ETV Bharat / briefs

ಅನಗತ್ಯ ವಾಹನ ಸಂಚಾರ ಬ್ರೇಕ್ ಹಾಕಿ, ಕೊರೊನಾ ಮಾರ್ಗಸೂಚಿ ಪಾಲಿಸಿ: ಪೊಲೀಸರಿಗೆ ರವಿಕಾಂತೇಗೌಡ ಸೂಚನೆ

author img

By

Published : May 20, 2021, 7:50 PM IST

ಕಳೆದ ಐದು ವರ್ಷ ಅಂತರದಲ್ಲಿ ಸೇವೆಗೆ ಸೇರಿದ‌ ಅಧಿಕಾರಿ ಹಾಗೂ ಸಿಬ್ಬಂದಿ ಸಾರ್ವಜನಿಕರೊಂದಿಗೆ ಅವಾಚ್ಯ ಶಬ್ದಗಳಿಂದ ಏರು ಧ್ವನಿಯಲ್ಲಿ ನಿಂದಿಸುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ದೂರುಗಳು ಬಂದರೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವುದಾಗಿ ರವಿಕಾಂತೇಗೌಡ ಎಚ್ಚರಿಸಿದ್ದಾರೆ.

 Follow the Corona Guidance: ravikanthe gowda suggest to Police
Follow the Corona Guidance: ravikanthe gowda suggest to Police

ಬೆಂಗಳೂರು: ನಗರದಲ್ಲಿ ಜಾರಿಯಲ್ಲಿರುವ ಲಾಕ್​​ಡೌನ್ ವೇಳೆ ಅನಗತ್ಯ ವಾಹನ ಸಂಚಾರ ನಿಯಂತ್ರಣ ಹಾಗೂ ಕೊರೊನಾ ಮಾರ್ಗಸೂಚಿ ಪಾಲನೆ ಕುರಿತಂತೆ ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ. ರವಿಕಾಂತೇಗೌಡ ನಗರದ ಎಲ್ಲಾ ಟ್ರಾಫಿಕ್ ಇನ್ ಸ್ಪೆಕ್ಟರ್ ಗಳ ಜೊತೆ ವರ್ಚುಯಲ್ ಸಭೆ ನಡೆಸಿದ್ದಾರೆ.

ಕರ್ತವ್ಯದಲ್ಲಿ ಲೋಪ, ಸಿಬ್ಬಂದಿ ಯೋಗಕ್ಷೇಮ ಹಾಗೂ ಕೊರೊನಾ ಹಿನ್ನೆಲೆ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಸಭೆಯಲ್ಲಿ ಸಮಾಲೋಚಿಸಿ ನಿಯಮ ಪಾಲಿಸುವಂತೆ ಸೂಚಿಸಿದ್ದಾರೆ.

ಇತ್ತೀಚೆಗೆ ನಗರ ಪೂರ್ವ ವಿಭಾಗದ ಚೆಕ್ ಪಾಯಿಂಟ್ ನಲ್ಲಿ ಕಾನೂನು ಸುವ್ಯವಸ್ಥೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದರೂ ಗೌರವ ನೀಡದ ಕಾರಣ ಸಿಬ್ಬಂದಿ ಸಸ್ಪೆಂಡ್ ಮಾಡಲಾಗಿದೆ. ಇನ್ನುಮುಂದೆ ಸ್ಥಳ ತಪಾಸಣೆ ಬರುವ ಮೇಲಾಧಿಕಾರಿಗಳಿಗೆ ಕಡ್ಡಾಯವಾಗಿ ಗೌರವ ನೀಡಬೇಕು. ಕಡ್ಡಾಯವಾಗಿ ಫೇಸ್ ಶಿಲ್ಡ್, ಮಾಸ್ಕ್ ಧರಿಸಿ ಸ್ಯಾನಿಟೈಸರ್ ಬಳಸಿಕೊಳ್ಳಬೇಕು. ಚೆಕ್ ಪಾಯಿಂಟ್ ಗಳಲ್ಲಿ ಕಾನೂನು ಸುವ್ಯವಸ್ಥೆ ಸಿಬ್ಬಂದಿಗಳೊಂದಿಗೆ ಸಮನ್ವಯ ಸಾಧಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.

ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ಹೋಟೆಲ್​​​ಗಳ ಬಳಿ ಕಾಫಿ ಟೀ‌ ಸೇವನೆ ಕಂಡು ಬಂದಿದ್ದು , ಯಾರು ಕೂಡ ಹೋಟೆಲ್ ಗಳ ಬಳಿ ಕಾಫಿ, ಟೀ, ಸೇವನೆ ಮಾಡದೇ, ಪಾರ್ಸೆಲ್ ತೆಗೆದುಕೊಂಡು ಹೋಗಬೇಕು. ಕೋವಿಡ್ ಲಸಿಕೆ ಪಡೆಯದೇ ಒಂದು ವೇಳೆ ಏನಾದರೂ ಮರಣ ಸಂಭವಿಸಿದ್ದಲ್ಲಿ ಸರ್ಕಾರದಿಂದ ನೀಡುವ 30 ಲಕ್ಷ ರೂ. ಬರುವ ಸಾಧ್ಯತೆ ವಿರಳವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.

ಕಳೆದ ಐದು ವರ್ಷ ಅಂತರದಲ್ಲಿ ಸೇವೆಗೆ ಸೇರಿದ‌ ಅಧಿಕಾರಿ ಹಾಗೂ ಸಿಬ್ಬಂದಿ ಸಾರ್ವಜನಿಕರೊಂದಿಗೆ ಅವಾಚ್ಯ ಶಬ್ದಗಳಿಂದ ಏರು ಧ್ವನಿಯಲ್ಲಿ ನಿಂದಿಸುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ದೂರುಗಳು ಬಂದರೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸೂಚಿಸಿದ್ದಾರೆ.

ಫುಟ್ಬಾತ್ ಪಾರ್ಕಿಂಗ್ ಹಾಗೂ ಫುಟ್ಬಾತ್ ರೈಡಿಂಗ್ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕುಟುಂಬದ ಇತರ ಸದಸ್ಯರಿಗೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೊರೊನಾ ಸೋಂಕು ಹರಡಲು ಬ್ರೇಕ್ ಹಾಕಿಕೊಳ್ಳಬೇಕು ಎಂದು ಎಲ್ಲಾ ಟ್ರಾಫಿಕ್ ಇನ್ ಸ್ಪೆಕ್ಟರ್ ಗಳಿಗೆ ಸೂಚನೆ‌ ನೀಡಿದ್ದಾರೆ.

ಬೆಂಗಳೂರು: ನಗರದಲ್ಲಿ ಜಾರಿಯಲ್ಲಿರುವ ಲಾಕ್​​ಡೌನ್ ವೇಳೆ ಅನಗತ್ಯ ವಾಹನ ಸಂಚಾರ ನಿಯಂತ್ರಣ ಹಾಗೂ ಕೊರೊನಾ ಮಾರ್ಗಸೂಚಿ ಪಾಲನೆ ಕುರಿತಂತೆ ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ. ರವಿಕಾಂತೇಗೌಡ ನಗರದ ಎಲ್ಲಾ ಟ್ರಾಫಿಕ್ ಇನ್ ಸ್ಪೆಕ್ಟರ್ ಗಳ ಜೊತೆ ವರ್ಚುಯಲ್ ಸಭೆ ನಡೆಸಿದ್ದಾರೆ.

ಕರ್ತವ್ಯದಲ್ಲಿ ಲೋಪ, ಸಿಬ್ಬಂದಿ ಯೋಗಕ್ಷೇಮ ಹಾಗೂ ಕೊರೊನಾ ಹಿನ್ನೆಲೆ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಸಭೆಯಲ್ಲಿ ಸಮಾಲೋಚಿಸಿ ನಿಯಮ ಪಾಲಿಸುವಂತೆ ಸೂಚಿಸಿದ್ದಾರೆ.

