಸ್ ಜಾರಿಗೊಳಿಸಿ ಮುಂದಿನ ಶುಕ್ರವಾರಕ್ಕೆ (ಆಗಸ್ಟ್ 11) ಮುಂದೂಡಿತು.

ಮುಖ್ಯ ಕಾರ್ಯದರ್ಶಿಯನ್ನು ಅಮಾನತುಗೊಳಿಸಿದ ಆದೇಶ ಮತ್ತು ಎಲ್‌ಜಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿರುವುದು ಸ್ವಲ್ಪ ಹೆಚ್ಚು ಎಂದು ಸಿಜೆಐ ಹೇಳಿದರು. ಬಳಿಕ ಹೈಕೋರ್ಟ್​ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್​ ತಡೆಯಾಜ್ಞೆ ನೀಡಿತು.

ಪ್ರಕರಣದ ಹಿನ್ನೆಲೆ: ದಿನಗೂಲಿ ಕಾರ್ಮಿಕರಿಗೆ ಹೆಚ್ಚಿನ ವೇತನ ಹಾಗೂ ತುಟ್ಟಿ ಭತ್ಯೆ ಪಾವತಿ ಮಾಡಬೇಕು ಎನ್ನುವ ತನ್ನ ಆದೇಶ ಉಲ್ಲಂಘಿಸಿದ ಅಂಡಮಾನ್ ನಿಕೋಬಾರ್‌ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿ ಕೇಶವ್‌ ಚಂದ್ರ ಅವರನ್ನು ಕೋಲ್ಕತ್ತ ಹೈಕೋರ್ಟ್‌ನ ಪೋರ್ಟ್‌ ಬ್ಲೇಯರ್‌ ಪೀಠ ಅಮಾನತು ಮಾಡಿತ್ತು. ಅಷ್ಟೇ ಅಲ್ಲದೆ ಲೆಫ್ಟಿನೆಂಟ್‌ ಗವರ್ನರ್‌ ಡಿಕೆ ಜೋಶಿ ಅವರಿಗೆ 5 ಲಕ್ಷ ದಂಡ ವಿಧಿಸಿತ್ತು.

ಕೇಂದ್ರಾಡಳಿತ ಪ್ರದೇಶದ ಆಡಳಿತದಡಿಯಲ್ಲಿದ್ದ ಸುಮಾರು 4 ಸಾವಿರ ದಿನಗೂಲಿ ಕಾರ್ಮಿಕರಿಗೆ (Daily Rated Mazdoors) ವೇತನ ಹಾಗೂ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಕಳೆದ ವರ್ಷ ಡಿಸೆಂಬರ್‌ 19ರಂದು ಆದೇಶಿಸಿತ್ತು. ಆದರೆ ಅದನ್ನು ಪಾವತಿ ಮಾಡಲು ಆಡಳಿತ ವಿಫಲವಾಗಿತ್ತು. ಪ್ರಕರಣದಲ್ಲಿ ಮುಖ್ಯ ಕಾರ್ಯದರ್ಶಿ ಹಾಗೂ ಲೆಫ್ಟಿನೆಂಟ್ ಗವರ್ನರ್‌ ಅವರು ತಪ್ಪಿತಸ್ಥರು ಎಂದು ಹೇಳಿರುವ ಹೈಕೋರ್ಟ್, ಮುಖ್ಯ ಕಾರ್ಯದರ್ಶಿ ಅವರನ್ನು ಅಮಾನತು ಮಾಡಿ ಲೆಫ್ಟಿನೆಂಟ್‌ ಗವರ್ನರ್‌ಗೆ ದಂಡ ವಿಧಿಸಿತ್ತು.

