ETV Bharat / bharat

ಪೆಗಾಸಸ್​ ಬೇಹುಗಾರಿಕೆ ಆರೋಪ.. ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್​ ಪ್ರತಿಭಟನೆ

author img

By

Published : Feb 2, 2022, 12:37 PM IST

ಪ್ರತಿಪಕ್ಷಗಳ ನಾಯಕರು, ನ್ಯಾಯಾಧೀಶರು, ಪತ್ರಕರ್ತರು, ನಾಗರಿಕರ ಮೇಲೆ ಪೆಗಾಸಸ್ ಸಾಫ್ಟ್‌ವೇರ್‌ನಿಂದ ಬೇಹುಗಾರಿಕೆ ಮತ್ತು ಬ್ಲ್ಯಾಕ್‌ಮೇಲ್​ ಮಾಡುವುದು ಗಂಭೀರ ವಿಷಯವಾಗಿದೆ. ಇದರ ವಿರುದ್ಧ ಕಾಂಗ್ರೆಸ್​ ಹೋರಾಡಲಿದೆ ಎಂದು ಭಾರತೀಯ ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ಹೇಳಿದ್ದಾರೆ.

Youth Congress
ಯುವ ಕಾಂಗ್ರೆಸ್

ನವದೆಹಲಿ: ಸ್ಪೈವೇರ್‌ ಸಾಫ್ಟ್‌ವೇರ್‌ ಆದ ಪೆಗಾಸಸ್‌ ಅನ್ನು ಬಳಸಿಕೊಂಡು ಕೇಂದ್ರ ಸರ್ಕಾರ ರಾಜಕಾರಣಿಗಳು, ಪತ್ರಕರ್ತರ ಮೇಲೆ ಗೂಢಚರ್ಯೆ ನಡೆಸುತ್ತಿದೆ ಎಂಬ ಆಪಾದನೆಯ ವಿರುದ್ಧ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ನಡೆಯುವ ಚರ್ಚೆಯ ವೇಳೆ ಸಂಸತ್​ ಹೊರಗಡೆ ಇಂದು ಪ್ರತಿಭಟನೆ ನಡೆಸಲಾಗುವುದು ಎಂದು ಯುವ ಕಾಂಗ್ರೆಸ್​ ತಿಳಿಸಿದೆ.

ಪ್ರತಿಪಕ್ಷಗಳ ನಾಯಕರು, ನ್ಯಾಯಾಧೀಶರು, ಪತ್ರಕರ್ತರು, ನಾಗರಿಕರ ಮೇಲೆ ಪೆಗಾಸಸ್ ಸಾಫ್ಟ್‌ವೇರ್‌ನಿಂದ ಬೇಹುಗಾರಿಕೆ ಮತ್ತು ಬ್ಲ್ಯಾಕ್‌ಮೇಲ್​ ಮಾಡುವುದು ಗಂಭೀರ ವಿಷಯವಾಗಿದೆ. ಇದರ ವಿರುದ್ಧ ಕಾಂಗ್ರೆಸ್​ ಹೋರಾಡಲಿದೆ ಎಂದು ಭಾರತೀಯ ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ಹೇಳಿದ್ದಾರೆ.

ಪೆಗಾಸಸ್​ ಬಳಸಿ ಗೂಢಚರ್ಯೆ ನಡೆಸಲಾಗುತ್ತಿದೆಯೇ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಸದನದಲ್ಲಿ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದಾಗ ಈ ಬಗ್ಗೆ ಪ್ರಧಾನಿಗಳು ಸಮಂಜಸ ಉತ್ತರ ನೀಡಿಲ್ಲ. ಇದಕ್ಕೆ ಇಂಬು ನೀಡುವಂತೆ ನ್ಯೂಯಾರ್ಕ್​ ಟೈಮ್ಸ್​ ಸೇರಿದಂತೆ ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಬಿತ್ತರವಾಗಿವೆ. ಹೀಗಾಗಿ ಕೇಂದ್ರದಿಂದ ಬೇಹುಗಾರಿಕೆ ನಡೆಯುತ್ತಿದೆ ಎಂದು ಶ್ರೀನಿವಾಸ್​ ಆರೋಪಿಸಿದರು.

ದೇಶದ ನಾಗರಿಕರ ಮೂಲ ಹಕ್ಕುಗಳನ್ನು ದಮನ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ದೇಶದ್ರೋಹದ ಕೆಲಸ ಮಾಡುತ್ತಿದೆ. ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಆಟವಾಡುತ್ತಿದೆ. ಪೆಗಾಸಸ್​ ಅನ್ನು ಉಗ್ರವಾದದ ವಿರುದ್ಧ ಹೋರಾಡಲು ಬಳಕೆ ಮಾಡಲಾಗುತ್ತದೆ. ಆದರೆ, ಕೇಂದ್ರ ಸರ್ಕಾರ ತನ್ನ ವಿರೋಧಿಗಳ ವಿರುದ್ಧ ಇದನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ. ಹೀಗಾಗಿ ಕೇಸರಿ ಪಕ್ಷವನ್ನು ಬಿಜೆಪಿಯ ಬದಲಾಗಿ 'ಜಾಸೂಸ್​ ಪಕ್ಷ' ಎಂದು ಹೆಸರಿಡಬೇಕು ಎಂದು ಹರಿಹಾಯ್ದಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ನವದೆಹಲಿ: ಸ್ಪೈವೇರ್‌ ಸಾಫ್ಟ್‌ವೇರ್‌ ಆದ ಪೆಗಾಸಸ್‌ ಅನ್ನು ಬಳಸಿಕೊಂಡು ಕೇಂದ್ರ ಸರ್ಕಾರ ರಾಜಕಾರಣಿಗಳು, ಪತ್ರಕರ್ತರ ಮೇಲೆ ಗೂಢಚರ್ಯೆ ನಡೆಸುತ್ತಿದೆ ಎಂಬ ಆಪಾದನೆಯ ವಿರುದ್ಧ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ನಡೆಯುವ ಚರ್ಚೆಯ ವೇಳೆ ಸಂಸತ್​ ಹೊರಗಡೆ ಇಂದು ಪ್ರತಿಭಟನೆ ನಡೆಸಲಾಗುವುದು ಎಂದು ಯುವ ಕಾಂಗ್ರೆಸ್​ ತಿಳಿಸಿದೆ.

ಪ್ರತಿಪಕ್ಷಗಳ ನಾಯಕರು, ನ್ಯಾಯಾಧೀಶರು, ಪತ್ರಕರ್ತರು, ನಾಗರಿಕರ ಮೇಲೆ ಪೆಗಾಸಸ್ ಸಾಫ್ಟ್‌ವೇರ್‌ನಿಂದ ಬೇಹುಗಾರಿಕೆ ಮತ್ತು ಬ್ಲ್ಯಾಕ್‌ಮೇಲ್​ ಮಾಡುವುದು ಗಂಭೀರ ವಿಷಯವಾಗಿದೆ. ಇದರ ವಿರುದ್ಧ ಕಾಂಗ್ರೆಸ್​ ಹೋರಾಡಲಿದೆ ಎಂದು ಭಾರತೀಯ ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ಹೇಳಿದ್ದಾರೆ.

ಪೆಗಾಸಸ್​ ಬಳಸಿ ಗೂಢಚರ್ಯೆ ನಡೆಸಲಾಗುತ್ತಿದೆಯೇ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಸದನದಲ್ಲಿ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದಾಗ ಈ ಬಗ್ಗೆ ಪ್ರಧಾನಿಗಳು ಸಮಂಜಸ ಉತ್ತರ ನೀಡಿಲ್ಲ. ಇದಕ್ಕೆ ಇಂಬು ನೀಡುವಂತೆ ನ್ಯೂಯಾರ್ಕ್​ ಟೈಮ್ಸ್​ ಸೇರಿದಂತೆ ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಬಿತ್ತರವಾಗಿವೆ. ಹೀಗಾಗಿ ಕೇಂದ್ರದಿಂದ ಬೇಹುಗಾರಿಕೆ ನಡೆಯುತ್ತಿದೆ ಎಂದು ಶ್ರೀನಿವಾಸ್​ ಆರೋಪಿಸಿದರು.

ದೇಶದ ನಾಗರಿಕರ ಮೂಲ ಹಕ್ಕುಗಳನ್ನು ದಮನ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ದೇಶದ್ರೋಹದ ಕೆಲಸ ಮಾಡುತ್ತಿದೆ. ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಆಟವಾಡುತ್ತಿದೆ. ಪೆಗಾಸಸ್​ ಅನ್ನು ಉಗ್ರವಾದದ ವಿರುದ್ಧ ಹೋರಾಡಲು ಬಳಕೆ ಮಾಡಲಾಗುತ್ತದೆ. ಆದರೆ, ಕೇಂದ್ರ ಸರ್ಕಾರ ತನ್ನ ವಿರೋಧಿಗಳ ವಿರುದ್ಧ ಇದನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ. ಹೀಗಾಗಿ ಕೇಸರಿ ಪಕ್ಷವನ್ನು ಬಿಜೆಪಿಯ ಬದಲಾಗಿ 'ಜಾಸೂಸ್​ ಪಕ್ಷ' ಎಂದು ಹೆಸರಿಡಬೇಕು ಎಂದು ಹರಿಹಾಯ್ದಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.