ETV Bharat / briefs

ಚಿನ್ನ ಕಳ್ಳ ಸಾಗಣೆ ಅನುಮಾನ; 48 ಲಕ್ಷ ರೂ. ಬೆಲೆ ವಾಚ್ ಪುಡಿಗಟ್ಟಿದ ಕಸ್ಟಮ್ ಅಧಿಕಾರಿಗಳು

author img

By

Published : Mar 7, 2021, 5:57 PM IST

Updated : Mar 7, 2021, 7:09 PM IST

ಅರಬ್ ರಾಷ್ಟ್ರ ದುಬೈನಲ್ಲಿ ದುಬಾರಿ ಬೆಲೆಯ ಬಳಸಲಾದ ಕೈ ಗಡಿಯಾರ ಮಾರಾಟ ಮಳಿಗೆಯೊಂದಿದೆ. ಆ ಮಳಿಗೆಯಲ್ಲಿ ಪ್ರಖ್ಯಾತ ಆಡಿಮೂವರ್ಸ್ ಪಿಗುಯೆಟ್ ಕಂಪೆನಿಯ ಸರಿಸುಮಾರು 60 ಲಕ್ಷ ರೂ. ಮೌಲ್ಯದ (ಮೂಲ ಬೆಲೆ) ಬಳಸಲಾದ ಕೈಗಡಿಯಾರವನ್ನು, ಇಸ್ಮಾಯಿಲ್​ ಸಹೋದರ 48 ಲಕ್ಷ ರೂ. ನೀಡಿ 2017ರಲ್ಲಿ ಖರೀದಿಸಿದ್ದರು.

expensive watch in calikut
ದುಬಾರಿ ಬೆಲೆ ಕೈಗಡಿಯಾರ ಒಡೆದ ಕಸ್ಟಮ್ ಅಧಿಕಾರಿಗಳು

ಭಟ್ಕಳ: ಕೈಗಡಿಯಾರದಲ್ಲಿ ಚಿನ್ನ ಅಡಗಿಸಿಟ್ಟು ಸಾಗಿಸಿರುವ ಶಂಕೆಯ ಮೇಲೆ ಭಟ್ಕಳ ಮೂಲದ ವ್ಯಕ್ತಿಯನ್ನು ತಪಾಸಣೆಗೆಂದು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು, ಆತನ ದುಬಾರಿ ಬೆಲೆ ಕೈಗಡಿಯಾರವನ್ನು ಜಪ್ತಿ ಮಾಡಿ ಅದನ್ನು ಪುಡಿಗಟ್ಟಿ ಚಿನ್ನಕ್ಕಾಗಿ ಹುಡುಕಾಟ ನಡೆಸಿದ ಘಟನೆ ಕೇರಳದ ಕ್ಯಾಲಿಕಟ್‍ನಲ್ಲಿ ನಡೆದಿದೆ.

ಓದಿ: ನಮ್ಮ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ: ಬಾಲಚಂದ್ರ ಜಾರಕಿಹೊಳಿ

