ದೇವನಹಳ್ಳಿ: ಕೋವಿಡ್-19 ಪರಿಸ್ಥಿತಿಯಿಂದಾಗಿ ಬಹ್ರೇನ್ನಲ್ಲಿ ಸಿಲುಕಿದ್ದ ಕನ್ನಡಿಗರು ಇಂದು ತಾಯ್ನಾಡಿಗೆ ಮರಳಿದ್ದಾರೆ.
ಇಂದು ಸಂಜೆ 5.30 ಗಂಟೆಗೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೆಂಗಳೂರಿಗೆ ಆಗಮಿಸಿದ 36ನೇ ಏರ್ ಇಂಡಿಯಾ ವಿಮಾನದಲ್ಲಿ 2 ಮಕ್ಕಳು, 113 ಪುರುಷರು ಹಾಗೂ 54 ಮಹಿಳೆಯರು ಸೇರಿದಂತೆ ಒಟ್ಟು 169 ಮಂದಿ ಪ್ರಯಾಣಿಕರು ಆಗಮಿಸಿದ್ದಾರೆ.
![169 passengers from Bahrain to Bangalore airport](https://etvbharatimages.akamaized.net/etvbharat/prod-images/09:51_kn-bng-03-kial-avb-7208821_13062020214100_1306f_1592064660_945.jpg)