ETV Bharat / briefs

ಕಾಳಸಂತೆಯಲ್ಲಿ ಅಕ್ರಮ ಆಕ್ಸಿಜನ್ ಸಿಲಿಂಡರ್ ಮಾರಾಟ; ಓರ್ವನ ಬಂಧನ

ಕೊಳ್ಳೇಗಾಲದಲ್ಲಿ ಅಕ್ರಮವಾಗಿ ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ‌ ಮಾಡುತ್ತಿದ್ದ ವ್ಯಕ್ತಿ‌ಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

author img

By

Published : May 2, 2021, 6:18 PM IST

Kollegal
Kollegal

ಕೊಳ್ಳೇಗಾಲ(ಚಾಮರಾಜನಗರ): ಕಾಳಸಂತೆಯಲ್ಲಿ ಅಕ್ರಮವಾಗಿ ಆಕ್ಸಿಜನ್ ಸಿಲಿಂಡರ್ ಮಾರಾಟ‌ ಮಾಡುತ್ತಿದ್ದ ವ್ಯಕ್ತಿ‌ಯೋರ್ವನನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.

ನಗರದ ಪೀಸ್ ಪಾರ್ಕ್ ರಸ್ತೆಯ ಸಮೀಪ ನಿವಾಸಿ ಶ್ರೀನಿವಾಸ್ (55) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ಅಕ್ರಮವಾಗಿ ಆಕ್ಸಿಜನ್ ಸಿಲಿಂಡರ್​ಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂಬ ದೂರಿನ ಮೇರೆಗೆ ತಹಶೀಲ್ದಾರ್ ಕುನಾಲ್ ಮಾಹಿತಿ ಆಧರಿಸಿದ ಡಿವೈಎಸ್ಪಿ ನಾಗರಾಜು ಹಾಗೂ ವೃತ್ತ ನಿರೀಕ್ಷಕ ಶಿವರಾಜ್ ಬಿ. ಮುಧೋಳ್ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಲಾಗಿದ್ದು, ಆರೋಪಿ ಶ್ರೀನಿವಾಸ್ ಎಂಬುವನನ್ನು ಬಂಧಿಸಿದ್ದಾರೆ.

ಬಂಧಿತನಿಂದ 12 ಆಕ್ಸಿಜನ್ ಸಿಲಿಂಡರ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ‌ 7 ಖಾಲಿ ಸಿಲಿಂಡರ್​ಗಳಾಗಿವೆ. ಸದ್ಯದ ಪರಿಸ್ಥಿತಿಯಲ್ಲಿ ಆಕ್ಸಿಜನ್​ಗೆ ಬಹಳ ಬೇಡಿಕೆ ಇರುವುದರಿಂದ ಈತ ಕಾಳಸಂತೆಯಲ್ಲಿ ಗ್ರಾಹಕರಿಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ರಾಷ್ಟೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲಾಗಿದೆ.

ಕೊಳ್ಳೇಗಾಲ(ಚಾಮರಾಜನಗರ): ಕಾಳಸಂತೆಯಲ್ಲಿ ಅಕ್ರಮವಾಗಿ ಆಕ್ಸಿಜನ್ ಸಿಲಿಂಡರ್ ಮಾರಾಟ‌ ಮಾಡುತ್ತಿದ್ದ ವ್ಯಕ್ತಿ‌ಯೋರ್ವನನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.

ನಗರದ ಪೀಸ್ ಪಾರ್ಕ್ ರಸ್ತೆಯ ಸಮೀಪ ನಿವಾಸಿ ಶ್ರೀನಿವಾಸ್ (55) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ಅಕ್ರಮವಾಗಿ ಆಕ್ಸಿಜನ್ ಸಿಲಿಂಡರ್​ಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂಬ ದೂರಿನ ಮೇರೆಗೆ ತಹಶೀಲ್ದಾರ್ ಕುನಾಲ್ ಮಾಹಿತಿ ಆಧರಿಸಿದ ಡಿವೈಎಸ್ಪಿ ನಾಗರಾಜು ಹಾಗೂ ವೃತ್ತ ನಿರೀಕ್ಷಕ ಶಿವರಾಜ್ ಬಿ. ಮುಧೋಳ್ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಲಾಗಿದ್ದು, ಆರೋಪಿ ಶ್ರೀನಿವಾಸ್ ಎಂಬುವನನ್ನು ಬಂಧಿಸಿದ್ದಾರೆ.

ಬಂಧಿತನಿಂದ 12 ಆಕ್ಸಿಜನ್ ಸಿಲಿಂಡರ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ‌ 7 ಖಾಲಿ ಸಿಲಿಂಡರ್​ಗಳಾಗಿವೆ. ಸದ್ಯದ ಪರಿಸ್ಥಿತಿಯಲ್ಲಿ ಆಕ್ಸಿಜನ್​ಗೆ ಬಹಳ ಬೇಡಿಕೆ ಇರುವುದರಿಂದ ಈತ ಕಾಳಸಂತೆಯಲ್ಲಿ ಗ್ರಾಹಕರಿಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ರಾಷ್ಟೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.