ಭಟ್ಕಳ ಕಾರಗದ್ದೆ ನಿವಾಸಿ ಮಹ್ಮದ್ ಇಸ್ಮಾಯಿಲ್​ ಅವರ ಸಹೋದರ ದುಬೈನಲ್ಲಿ ವ್ಯಾಪಾರ ವಹಿವಾಟು ಮಾಡಿಕೊಂಡಿದ್ದು, ಇಸ್ಮಾಯಿಲ್​ ವಿಸಿಟಿಂಗ್ ವೀಸಾ ಪಡೆದುಕೊಂಡು ಸಹೋದರನ ಬಳಿ ತೆರಳಿದ್ದರು. ಇವರು ಊರಿಗೆ ವಾಪಸ್ಸಾಗುವ ನಿಟ್ಟಿನಲ್ಲಿ ಮಾ.3 ರಂದು ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಅಲ್ಲಿ ಹಾಜರಿದ್ದ ಕಸ್ಟಮ್ಸ್ ಅಧಿಕಾರಿಗಳು ಇಸ್ಮಾಯಿಲ್​ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅವರ ಕೈಯಲ್ಲಿದ್ದ ಗಡಿಯಾರವನ್ನು ಪಡೆದುಕೊಂಡ ಅಧಿಕಾರಿಗಳು ಕೋಣೆಯೊಳಗೆ ತೆಗೆದುಕೊಂಡು ಹೋಗಿ ಅದನ್ನು ಒಡೆದು ಹಾಕಿದ್ದಾರೆ. ಗಡಿಯಾರದಲ್ಲಿ ಚಿನ್ನ ಇಲ್ಲದಿರುವುದನ್ನು ದೃಢಪಡಿಸಿಕೊಂಡು ಪುಡಿಯಾದ ಗಡಿಯಾರವನ್ನು ಟ್ರೇನಲ್ಲಿ ಇಟ್ಟು ಇಸ್ಮಾಯಿಲ್​ ಅವರಿಗೆ ಹಿಂದಿರುಗಿಸಿದ್ದಾರೆ. ಒಡೆದ ಗಡಿಯಾರ ಕಂಡು ಕಂಗಾಲಾದ ಇಸ್ಮಾಯಿಲ್​, ತನ್ನ ಗಡಿಯಾರವನ್ನು ತನಗೆ ವಾಪಸ್ಸು ನೀಡುವಂತೆ ಪಟ್ಟು ಹಿಡಿದಿದ್ದಾರೆ. ಗಡಿಯಾರದ ಮೌಲ್ಯವನ್ನು ಕೇಳಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳೂ ತಬ್ಬಿಬ್ಬಾಗಿದ್ದಾರೆ. ಈ ಕುರಿತು ಇಸ್ಮಾಯಿಲ್​ ಕ್ಯಾಲಿಕಟ್ ಪೊಲೀಸ್ ಠಾಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಏನಿದು ದುಬಾರಿ ಬೆಲೆಯ ಗಡಿಯಾರ:

ಅರಬ್ ರಾಷ್ಟ್ರ ದುಬೈನಲ್ಲಿ ದುಬಾರಿ ಬೆಲೆಯ ಬಳಸಲಾದ ಕೈ ಗಡಿಯಾರಗಳ ಮಾರಾಟ ಮಳಿಗೆಯೊಂದಿದೆ. ಆ ಮಳಿಗೆಯಲ್ಲಿ ಪ್ರಖ್ಯಾತ ಆಡಿಮೂವರ್ಸ್ ಪಿಗುಯೆಟ್ ಕಂಪೆನಿಯ ಸರಿಸುಮಾರು 60 ಲಕ್ಷ ರೂ. ಮೌಲ್ಯದ (ಮೂಲ ಬೆಲೆ) ಬಳಸಲಾದ ಕೈಗಡಿಯಾರವನ್ನು, ಇಸ್ಮಾಯಿಲ್​ ಸಹೋದರ 48 ಲಕ್ಷ ರೂ. ನೀಡಿ 2017ರಲ್ಲಿ ಖರೀದಿಸಿದ್ದರು.

