ತುಮಕೂರು: ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ತುಮಕೂರಿನ ರಮೇಶ್ ಗೌಡ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಸರಸ್ವತಿಪುರಂನಲ್ಲಿರುವ ಅವರ ನಿವಾಸಕ್ಕೆ ಮೃತದೇಹವನ್ನು ತರಲಾಗಿದ್ದು, ಕೆಲಕಾಲ ಕುಟುಂಬ ಸದಸ್ಯರಿಗೆ ದರ್ಶನಕ್ಕಾಗಿ ಇರಿಸಲಾಗಿತ್ತು. ಈ ವೇಳೆ ಸಚಿವ ಎಸ್. ಆರ್. ಶ್ರೀನಿವಾಸ್ ಮತ್ತು ಮುಖ್ಯಮಂತ್ರಿ ಜಿ. ಪರಮೇಶ್ವರ್, ಜಿಲ್ಲಾಧಿಕಾರಿ ರಾಕೇಶ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿ, ಸಾಂತ್ವನ ಹೇಳಿದರು.
ಶ್ರೀಲಂಕಾದಲ್ಲಿ ಶವದ ಮರಣೋತ್ತರ ಪರೀಕ್ಷೆ ಮಾಡಲಾಗಿತ್ತು. ನಂತರ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಳೀಯ ವೈದ್ಯರು, ಗಾಯಗೊಂಡು ರಕ್ತಸಿಕ್ತವಾಗಿದ್ದ ರಮೇಶ್ ಗೌಡ ಮೃತದೇಹದ ಬಹುತೇಕ ಭಾಗಕ್ಕೆ ಹೊಲಿಗೆ ಹಾಕಿದರು.
ಕೆಲವು ನಿಯಮಾವಳಿಗಳ ಪ್ರಕಾರ, ರಮೇಶ್ ಗೌಡ ಕುಟುಂಬಕ್ಕೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ಪಟ್ಟಿರುವುದಾಗಿ ಶಾಸಕ ಜ್ಯೋತಿ ಗಣೇಶ್ 'ಈ ಟಿವಿ ಭಾರತ್' ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದಾರೆ.