ETV Bharat / briefs

ಅತೃಪ್ತರ ಜೊತೆ ಸಿಎಂ ಒನ್ ಟು ಒನ್ ಮೀಟಿಂಗ್​​: ಶಿವರಾಮ್ ಹೆಬ್ಬಾರ್ ಮನವೊಲಿಸಿದ್ರಾ ಹೆಚ್​ಡಿಕೆ - undefined

ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಸಿ.ಎಂ. ಎಚ್​.ಡಿ.ಕುಮಾರಸ್ವಾಮಿ ಮೇಲಿಂದ ಮೇಲಿಂದ ಮೇಲೆ ಅತೃಪ್ತ ಶಾಸಕರನ್ನು ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ.

ಗೃಹಕಚೇರಿ ಕೃಷ್ಣಾದಲ್ಲಿ ಶಾಸಕರ ಸಭೆ ನಡೆಯಿತು.
author img

By

Published : May 29, 2019, 4:34 PM IST

ಬೆಂಗಳೂರು: ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಸರತ್ತು ಮುಂದುವರೆಸಿದ್ದು, ಅತೃಪ್ತ ಶಾಸಕರನ್ನು ಕರೆದು ಮಾತುಕತೆ ನಡೆಸುತ್ತಿದ್ದಾರೆ.

ಗೃಹಮಂತ್ರಿ ಕೃಷ್ಣಾದಲ್ಲಿ ಶಾಸಕರ ಸಭೆ ನಡೆಯಿತು.

ಶಾಸಕರ ಜೊತೆ ಸಿ.ಎಂ, ಎಚ್​.ಡಿ. ಕುಮಾರಸ್ವಾಮಿ ಮೇಲಿಂದ ಮೇಲೆ ಸಭೆ ಮುಂದುವರೆಸಿದ್ದಾರೆ. ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮೊನ್ನೆಯಿಂದ ಶಾಸಕರ ಜೊತೆ ಮಾತುಕತೆಯಲ್ಲಿ ತೊಡಗಿರುವ ಸಿಎಂ ಇಂದು ಕೂಡಾ ಒನ್ ಟು ಒನ್ ಮೀಟಿಂಗ್ ಮಾಡಿದರು.

ನಿನ್ನೆಯಷ್ಟೇ ಕಾಂಗ್ರೆಸ್​​​​ನ ಮಹಾಂತೇಶ್ ಕೌಜಲಗಿ, ಮಹೇಶ್ ಕುಮಟಳ್ಳಿ ಹಾಗೂ ಪಕ್ಷೇತರ ಶಾಸಕ ನಾಗೇಶ್ ಜೊತೆ ಪ್ರತ್ಯೇಕವಾಗಿ ಮಾತಮಾಡಿದ್ದ ಸಿಎಂ‌ ಎಚ್.ಡಿ. ಕುಮಾರಸ್ವಾಮಿ ಇದೀಗ ಕಾಂಗ್ರೆಸ್​​​ನ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮಾತುಕತೆ ನಡೆಸಿದರು.

ಕ್ಷೇತ್ರದ ಅಭಿವೃದ್ಧಿ ಕೆಲಸ ಇತ್ಯಾದಿಗಳ ಕುರಿತು ಚರ್ಚಿಸಿ ನಿಮ್ಮನ್ನೆಲ್ಲಾ ವಿಶ್ವಾಸಕ್ಕೆ ತೆಗೆದುಕೊಂಡೇ ಮುನ್ನಡೆಯುತ್ತೇವೆ ನೀವೆಲ್ಲ ಜೊತೆಯಲ್ಲಿರಿ ಎಂದು ಸಿಎಂ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಭೇಟಿ ಬಳಿಕ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಲು ಬಂದಿದ್ದೆ. ನನ್ನ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದ್ದೇನೆ. ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಆದರೆ, ಶಾಸಕರ ಅಸಮಾಧಾನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಈ ಬಗ್ಗೆ ಏನೂ ಚರ್ಚೆ ನಡೆಸಲಿಲ್ಲ ಎಂದರು.

ಬೆಂಗಳೂರು: ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಸರತ್ತು ಮುಂದುವರೆಸಿದ್ದು, ಅತೃಪ್ತ ಶಾಸಕರನ್ನು ಕರೆದು ಮಾತುಕತೆ ನಡೆಸುತ್ತಿದ್ದಾರೆ.

ಗೃಹಮಂತ್ರಿ ಕೃಷ್ಣಾದಲ್ಲಿ ಶಾಸಕರ ಸಭೆ ನಡೆಯಿತು.

ಶಾಸಕರ ಜೊತೆ ಸಿ.ಎಂ, ಎಚ್​.ಡಿ. ಕುಮಾರಸ್ವಾಮಿ ಮೇಲಿಂದ ಮೇಲೆ ಸಭೆ ಮುಂದುವರೆಸಿದ್ದಾರೆ. ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮೊನ್ನೆಯಿಂದ ಶಾಸಕರ ಜೊತೆ ಮಾತುಕತೆಯಲ್ಲಿ ತೊಡಗಿರುವ ಸಿಎಂ ಇಂದು ಕೂಡಾ ಒನ್ ಟು ಒನ್ ಮೀಟಿಂಗ್ ಮಾಡಿದರು.