3-4 ವರ್ಷ ತಾನೇ ಕೈಯಲ್ಲಿ ಕಟ್ಟಿಕೊಂಡು ಓಡಾಡಿಕೊಂಡಿದ್ದ ಆತ, ಕಳೆದ ತಿಂಗಳಷ್ಟೇ ದುಬೈಗೆ ಬಂದ ತನ್ನ ಸಹೋದರನಿಗೆ ನೀಡಿದ್ದಾರೆ. ದುಬಾರಿ ಬೆಲೆಯ ಕೈಗಡಿಯಾರದೊಂದಿಗೆ ಇಸ್ಮಾಯಿಲ್​ ಭಾರತಕ್ಕೆ ವಾಪಸ್ಸಾಗಿದ್ದು, ಗಡಿಯಾರದ ಮೌಲ್ಯವರಿಯದ ಕಸ್ಟಮ್ಸ್ ಅಧಿಕಾರಿಗಳು ಅದನ್ನು ಒಡೆದು ಚಿನ್ನಕ್ಕಾಗಿ ತಲಾಶೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಪುಟ್ಟ ಕೈಗಡಿಯಾರದಲ್ಲಿ ಎಷ್ಟು ಕೆಜಿ ಚಿನ್ನವನ್ನು ಸಾಗಿಸಲು ಸಾಧ್ಯ, ಗಡಿಯಾರದ ಬಗ್ಗೆ ಅಧಿಕಾರಿಗಳು ತಿಳಿದುಕೊಳ್ಳುವುದು ಬೇಡವೇ, ಅಧಿಕಾರಿಗಳು ನನಗೆ ಆಗಿರುವ ಹಾನಿಯನ್ನು ಸರಿಪಡಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಭಟ್ಕಳ: ಕೈಗಡಿಯಾರದಲ್ಲಿ ಚಿನ್ನ ಅಡಗಿಸಿಟ್ಟು ಸಾಗಿಸಿರುವ ಶಂಕೆಯ ಮೇಲೆ ಭಟ್ಕಳ ಮೂಲದ ವ್ಯಕ್ತಿಯನ್ನು ತಪಾಸಣೆಗೆಂದು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು, ಆತನ ದುಬಾರಿ ಬೆಲೆ ಕೈಗಡಿಯಾರವನ್ನು ಜಪ್ತಿ ಮಾಡಿ ಅದನ್ನು ಪುಡಿಗಟ್ಟಿ ಚಿನ್ನಕ್ಕಾಗಿ ಹುಡುಕಾಟ ನಡೆಸಿದ ಘಟನೆ ಕೇರಳದ ಕ್ಯಾಲಿಕಟ್‍ನಲ್ಲಿ ನಡೆದಿದೆ.

ಓದಿ: ನಮ್ಮ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ: ಬಾಲಚಂದ್ರ ಜಾರಕಿಹೊಳಿ

ಭಟ್ಕಳ ಕಾರಗದ್ದೆ ನಿವಾಸಿ ಮಹ್ಮದ್ ಇಸ್ಮಾಯಿಲ್​ ಅವರ ಸಹೋದರ ದುಬೈನಲ್ಲಿ ವ್ಯಾಪಾರ ವಹಿವಾಟು ಮಾಡಿಕೊಂಡಿದ್ದು, ಇಸ್ಮಾಯಿಲ್​ ವಿಸಿಟಿಂಗ್ ವೀಸಾ ಪಡೆದುಕೊಂಡು ಸಹೋದರನ ಬಳಿ ತೆರಳಿದ್ದರು. ಇವರು ಊರಿಗೆ ವಾಪಸ್ಸಾಗುವ ನಿಟ್ಟಿನಲ್ಲಿ ಮಾ.3 ರಂದು ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಅಲ್ಲಿ ಹಾಜರಿದ್ದ ಕಸ್ಟಮ್ಸ್ ಅಧಿಕಾರಿಗಳು ಇಸ್ಮಾಯಿಲ್​ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅವರ ಕೈಯಲ್ಲಿದ್ದ ಗಡಿಯಾರವನ್ನು ಪಡೆದುಕೊಂಡ ಅಧಿಕಾರಿಗಳು ಕೋಣೆಯೊಳಗೆ ತೆಗೆದುಕೊಂಡು ಹೋಗಿ ಅದನ್ನು ಒಡೆದು ಹಾಕಿದ್ದಾರೆ. ಗಡಿಯಾರದಲ್ಲಿ ಚಿನ್ನ ಇಲ್ಲದಿರುವುದನ್ನು ದೃಢಪಡಿಸಿಕೊಂಡು ಪುಡಿಯಾದ ಗಡಿಯಾರವನ್ನು ಟ್ರೇನಲ್ಲಿ ಇಟ್ಟು ಇಸ್ಮಾಯಿಲ್​ ಅವರಿಗೆ ಹಿಂದಿರುಗಿಸಿದ್ದಾರೆ. ಒಡೆದ ಗಡಿಯಾರ ಕಂಡು ಕಂಗಾಲಾದ ಇಸ್ಮಾಯಿಲ್​, ತನ್ನ ಗಡಿಯಾರವನ್ನು ತನಗೆ ವಾಪಸ್ಸು ನೀಡುವಂತೆ ಪಟ್ಟು ಹಿಡಿದಿದ್ದಾರೆ. ಗಡಿಯಾರದ ಮೌಲ್ಯವನ್ನು ಕೇಳಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳೂ ತಬ್ಬಿಬ್ಬಾಗಿದ್ದಾರೆ. ಈ ಕುರಿತು ಇಸ್ಮಾಯಿಲ್​ ಕ್ಯಾಲಿಕಟ್ ಪೊಲೀಸ್ ಠಾಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಏನಿದು ದುಬಾರಿ ಬೆಲೆಯ ಗಡಿಯಾರ:

