ETV Bharat / briefs

ತುಮಕೂರಿನ ಕಾಲುವೆಗಳಿಗೆ ಹೇಮಾವತಿ ನದಿ ನೀರು ಹರಿಸುವಲ್ಲಿ ಸರ್ಕಾರ ವಿಫಲ: ಸೊಗಡು ಶಿವಣ್ಣ

author img

By

Published : May 10, 2019, 8:36 PM IST

ತುಮಕೂರಿನ ಕಾಲುವೆಗಳಿಗೆ ಹೇಮಾವತಿ ನದಿ ನೀರು ಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದ್ದಾರೆ.

ಸೊಗಡು ಶಿವಣ್ಣ

ತುಮಕೂರು: ಜಿಲ್ಲೆಯ ಪಾಲಿನ ಹೇಮಾವತಿ ನದಿ ನೀರು ಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಜನರು, ಜಾನುವಾರುಗಳು, ಜಲಚರ ಪ್ರಾಣಿಗಳು ನೀರಿಲ್ಲದೆ ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಲಿ, ಶಾಸಕರೇ ಆಗಲಿ ಇಂತಹ ಬರಗಾಲದ ಸಂದರ್ಭದಲ್ಲಿ ವಿಶ್ರಾಂತಿಗೆಂದು ರೆಸಾರ್ಟ್​ನಲ್ಲಿ ತಂಗುವ ಸಮಯವಲ್ಲ. ರಾಜ್ಯ ಸರ್ಕಾರ ಸತ್ತು ಹೋಗಿದೆ. ವಿರೋಧ ಪಕ್ಷ ನಿದ್ರಿಸುತ್ತಿದೆ ಎಂದು ಟೀಕಿಸಿದರು. ಹೇಮಾವತಿ ನಾಲೆಯಲ್ಲಿ ಸರಾಗವಾಗಿ ನೀರು ಹರಿಯದ ಕಾರಣ ನಾಲೆಯಲ್ಲಿನ ಕಸ ತೆಗೆದು ಹೂಳು ಎತ್ತುವ ಕಾರ್ಯವನ್ನು ಸರ್ಕಾರ ಕೂಡಲೇ ಮಾಡಬೇಕು.

ಸೊಗಡು ಶಿವಣ್ಣ, ಮಾಜಿ ಸಚಿವ

ಜೂನ್ 10ರೊಳಗೆ ಹೂಳು ಎತ್ತುವ ಕಾರ್ಯವನ್ನು ಸರ್ಕಾರ ಆರಂಭಿಸದಿದ್ದರೆ ಹೋರಾಟ ಆರಂಭಿಸುವುದು ಅನಿವಾರ್ಯ ಎಂದರು. ನನ್ನ ಅವಧಿಯಲ್ಲಿ ಜಿಲ್ಲೆಗೆ ಪೂರ್ಣ ಪ್ರಮಾಣದಲ್ಲಿ ಹೇಮಾವತಿ ನದಿ ನೀರು ಹರಿಸಿ, ಕೆರೆಗಳನ್ನು ತುಂಬಿಸುವ ಮೂಲಕ ನೀರಿನ ಸಮಸ್ಯೆ ಇಲ್ಲದಂತೆ ಮಾಡಲಾಗಿತ್ತು. ಆದರೆ ಈಗ ಜಿಲ್ಲೆಯ ಪಾಲಿನ ನೀರು ಹರಿಯುತ್ತಿಲ್ಲ. ಸರ್ಕಾರ ಹಾಸನಕ್ಕೆ ಮಾತ್ರ ನೀರು ಎನ್ನುವಂತೆ ವರ್ತಿಸುತ್ತಿದೆ ಎಂದು ಕಿಡಿಕಾರಿದರು.

