ಯಾದಗಿರಿ: ಬರ ಪರಿಶೀಲನೆಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಯನ್ನು ಕಂಡು ವೈದ್ಯಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಬುಧವಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಜಿಲ್ಲೆಯ ಬರ ಪರಿಶೀಲನೆಗೆಂದು ಆಗಮಿಸಿದ್ದ ವೇಳೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಾಮಾನ್ಯ ವಾರ್ಡ್ನಲ್ಲಿದ್ದ ರೋಗಿಗಳನ್ನು ಅಲ್ಲಿನ ವ್ಯವಸ್ಥೆ ಕುರಿತು ವಿಚಾರಿಸಿದ್ದಾರೆ. ಅವ್ಯವಸ್ಥೆಯ ಆಗರ ಕಂಡು ವೈದ್ಯಾಧಿಕಾರಿಗಳ ಮೇಲೆ ಗರಂ ಆಗಿದ್ದಾರೆ. ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುವಂತೆ ಆಡಳಿತ ಮಂಡಳಿಗೆ ಹಾಗೂ ವೈದ್ಯರಿಗೆ ಎಚ್ಚರಿಕೆ ನೀಡಿದ್ದಾರೆ.
ಡಯಾಲಿಸಿಸ್ ಚಿಕಿತ್ಸೆ ಕೋಣೆಯಲ್ಲಿನ ವೃದ್ಧೆಯನ್ನು ಮಾತನಾಡಿಸಿದ್ದಾರೆ. ವೈದ್ಯರು ಸರಿಯಾಗಿ ಸ್ಪಂದಿಸುತ್ತಿಲ್ಲ. ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂದು ವೃದ್ಧೆ ಅಲ್ಲಿನ ಸಮಸ್ಯೆಯನ್ನು ಬಿಚ್ಚಿಟ್ಟಾದ್ದಾರೆ. ಇದರಿಂದ ಬಿ.ಎಸ್.ವೈ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.
ಜಿಲ್ಲಾಸ್ಪತ್ರೆ ಸರ್ಜನ್ ಸಂಜಯ್ ಸ್ಥಳಕ್ಕೆ ದೌಡಾಯಿಸಿ, ಆಸ್ಪತ್ರೆಯ ಕುರಿತು ಮಾಹಿತಿ ನೀಡಿದರು. ಮಾಹಿತಿ ಪಡೆದುಕೊಂಡ ಬಿ.ಎಸ್.ವೈ, ಕೋಣೆಗಳು, ಹಾಸಿಗೆಗಳ ಸ್ವಚ್ಚತೆ ಕಾಪಾಡುವಂತೆ ಸೂಚಿಸಿದರು.