ಮುಂಬೈ: ತೌಕ್ತೆ ಚಂಡಮಾರುತದ ಅಬ್ಬರದಿಂದಾಗಿ ಮಹಾರಾಷ್ಟ್ರದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಗಾಳಿ ಮಿಶ್ರಿತ ಮಳೆ ಸುರಿಯುತ್ತಿದ್ದು, ಇದರಿಂದ ಅನೇಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇದರ ಮಧ್ಯೆ ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯವೊಂದು ಭೀಕರವಾಗಿದೆ.
ಮುಂಬೈನ ಮಲಾಡ್ ಪ್ರದೇಶದಲ್ಲಿ ಮರದ ಕೊಂಬೆ ಬಿದ್ದು ಯುವಕನೋರ್ವ ಸಾವನ್ನಪ್ಪಿದ್ದಾನೆ. ಜನರಲ್ ಸ್ಟೋರ್ ಮುಂದೆ ನಿಂತಿದ್ದ ಯುವಕನೋರ್ವ ತಾನು ನಿಲ್ಲಿಸಿದ್ದ ಬೈಕ್ ಮೇಲೆ ಹತ್ತಲು ಹೋಗುತ್ತಿದ್ದ ವೇಳೆ ದಿಢೀರ್ ಆಗಿ ಕೊಂಬೆ ಮುರಿದು ಅತನ ಮೇಲೆ ಬಿದ್ದಿದೆ. ಇದರಿಂದ ಆತನ ತಲೆಗೆ ಗಂಭೀರವಾದ ಗಾಯಗಳಾಗಿವೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಗಂಭೀರವಾಗಿ ಗಾಯಗೊಂಡ ಜೈಸ್ವಾಲ್ನನ್ನ ಸಿಯಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಬರೋಬ್ಬರಿ 13 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಆದರೆ ನಿನ್ನೆ ಆತ ಸಾವನ್ನಪ್ಪಿದ್ದಾನೆ. ಮೂಲತಃ ಉತ್ತರ ಪ್ರದೇಶದವರಾದ ಜೈಸ್ವಾಲ್ ಮಹಾರಾಷ್ಟ್ರದ ಕಿರಾಣಿ ಶಾಪ್ವೊಂದರಲ್ಲಿ ಕೆಲಸ ಮಾಡ್ತಿದ್ದು, ಅವರ ಪತ್ನಿ ಮತ್ತು ಮಕ್ಕಳು ಅಲ್ಲೇ ವಾಸವಾಗಿದ್ದಾರೆ. ಕುಟುಂಬದ ಸಂಪೂರ್ಣ ಜವಾಬ್ದಾರಿ ಈತನ ಮೇಲಿದೆ. ಇದೀಗ ದಿಢೀರ್ ಆಗಿ ಸಾವನ್ನಪ್ಪಿದ್ದರಿಂದ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ. ಜೈಸ್ವಾಲ್ಗೆ ಇದೀಗ ಸರ್ಕಾರ ಮತ್ತು ಪುರಸಭೆ ಆರ್ಥಿಕ ನೆರವು ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.