ಅರಬ್ ರಾಷ್ಟ್ರ ದುಬೈನಲ್ಲಿ ದುಬಾರಿ ಬೆಲೆಯ ಬಳಸಲಾದ ಕೈ ಗಡಿಯಾರಗಳ ಮಾರಾಟ ಮಳಿಗೆಯೊಂದಿದೆ. ಆ ಮಳಿಗೆಯಲ್ಲಿ ಪ್ರಖ್ಯಾತ ಆಡಿಮೂವರ್ಸ್ ಪಿಗುಯೆಟ್ ಕಂಪೆನಿಯ ಸರಿಸುಮಾರು 60 ಲಕ್ಷ ರೂ. ಮೌಲ್ಯದ (ಮೂಲ ಬೆಲೆ) ಬಳಸಲಾದ ಕೈಗಡಿಯಾರವನ್ನು, ಇಸ್ಮಾಯಿಲ್​ ಸಹೋದರ 48 ಲಕ್ಷ ರೂ. ನೀಡಿ 2017ರಲ್ಲಿ ಖರೀದಿಸಿದ್ದರು.

3-4 ವರ್ಷ ತಾನೇ ಕೈಯಲ್ಲಿ ಕಟ್ಟಿಕೊಂಡು ಓಡಾಡಿಕೊಂಡಿದ್ದ ಆತ, ಕಳೆದ ತಿಂಗಳಷ್ಟೇ ದುಬೈಗೆ ಬಂದ ತನ್ನ ಸಹೋದರನಿಗೆ ನೀಡಿದ್ದಾರೆ. ದುಬಾರಿ ಬೆಲೆಯ ಕೈಗಡಿಯಾರದೊಂದಿಗೆ ಇಸ್ಮಾಯಿಲ್​ ಭಾರತಕ್ಕೆ ವಾಪಸ್ಸಾಗಿದ್ದು, ಗಡಿಯಾರದ ಮೌಲ್ಯವರಿಯದ ಕಸ್ಟಮ್ಸ್ ಅಧಿಕಾರಿಗಳು ಅದನ್ನು ಒಡೆದು ಚಿನ್ನಕ್ಕಾಗಿ ತಲಾಶೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಪುಟ್ಟ ಕೈಗಡಿಯಾರದಲ್ಲಿ ಎಷ್ಟು ಕೆಜಿ ಚಿನ್ನವನ್ನು ಸಾಗಿಸಲು ಸಾಧ್ಯ, ಗಡಿಯಾರದ ಬಗ್ಗೆ ಅಧಿಕಾರಿಗಳು ತಿಳಿದುಕೊಳ್ಳುವುದು ಬೇಡವೇ, ಅಧಿಕಾರಿಗಳು ನನಗೆ ಆಗಿರುವ ಹಾನಿಯನ್ನು ಸರಿಪಡಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

Last Updated : Mar 7, 2021, 7:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.