ತುಮಕೂರು: ಜಿಲ್ಲೆಯ ಪಾಲಿನ ಹೇಮಾವತಿ ನದಿ ನೀರು ಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಜನರು, ಜಾನುವಾರುಗಳು, ಜಲಚರ ಪ್ರಾಣಿಗಳು ನೀರಿಲ್ಲದೆ ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಲಿ, ಶಾಸಕರೇ ಆಗಲಿ ಇಂತಹ ಬರಗಾಲದ ಸಂದರ್ಭದಲ್ಲಿ ವಿಶ್ರಾಂತಿಗೆಂದು ರೆಸಾರ್ಟ್​ನಲ್ಲಿ ತಂಗುವ ಸಮಯವಲ್ಲ. ರಾಜ್ಯ ಸರ್ಕಾರ ಸತ್ತು ಹೋಗಿದೆ. ವಿರೋಧ ಪಕ್ಷ ನಿದ್ರಿಸುತ್ತಿದೆ ಎಂದು ಟೀಕಿಸಿದರು. ಹೇಮಾವತಿ ನಾಲೆಯಲ್ಲಿ ಸರಾಗವಾಗಿ ನೀರು ಹರಿಯದ ಕಾರಣ ನಾಲೆಯಲ್ಲಿನ ಕಸ ತೆಗೆದು ಹೂಳು ಎತ್ತುವ ಕಾರ್ಯವನ್ನು ಸರ್ಕಾರ ಕೂಡಲೇ ಮಾಡಬೇಕು.

ಸೊಗಡು ಶಿವಣ್ಣ, ಮಾಜಿ ಸಚಿವ

ಜೂನ್ 10ರೊಳಗೆ ಹೂಳು ಎತ್ತುವ ಕಾರ್ಯವನ್ನು ಸರ್ಕಾರ ಆರಂಭಿಸದಿದ್ದರೆ ಹೋರಾಟ ಆರಂಭಿಸುವುದು ಅನಿವಾರ್ಯ ಎಂದರು. ನನ್ನ ಅವಧಿಯಲ್ಲಿ ಜಿಲ್ಲೆಗೆ ಪೂರ್ಣ ಪ್ರಮಾಣದಲ್ಲಿ ಹೇಮಾವತಿ ನದಿ ನೀರು ಹರಿಸಿ, ಕೆರೆಗಳನ್ನು ತುಂಬಿಸುವ ಮೂಲಕ ನೀರಿನ ಸಮಸ್ಯೆ ಇಲ್ಲದಂತೆ ಮಾಡಲಾಗಿತ್ತು. ಆದರೆ ಈಗ ಜಿಲ್ಲೆಯ ಪಾಲಿನ ನೀರು ಹರಿಯುತ್ತಿಲ್ಲ. ಸರ್ಕಾರ ಹಾಸನಕ್ಕೆ ಮಾತ್ರ ನೀರು ಎನ್ನುವಂತೆ ವರ್ತಿಸುತ್ತಿದೆ ಎಂದು ಕಿಡಿಕಾರಿದರು.

Intro:ತುಮಕೂರು: ಜಿಲ್ಲೆಯ ಪಾಲಿನ ಹೇಮಾವತಿ ನದಿ ನೀರು ಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಜನರು, ಜಾನುವಾರುಗಳು, ಜಲಚರ ಪ್ರಾಣಿಗಳು ನೀರಿಲ್ಲದೆ ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪಿಸಿದರು.