ಅಂಡಮಾನ್ ನಿಕೋಬಾರ್‌ ಆಡಳಿತದ ಸುಮಾರು 4 ಸಾವಿರ ಮಂದಿ ದಿನಗೂಲಿ ನೌಕರರು 1986ರ ಸುಪ್ರೀಂ ಕೋರ್ಟ್‌ ತೀರ್ಪಿನ ಅನ್ವಯ ಸಿಗಬೇಕಾದ ವೇತನ ಹಾಗೂ ತುಟ್ಟಿ ಭತ್ಯೆ ಪಡೆಯುತ್ತಿರಲಿಲ್ಲ. 2022ರ ಸೆಪ್ಟೆಂಬರ್‌ 22 ರಂದು ಆಯ್ದ ಕೆಲ ದಿನಗೂಲಿ ಕಾರ್ಮಿಕರಿಗೆ ವೇತನ ಹಾಗೂ ತುಟ್ಟಿ ಭತ್ಯೆಯನ್ನು ಆಡಳಿತ ಹೆಚ್ಚಳ ಮಾಡಿತ್ತು. ಇದನ್ನು ಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿತ್ತು. ಇದಾದ ಬಳಿಕ 2023 ಮೇ 9 ರಿಂದ ಅನ್ವಯವಾಗುವಂತೆ ಉಳಿದ ನೌಕರರಿಗೂ ವೇತನ ಹೆಚ್ಚಳ ಮಾಡುವುದಾಗಿ ಆಡಳಿತ ಘೋಷಿಸಿತ್ತು.

ಮುಖ್ಯ ಕಾರ್ಯದರ್ಶಿ ಹಾಗೂ ಲೆಫ್ಟಿನೆಂಟ್‌ ಗವರ್ನರ್‌ ಅವರ ಈ ನಡೆ ನ್ಯಾಯಾಂಗ ನಿಂದನೆ ಎಂದು ಹೈಕೋರ್ಟ್‌ ಈ ಕ್ರಮ ತೆಗೆದುಕೊಂಡಿದೆ. ಆಡಳಿತ ಈ ನಡವಳಿಕೆಯನ್ನು ಗಮನದಲ್ಲಿಟ್ಟುಕೊಂಡು, ಅಂಡಮಾನ್ ಮತ್ತು ನಿಕೋಬಾರ್ ಆಡಳಿತದ ಮುಖ್ಯ ಕಾರ್ಯದರ್ಶಿ ಕೇಶವ ಚಂದ್ರ ಅವರನ್ನು ತಕ್ಷಣವೇ ಅಮಾನತುಗೊಳಿಸುವಂತೆ ನಿರ್ದೇಶಿಸುವುದನ್ನು ಬಿಟ್ಟು ಈ ನ್ಯಾಯಾಲಯವು ಯಾವುದೇ ಆಯ್ಕೆ ಇಲ್ಲ. ನಂತರದ ಹಿರಿಯ ಅಧಿಕಾರಿ ಮುಖ್ಯ ಕಾರ್ಯದರ್ಶಿಯ ಕೆಲಸವನ್ನು ವಹಿಸಿಕೊಳ್ಳಲಿದ್ದಾರೆ ಎಂದು ನ್ಯಾಯಮೂರ್ತಿ ರಾಜಶೇಖರ್ ಮಂಥಾ ಮತ್ತು ನ್ಯಾಯಮೂರ್ತಿ ಬಿಭಾಸ್ ರಂಜನ್ ಡೆ ಅವರು ಹೊರಡಿಸಿದ ಆದೇಶದಲ್ಲಿ ಹೇಳಲಾಗಿತ್ತು.

ಅಲ್ಲದೆ ಲೆಫ್ಟಿನೆಂಟ್‌ ಗವರ್ನರ್‌ ಅವರ ನಡವಳಿಕೆಯನ್ನು ಗಮನಿಸಿ, ಅವರ ಸ್ವಂತ ನಿಧಿಯಿಂದ 5 ಲಕ್ಷವನ್ನು ಕೋಲ್ಕತ್ತ ಹೈಕೋರ್ಟ್‌ನ ಪೋರ್ಟ್ ಬ್ಲೇರ್ ಪೀಠದ ರಿಜಿಸ್ಟ್ರಾರ್‌ನಲ್ಲಿ 7 ದಿನಗಳ ಒಳಗಾಗಿ ಠೇವಣಿ ಇಡುವಂತೆ ಕೋರ್ಟ್‌ ನಿರ್ದೇಶಿಸುತ್ತದೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಓದಿ: ''ಸಂವಿಧಾನದ 370ನೇ ವಿಧಿಯು ಶಾಶ್ವತ ಲಕ್ಷಣವನ್ನು ಪಡೆದುಕೊಂಡಿದೆಯೇ ಎಂಬುದು ಚರ್ಚಾಸ್ಪದವಾಗಿದೆ'': ಕಪಿಲ್ ಸಿಬಲ್‌ಗೆ ತಿಳಿಸಿದ ಸುಪ್ರೀಂ ಕೋರ್ಟ್​..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.