ಇತ್ತೀಚೆಗೆ ನಗರ ಪೂರ್ವ ವಿಭಾಗದ ಚೆಕ್ ಪಾಯಿಂಟ್ ನಲ್ಲಿ ಕಾನೂನು ಸುವ್ಯವಸ್ಥೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದರೂ ಗೌರವ ನೀಡದ ಕಾರಣ ಸಿಬ್ಬಂದಿ ಸಸ್ಪೆಂಡ್ ಮಾಡಲಾಗಿದೆ. ಇನ್ನುಮುಂದೆ ಸ್ಥಳ ತಪಾಸಣೆ ಬರುವ ಮೇಲಾಧಿಕಾರಿಗಳಿಗೆ ಕಡ್ಡಾಯವಾಗಿ ಗೌರವ ನೀಡಬೇಕು. ಕಡ್ಡಾಯವಾಗಿ ಫೇಸ್ ಶಿಲ್ಡ್, ಮಾಸ್ಕ್ ಧರಿಸಿ ಸ್ಯಾನಿಟೈಸರ್ ಬಳಸಿಕೊಳ್ಳಬೇಕು. ಚೆಕ್ ಪಾಯಿಂಟ್ ಗಳಲ್ಲಿ ಕಾನೂನು ಸುವ್ಯವಸ್ಥೆ ಸಿಬ್ಬಂದಿಗಳೊಂದಿಗೆ ಸಮನ್ವಯ ಸಾಧಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.

ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ಹೋಟೆಲ್​​​ಗಳ ಬಳಿ ಕಾಫಿ ಟೀ‌ ಸೇವನೆ ಕಂಡು ಬಂದಿದ್ದು , ಯಾರು ಕೂಡ ಹೋಟೆಲ್ ಗಳ ಬಳಿ ಕಾಫಿ, ಟೀ, ಸೇವನೆ ಮಾಡದೇ, ಪಾರ್ಸೆಲ್ ತೆಗೆದುಕೊಂಡು ಹೋಗಬೇಕು. ಕೋವಿಡ್ ಲಸಿಕೆ ಪಡೆಯದೇ ಒಂದು ವೇಳೆ ಏನಾದರೂ ಮರಣ ಸಂಭವಿಸಿದ್ದಲ್ಲಿ ಸರ್ಕಾರದಿಂದ ನೀಡುವ 30 ಲಕ್ಷ ರೂ. ಬರುವ ಸಾಧ್ಯತೆ ವಿರಳವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.

ಕಳೆದ ಐದು ವರ್ಷ ಅಂತರದಲ್ಲಿ ಸೇವೆಗೆ ಸೇರಿದ‌ ಅಧಿಕಾರಿ ಹಾಗೂ ಸಿಬ್ಬಂದಿ ಸಾರ್ವಜನಿಕರೊಂದಿಗೆ ಅವಾಚ್ಯ ಶಬ್ದಗಳಿಂದ ಏರು ಧ್ವನಿಯಲ್ಲಿ ನಿಂದಿಸುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ದೂರುಗಳು ಬಂದರೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸೂಚಿಸಿದ್ದಾರೆ.

ಫುಟ್ಬಾತ್ ಪಾರ್ಕಿಂಗ್ ಹಾಗೂ ಫುಟ್ಬಾತ್ ರೈಡಿಂಗ್ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕುಟುಂಬದ ಇತರ ಸದಸ್ಯರಿಗೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೊರೊನಾ ಸೋಂಕು ಹರಡಲು ಬ್ರೇಕ್ ಹಾಕಿಕೊಳ್ಳಬೇಕು ಎಂದು ಎಲ್ಲಾ ಟ್ರಾಫಿಕ್ ಇನ್ ಸ್ಪೆಕ್ಟರ್ ಗಳಿಗೆ ಸೂಚನೆ‌ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.