ETV Bharat / briefs

ಗೋಡ್ಸೆ ಹಿಂದೂ ಉಗ್ರ ಎನ್ನುವುದು ಐತಿಹಾಸಿಕ ಸತ್ಯ... ಹೇಳಿಕೆ ಸಮರ್ಥಿಸಿಕೊಂಡ ಕಮಲ್ ಹಾಸನ್

ನನ್ನ ಮಾತನ್ನು ಸಂಪೂರ್ಣವಾಗಿ ಕೇಳಿಸಿಕೊಳ್ಳದೇ ಮಾಧ್ಯಮಗಳು ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿವೆ. ಮಾಧ್ಯಮಗಳು ಇಂತಹ ತಪ್ಪನ್ನು ಹಲವು ಬಾರಿ ಮಾಡಿವೆ ಎಂದು ಕಮಲ್ ಹಾಸನ್​​ ಮಾಧ್ಯಮದ ವಿರುದ್ಧ ಕಿಡಿಕಾರಿದ್ದಾರೆ.

author img

By

Published : May 16, 2019, 10:32 AM IST

ಕಮಲ್ ಹಾಸನ್

ಚೆನ್ನೈ: ನಾಥೂರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಹಿಂದೂ ಉಗ್ರ ಎನ್ನುವ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್​​ ವಿವಾದಿತ ಹೇಳಿಕೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಅವರಕುರುಚ್ಚಿಯಲ್ಲಿ ಚುನಾವಣಾ ಪ್ರಚಾರದ ವೇಳೆ ನೀಡಿರುವ ಹೇಳಿಕೆಗೆ ಸಾಕಷ್ಟು ಮಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಹೇಳಿರುವುದು ಐತಿಹಾಸಿಕ ಸತ್ಯ. ಈ ವಿಚಾರದಲ್ಲಿ ಯಾರೊಂದಿಗೂ ಜಗಳವಾಡಲು ನಾನು ಇಷ್ಟಪಡುವುದಿಲ್ಲ ಎಂದು ಕಮಲ್ ಹಾಸನ್​ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಹೆಚ್ಚಿನ ಓದಿಗಾಗಿ:

ಸ್ವತಂತ್ರ ಭಾರತದ ಮೊದಲ ಉಗ್ರ ಗೋಡ್ಸೆ...! ವಿವಾದಕ್ಕೆ ಕಾರಣವಾಗುತ್ತಾ ಕಮಲ್ ಹೇಳಿಕೆ..?

ನನ್ನ ಮಾತನ್ನು ಸಂಪೂರ್ಣವಾಗಿ ಕೇಳಿಸಿಕೊಳ್ಳದೇ ಮಾಧ್ಯಮಗಳು ಹೇಳಿಕೆ ತಪ್ಪಾಗಿ ಪ್ರಸಾರ ಮಾಡಿವೆ. ಮಾಧ್ಯಮಗಳು ಇಂತಹ ತಪ್ಪನ್ನು ಹಲವು ಬಾರಿ ಮಾಡಿವೆ ಎಂದು ಇದೇ ವೇಳೆ ಕಮಲ್​​ ಮಾಧ್ಯಮದ ವಿರುದ್ಧ ಕಿಡಿಕಾರಿದ್ದಾರೆ.

ನಾನು ಒಂದು ಸಮುದಾಯಕ್ಕೆ ನೋವಾಗುವ ಉದ್ದೇಶದಿಂದ ಈ ಹೇಳಿಕೆ ನೀಡಿಲ್ಲ. ನನ್ನ ಮನೆಯಲ್ಲಿ ಎಲ್ಲರೂ ಹಿಂದೂಗಳೇ ಇದ್ದಾರೆ. ಎಲ್ಲರೂ ದೇವರನ್ನು ನಂಬುತ್ತಾರೆ. ಹೀಗಾಗಿ ನೋವಾಗುವ ಹೇಳಿಕೆಯನ್ನು ನಾನು ನೀಡುವುದಿಲ್ಲ ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಚೆನ್ನೈ: ನಾಥೂರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಹಿಂದೂ ಉಗ್ರ ಎನ್ನುವ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್​​ ವಿವಾದಿತ ಹೇಳಿಕೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಅವರಕುರುಚ್ಚಿಯಲ್ಲಿ ಚುನಾವಣಾ ಪ್ರಚಾರದ ವೇಳೆ ನೀಡಿರುವ ಹೇಳಿಕೆಗೆ ಸಾಕಷ್ಟು ಮಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಹೇಳಿರುವುದು ಐತಿಹಾಸಿಕ ಸತ್ಯ. ಈ ವಿಚಾರದಲ್ಲಿ ಯಾರೊಂದಿಗೂ ಜಗಳವಾಡಲು ನಾನು ಇಷ್ಟಪಡುವುದಿಲ್ಲ ಎಂದು ಕಮಲ್ ಹಾಸನ್​ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಹೆಚ್ಚಿನ ಓದಿಗಾಗಿ:

ಸ್ವತಂತ್ರ ಭಾರತದ ಮೊದಲ ಉಗ್ರ ಗೋಡ್ಸೆ...! ವಿವಾದಕ್ಕೆ ಕಾರಣವಾಗುತ್ತಾ ಕಮಲ್ ಹೇಳಿಕೆ..?