Body:ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿಯಾಗಲಿ, ಶಾಸಕರೇ ಆಗಲಿ ಇಂತಹ ಬರಗಾಲದ ಸಂದರ್ಭದಲ್ಲಿ ವಿಶ್ರಾಂತಿಗೆಂದು ರಿಸಲ್ಟ್ ನಲ್ಲಿ ತಂಗುವ ಸಮಯವಲ್ಲ.
ರಾಜ್ಯ ಸರ್ಕಾರ ಸತ್ತು ಹೋಗಿದೆ, ವಿರೋಧ ಪಕ್ಷ ನಿದ್ರಿಸುತ್ತಿದೆ ಎಂದು ಟೀಕಿಸಿದರು. ಹೇಮಾವತಿ ನಾಲೆಯಲ್ಲಿ ಸರಾಗವಾಗಿ ನೀರು ಹರಿಯದ ಕಾರಣ, ನಾಲೆಯಲ್ಲಿನ ಕಸ ತೆಗೆದು ಗಿಡ ಮರಗಳನ್ನು ಹೂಳು ಎತ್ತುವ ಕಾರ್ಯವನ್ನು ಸರ್ಕಾರ ಕೂಡಲೇ ಮಾಡಬೇಕು.
ಜೂನ್ 10ರೊಳಗೆ ಹೂಳು ಎತ್ತುವ ಕಾರ್ಯವನ್ನು ಸರ್ಕಾರ ಆರಂಭಿಸದಿದ್ದರೆ, ಹೋರಾಟ ಆರಂಭಿಸುವುದು ಅನಿವಾರ್ಯ ಎಂದರು.
ನನ್ನ ಅವಧಿಯಲ್ಲಿ ಜಿಲ್ಲೆಗೆ ಪೂರ್ಣ ಪ್ರಮಾಣದ ಹೇಮಾವತಿ ನದಿ ನೀರು ಹರಿಸಿ, ಕೆರೆಗಳನ್ನು ತುಂಬಿಸುವ ಮೂಲಕ ನೀರಿನ ಸಮಸ್ಯೆ ಇಲ್ಲದಂತೆ ಮಾಡಲಾಗಿತ್ತು. ಆದರೆ ಈಗ ಜಿಲ್ಲೆಯ ಪಾಲಿನ ನೀರು ಹರಿಯುತ್ತಿಲ್ಲ. ಸರ್ಕಾರ ಹಾಸನಕ್ಕೆ ಮಾತ್ರ ನೀರು ಎನ್ನುವಂತೆ ವರ್ತಿಸುತ್ತಿದೆ ಎಂದು ಕಿಡಿಕಾರಿದರು.
ಇಂದು ರಾಜ್ಯದಲ್ಲಿ ಭೀಕರ ಬರ ಆವರಿಸಿದೆ, ರೈತರು ನೀರಿಲ್ಲದೆ ಬೆಳೆ ಕಳೆದುಕೊಳ್ಳುವಂತಾಗಿದೆ. ಬೋರ್ ವೆಲ್ ಗಳು ಬತ್ತಿ ಹೋಗಿವೆ, ಜಾನುವಾರುಗಳು ಮೇವು ನೀರಿಲ್ಲದೆ ಪರಿತಪಿಸುತ್ತೇವೆ, ರಾಜ್ಯ ಸರ್ಕಾರ ಬರ ನಿರ್ವಹಣೆ ಮಾಡದೆ ನಿರ್ಲಕ್ಷ್ಯ ತಾಳಿದೆ ಎಂದರು.
ಸಮಾಜದಲ್ಲಿ ಕಿಡಿಗೇಡಿಗಳು ವಿಜೃಂಭಿಸುತ್ತಿದ್ದಾರೆ, ಜಾತಿ ಹೆಸರಿನಲ್ಲಿ ರಾಜಕಾರಣ ನಡೆಯುತ್ತಿದೆ, ಭ್ರಷ್ಟಾಚಾರ, ಉಗ್ರವಾದ, ನಕ್ಸಲಿಸಂ, ಪುಡಿರೌಡಿಗಳು ತಮ್ಮ ಕರಾಮತ್ತು ತೋರುತ್ತಿದ್ದಾರೆ ಇದೆಲ್ಲದಕ್ಕೂ ಅಂತ್ಯ ಹಾಡುವ ಅಗತ್ಯವಿದೆ ಎಂದರು.


Conclusion:ಮುಖಂಡರಾದ ಎಂ.ಬಿ ನಂದೇಶ್, ಜಯಸಿಂಹ, ಮಹೇಶ್, ಬನಶಂಕರಿ ಬಾಬು ಇತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ವರದಿ
ಸುಧಾಕರ

For All Latest Updates

TAGGED:

Press meet
ETV Bharat Logo

Copyright © 2024 Ushodaya Enterprises Pvt. Ltd., All Rights Reserved.