ನಿನ್ನೆಯಷ್ಟೇ ಕಾಂಗ್ರೆಸ್​​​​ನ ಮಹಾಂತೇಶ್ ಕೌಜಲಗಿ, ಮಹೇಶ್ ಕುಮಟಳ್ಳಿ ಹಾಗೂ ಪಕ್ಷೇತರ ಶಾಸಕ ನಾಗೇಶ್ ಜೊತೆ ಪ್ರತ್ಯೇಕವಾಗಿ ಮಾತಮಾಡಿದ್ದ ಸಿಎಂ‌ ಎಚ್.ಡಿ. ಕುಮಾರಸ್ವಾಮಿ ಇದೀಗ ಕಾಂಗ್ರೆಸ್​​​ನ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮಾತುಕತೆ ನಡೆಸಿದರು.

ಕ್ಷೇತ್ರದ ಅಭಿವೃದ್ಧಿ ಕೆಲಸ ಇತ್ಯಾದಿಗಳ ಕುರಿತು ಚರ್ಚಿಸಿ ನಿಮ್ಮನ್ನೆಲ್ಲಾ ವಿಶ್ವಾಸಕ್ಕೆ ತೆಗೆದುಕೊಂಡೇ ಮುನ್ನಡೆಯುತ್ತೇವೆ ನೀವೆಲ್ಲ ಜೊತೆಯಲ್ಲಿರಿ ಎಂದು ಸಿಎಂ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಭೇಟಿ ಬಳಿಕ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಲು ಬಂದಿದ್ದೆ. ನನ್ನ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದ್ದೇನೆ. ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಆದರೆ, ಶಾಸಕರ ಅಸಮಾಧಾನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಈ ಬಗ್ಗೆ ಏನೂ ಚರ್ಚೆ ನಡೆಸಲಿಲ್ಲ ಎಂದರು.

Intro:ಬೆಂಗಳೂರು:ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಸರತ್ತು ಮುಂದುವರೆಸಿದ್ದು ಅತೃಪ್ತ ಶಾಸಕರನ್ನು ಕರೆದು ಮಾತುಕತೆ ನಡೆಸುತ್ತಿದ್ದಾರೆ.ಶಾಸಕ ಜೊತೆ ಸಿಎಂ ಒನ್ ಟು ಒನ್ ಟಾಕ್ ಮುಂದುವರೆಸಿದ್ದಾರೆ.
Body:
ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮೊನ್ನೆಯಿಂದ ಶಾಸಕರ ಜೊತೆ ಮಾತುಕತೆಯಲ್ಲಿ ತೊಡಗಿರುವ ಸಿಎಂ ಇಂದು ಕೂಡ ಶಾಸಕರೊಂದಿಗೆ ಒನ್ ಟು ಒನ್ ಮೀಟಿಂಗ್ ಮಾಡುತ್ತಿದ್ದಾರೆ.ನಿನ್ನೆಯಷ್ಟೇ ಕಾಂಗ್ರೆಸ್ ನ ಮಹಾಂತೇಶ್ ಕೌಜಲಗಿ, ಮಹೇಶ್ ಕುಮಟಳ್ಳಿ ಹಾಗೂ ಪಕ್ಷೇತರ ಶಾಸಕ ನಾಗೇಶ್ ಜೊತೆ ಪ್ರತ್ಯೇಕವಾಗಿ ಮಾತಮಾಡಿದ್ದ ಸಿಎಂ‌ ಹೆಚ್.ಡಿ ಕುಮಾರಸ್ವಾಮಿ ಇದೀಗ ಕಾಂಗ್ರೆಸ್ ನ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು ಗೃಹ ಕಚೇರಿ ಕೃಷ್ಣಾಗೆ ಸಿಎಂ ಕರೆಸಿಕೊಂಡ ಸಿಎಂ ಮಾತುಕತೆ ನಡೆಸಿದರು.

ಸಿಎಂ ಆಹ್ವಾನದ ಮೇರೆಗೆ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ
ಶಿವರಾಮ್ ಹೆಬ್ಬಾರ್ ಸಿಎಂ ಭೇಟಿಗಾಗಿ ಸ್ವಲ್ಪ ಸಮಯ ಕಾಯಬೇಕಾಯಿತು. ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಸಭೆ ಇದ್ದ ಕಾರಣ ತಡವಾಗಿ ಗೃಹ ಕಚೇರಿಗೆ ಆಗಮಿಸಿದ ಸಿಎಂ ಶಿವರಾಮ್ ಹೆಬ್ಬಾರ್ ಜೊತೆ ಮಾತುಕತೆ ನಡೆಸಿದರು.‌ಅಸಮಧಾನ,ಕ್ಷೇತ್ರದ ಕೆಲಸ ಇತ್ಯಾದಿಗಳ ಕುರಿತು ಚರ್ಚಿಸಿ ನಿಮ್ಮನ್ನೆಲ್ಲಾ ವಿಶ್ವಾಸಕ್ಕೆ ತೆಗೆದುಕೊಂಡೇ ಮುನ್ನಡೆಯುತ್ತೇನೆ ಜೊತೆಯಲ್ಲಿರಿ ಎಂದು ಸಿಎಂ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಭೇಟಿ ಬಳಿಕ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್,ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡೋಕೆ ಬಂದಿದ್ದೆ.ನನ್ನ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿದ್ದೇನೆ, ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಆದರೆ
ಶಾಸಕರ ಅಸಮಾಧಾನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಈ ಬಗ್ಗೆ ಏನೂ ಚರ್ಚೆ ನಡೆಸಲಿಲ್ಲ ಎಂದರು.
Conclusion:-ಪ್ರಶಾಂತ್ ಕುಮಾರ್

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.