ETV Bharat / briefs

ಗೃಹ ಕಾರ್ಮಿಕರಿಗೆ ಪರಿಹಾರ : ಸರ್ಕಾರದಿಂದ ವಿವರಣೆ ಕೇಳಿದ ಹೈಕೋರ್ಟ್

ಗೃಹ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ಅವರಿಗೆ ಅಸಂಘಟಿತ ಕಾರ್ಮಿಕರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಗೃಹ ಕಾರ್ಮಿಕರ ಹಕ್ಕುಗಳ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು..

author img

By

Published : May 24, 2021, 7:20 PM IST

ಹೈಕೋರ್ಟ್​
ಹೈಕೋರ್ಟ್​

ಬೆಂಗಳೂರು : ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆಯಡಿ ನೋಂದಾಯಿಸಿಕೊಂಡ ಗೃಹ ಕಾರ್ಮಿಕರು ಮಾತ್ರ ಕೋವಿಡ್ ಆರ್ಥಿಕ ಪರಿಹಾರ ಪ್ಯಾಕೇಜ್ ಪಡೆದುಕೊಳ್ಳಲು ಅರ್ಹರು ಎಂಬ ಬಗ್ಗೆ ವಿವರಣೆ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಗೃಹ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ಅವರಿಗೆ ಅಸಂಘಟಿತ ಕಾರ್ಮಿಕರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಗೃಹ ಕಾರ್ಮಿಕರ ಹಕ್ಕುಗಳ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲರಾದ ಅವನಿ ಚೋಕ್ಸಿ ವಾದಿಸಿ, ಲಾಕ್​ಡೌನ್ ಹಿನ್ನೆಲೆಯಲ್ಲಿ ಗೃಹ ಕಾರ್ಮಿಕರಿಗೆ ಸರ್ಕಾರ 2 ಸಾವಿರ ರೂ. ಆರ್ಥಿಕ ಪರಿಹಾರ ಪ್ಯಾಕೇಜ್ ಘೋಷಿಸಿದೆ.

ಆದರೆ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆಯಡಿ ನೋಂದಾಯಿಸಿಕೊಂಡವರು ಮಾತ್ರ ಪರಿಹಾರ ಪಡೆದುಕೊಳ್ಳಲು ಅರ್ಹರು ಎಂದು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹೇಳುತ್ತಿದೆ ಎಂದು ವಿವರಿಸಿದರು.

ಇದನ್ನು ಪರಿಗಣಿಸಿದ ಪೀಠ, ನೋಂದಾಯಿತ ಗೃಹ ಕಾರ್ಮಿಕರು ಮಾತ್ರ ಪರಿಹಾರಕ್ಕೆ ಅರ್ಹರು ಎಂಬ ಮಂಡಳಿಯ ಹೇಳಿಕೆ ಬಗ್ಗೆ 2 ವಾರಗಳಲ್ಲಿ ವಿವರಣೆ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

ಬೆಂಗಳೂರು : ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆಯಡಿ ನೋಂದಾಯಿಸಿಕೊಂಡ ಗೃಹ ಕಾರ್ಮಿಕರು ಮಾತ್ರ ಕೋವಿಡ್ ಆರ್ಥಿಕ ಪರಿಹಾರ ಪ್ಯಾಕೇಜ್ ಪಡೆದುಕೊಳ್ಳಲು ಅರ್ಹರು ಎಂಬ ಬಗ್ಗೆ ವಿವರಣೆ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಗೃಹ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ಅವರಿಗೆ ಅಸಂಘಟಿತ ಕಾರ್ಮಿಕರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಗೃಹ ಕಾರ್ಮಿಕರ ಹಕ್ಕುಗಳ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲರಾದ ಅವನಿ ಚೋಕ್ಸಿ ವಾದಿಸಿ, ಲಾಕ್​ಡೌನ್ ಹಿನ್ನೆಲೆಯಲ್ಲಿ ಗೃಹ ಕಾರ್ಮಿಕರಿಗೆ ಸರ್ಕಾರ 2 ಸಾವಿರ ರೂ. ಆರ್ಥಿಕ ಪರಿಹಾರ ಪ್ಯಾಕೇಜ್ ಘೋಷಿಸಿದೆ.

ಆದರೆ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆಯಡಿ ನೋಂದಾಯಿಸಿಕೊಂಡವರು ಮಾತ್ರ ಪರಿಹಾರ ಪಡೆದುಕೊಳ್ಳಲು ಅರ್ಹರು ಎಂದು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹೇಳುತ್ತಿದೆ ಎಂದು ವಿವರಿಸಿದರು.

ಇದನ್ನು ಪರಿಗಣಿಸಿದ ಪೀಠ, ನೋಂದಾಯಿತ ಗೃಹ ಕಾರ್ಮಿಕರು ಮಾತ್ರ ಪರಿಹಾರಕ್ಕೆ ಅರ್ಹರು ಎಂಬ ಮಂಡಳಿಯ ಹೇಳಿಕೆ ಬಗ್ಗೆ 2 ವಾರಗಳಲ್ಲಿ ವಿವರಣೆ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.