ನನ್ನ ಮಾತನ್ನು ಸಂಪೂರ್ಣವಾಗಿ ಕೇಳಿಸಿಕೊಳ್ಳದೇ ಮಾಧ್ಯಮಗಳು ಹೇಳಿಕೆ ತಪ್ಪಾಗಿ ಪ್ರಸಾರ ಮಾಡಿವೆ. ಮಾಧ್ಯಮಗಳು ಇಂತಹ ತಪ್ಪನ್ನು ಹಲವು ಬಾರಿ ಮಾಡಿವೆ ಎಂದು ಇದೇ ವೇಳೆ ಕಮಲ್​​ ಮಾಧ್ಯಮದ ವಿರುದ್ಧ ಕಿಡಿಕಾರಿದ್ದಾರೆ.

ನಾನು ಒಂದು ಸಮುದಾಯಕ್ಕೆ ನೋವಾಗುವ ಉದ್ದೇಶದಿಂದ ಈ ಹೇಳಿಕೆ ನೀಡಿಲ್ಲ. ನನ್ನ ಮನೆಯಲ್ಲಿ ಎಲ್ಲರೂ ಹಿಂದೂಗಳೇ ಇದ್ದಾರೆ. ಎಲ್ಲರೂ ದೇವರನ್ನು ನಂಬುತ್ತಾರೆ. ಹೀಗಾಗಿ ನೋವಾಗುವ ಹೇಳಿಕೆಯನ್ನು ನಾನು ನೀಡುವುದಿಲ್ಲ ಎಂದು ಕಮಲ್ ಹಾಸನ್ ಹೇಳಿದ್ದಾರೆ.

Intro:Body:

ಗೋಡ್ಸೆ ಹಿಂದೂ ಉಗ್ರ ಎನ್ನುವುದು ಐತಿಹಾಸಿಕ ಸತ್ಯ... ಹೇಳಿಕೆ ಸಮರ್ಥಿಸಿಕೊಂಡ ಕಮಲ್ ಹಾಸನ್



ಚೆನ್ನೈ: ನಾಥೂರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಹಿಂದೂ ಉಗ್ರ ಎನ್ನುವ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್​​ ವಿವಾದಿತ ಹೇಳಿಕೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ.



ನಾನು ಅವರಕುರುಚ್ಚಿಯಲ್ಲಿ ಚುನಾವಣಾ ಪ್ರಚಾರದ ವೇಳೆ ನೀಡಿರುವ ಹೇಳಿಕೆಗೆ ಸಾಕಷ್ಟು ಮಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಹೇಳಿರುವುದು ಐತಿಹಾಸಿಕ ಸತ್ಯ. ಈ ವಿಚಾರದಲ್ಲಿ ಯಾರೊಂದಿಗೂ  ಜಗಳವಾಡಲು ನಾನು ಇಷ್ಟಪಡುವುದಿಲ್ಲ ಎಂದು ಕಮಲ್ ಹಾಸನ್​ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.



ನನ್ನ ಮಾತನ್ನು ಸಂಪೂರ್ಣವಾಗಿ ಕೇಳಿಸಿಕೊಳ್ಳದೆ ಮಾಧ್ಯಮಗಳು ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿವೆ. ಮಾಧ್ಯಮಗಳು ಇಂತಹ ತಪ್ಪನ್ನು ಹಲವು ಬಾರಿ ಮಾಡಿವೆ ಎಂದು ಇದೇ ವೇಳೆ ಕಮಲ್​​ ಮಾಧ್ಯಮದ ವಿರುದ್ಧ ಕಿಡಿಕಾರಿದ್ದಾರೆ.



ನಾನು ಒಂದು ಸಮುದಾಯಕ್ಕೆ ನೋವಾಗುವ ಉದ್ದೇಶದಿಂದ ಈ ಹೇಳಿಕೆ ನೀಡಿಲ್ಲ. ನನ್ನ ಮನೆಯಲ್ಲಿ ಎಲ್ಲರೂ ಹಿಂದೂಗಳೇ ಇದ್ದಾರೆ. ಎಲ್ಲರೂ ದೇವರನ್ನು ನಂಬುತ್ತಾರೆ. ಹೀಗಾಗಿ ನೋವಾಗುವ ಹೇಳಿಕೆಯನ್ನು ನಾನು ನೀಡುವುದಿಲ್ಲ ಎಂದು ಕಮಲ್ ಹಾಸನ್ ಹೇಳಿದ್ದಾರೆ.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.