ETV Bharat / briefs

ಕೃಷ್ಣಾ ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಡಿಕೆಶಿ ನೇತೃತ್ವದಲ್ಲಿ ಸಭೆ... ಸಾಹುಕಾರ್ ಅನುಪಸ್ಥಿತಿ ​ - undefined

ಕೃಷ್ಣಾ ನದಿ ನೀರು ಬಿಡುಗಡೆಯಲ್ಲಿ ಆಗುತ್ತಿರುವ ವಿಳಂಬ ನೀತಿ ಹಾಗೂ ನದಿ ನೀರು ಹಂಚಿಕೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಂದು ಬೆಳಗಾವಿಯಲ್ಲಿ ಸಚಿವ ಡಿ.ಕೆ. ಶಿವಕುಮಾರ್​ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಆದರೆ ಈ ಸಭೆಗೆ ಬೆಳಗಾವಿ ಸಾಹುಕಾರ್​ ಮಾತ್ರ ಗೈರುಹಾಜರಾಗಿದ್ದಾರೆ.

ಗೈರಾದ ಬೆಳಗಾವಿ ಸಾಹುಕಾರ್​
author img

By

Published : May 6, 2019, 1:42 PM IST

ಬೆಳಗಾವಿ : ಕೃಷ್ಣಾ ನದಿ ನೀರು ಬಿಡುಗಡೆಯಲ್ಲಿ ಆಗುತ್ತಿರುವ ವಿಳಂಬ ನೀತಿ ಹಾಗೂ ನದಿ ನೀರು ಹಂಚಿಕೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವರಿಂದ ಇಂದು ಬೆಳಗಾವಿಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಆದರೆ ಈ ಸಭೆಗೆ ಬೆಳಗಾವಿ ಸಾಹುಕಾರ್​ ಮಾತ್ರ ಗೈರುಹಾಜರಾಗಿದ್ದಾರೆ.

ಬೆಳಗಾವಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಕಚೇರಿಯಲ್ಲಿ ಸಚಿವ ಡಿ.ಕೆ. ಶಿವಕುಮಾರ್​ ನೇತೃತ್ವದಲ್ಲಿ ನಡೆಯುತ್ತಿರುವ ಇಂದಿನ ಸಭೆಯಲ್ಲಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ. ಆದರೆ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಮಾತ್ರ ಸಭೆಯಿಂದ ದೂರ ಉಳಿದಿದ್ದಾರೆ.

ಸಚಿವ ಡಿಕೆಶಿ ನೇತೃತ್ವದ ಸಭೆಗೆ ಬೆಳಗಾವಿ ಸಾಹುಕಾರ್​ ಗೈರುಹಾಜರು

ಪ್ರತಿ ವರ್ಷವೂ ಬರಗಾಲದಿಂದ ಕೃಷ್ಣಾ ನದಿ ಬತ್ತಿ ಹೋಗುತ್ತಿದೆ. ನದಿ ನೀರು ಹಂಚಿಕೆಯ ಕುರಿತು ಶಾಶ್ವತ ಪರಿಹಾರ ಹುಡುಕುವ ನಿಟ್ಟಿನಲ್ಲಿ ಇಂದಿನ ಸಭೆ ಅತ್ಯಂತ ಮಹತ್ವ ಪಡೆದಿದೆ. ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಇಂದಿನ ಸಭೆಯಲ್ಲಿ ನಡೆದಿದೆ.

ಕಾಂಗ್ರೆಸ್ ಪಕ್ಷದ ಜೊತೆ ಮುನಿಸಿಕೊಂಡಿರುವ ಹಿನ್ನೆಲೆ ರಮೇಶ್​ ಜಾರಕಿಹೊಳಿ ಇಂದಿನ ಸಭೆಗೆ ಹಾಜರಾಗಿಲ್ಲ. ಸಚಿವ ಡಿಕೆಶಿ ಜೊತೆಗಿನ ಭಿನ್ನಾಭಿಪ್ರಾಯವೇ ಇದಕ್ಕೆ ಕಾರಣ ಎಂದು ಹೇಳಲಾಗ್ತಿದೆ.

ಬೆಳಗಾವಿ : ಕೃಷ್ಣಾ ನದಿ ನೀರು ಬಿಡುಗಡೆಯಲ್ಲಿ ಆಗುತ್ತಿರುವ ವಿಳಂಬ ನೀತಿ ಹಾಗೂ ನದಿ ನೀರು ಹಂಚಿಕೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವರಿಂದ ಇಂದು ಬೆಳಗಾವಿಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಆದರೆ ಈ ಸಭೆಗೆ ಬೆಳಗಾವಿ ಸಾಹುಕಾರ್​ ಮಾತ್ರ ಗೈರುಹಾಜರಾಗಿದ್ದಾರೆ.

ಬೆಳಗಾವಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಕಚೇರಿಯಲ್ಲಿ ಸಚಿವ ಡಿ.ಕೆ. ಶಿವಕುಮಾರ್​ ನೇತೃತ್ವದಲ್ಲಿ ನಡೆಯುತ್ತಿರುವ ಇಂದಿನ ಸಭೆಯಲ್ಲಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ. ಆದರೆ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಮಾತ್ರ ಸಭೆಯಿಂದ ದೂರ ಉಳಿದಿದ್ದಾರೆ.

ಸಚಿವ ಡಿಕೆಶಿ ನೇತೃತ್ವದ ಸಭೆಗೆ ಬೆಳಗಾವಿ ಸಾಹುಕಾರ್​ ಗೈರುಹಾಜರು

ಪ್ರತಿ ವರ್ಷವೂ ಬರಗಾಲದಿಂದ ಕೃಷ್ಣಾ ನದಿ ಬತ್ತಿ ಹೋಗುತ್ತಿದೆ. ನದಿ ನೀರು ಹಂಚಿಕೆಯ ಕುರಿತು ಶಾಶ್ವತ ಪರಿಹಾರ ಹುಡುಕುವ ನಿಟ್ಟಿನಲ್ಲಿ ಇಂದಿನ ಸಭೆ ಅತ್ಯಂತ ಮಹತ್ವ ಪಡೆದಿದೆ. ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಇಂದಿನ ಸಭೆಯಲ್ಲಿ ನಡೆದಿದೆ.

ಕಾಂಗ್ರೆಸ್ ಪಕ್ಷದ ಜೊತೆ ಮುನಿಸಿಕೊಂಡಿರುವ ಹಿನ್ನೆಲೆ ರಮೇಶ್​ ಜಾರಕಿಹೊಳಿ ಇಂದಿನ ಸಭೆಗೆ ಹಾಜರಾಗಿಲ್ಲ. ಸಚಿವ ಡಿಕೆಶಿ ಜೊತೆಗಿನ ಭಿನ್ನಾಭಿಪ್ರಾಯವೇ ಇದಕ್ಕೆ ಕಾರಣ ಎಂದು ಹೇಳಲಾಗ್ತಿದೆ.

ಕೃಷ್ಣಾ ನದಿ ನೀರು ಸಮಸ್ಯೆ ಶಾಶ್ವತ ಪರಿಹಾರಕ್ಕೆ ಬೆಳಗಾವಿಯಲ್ಲಿ ಜನಪ್ರತಿನಿಧಿಗಳ ಮಹತ್ವದ ಸಭೆ ಬೆಳಗಾವಿ : ಕೃಷ್ಣಾ ನದಿ ನೀರು ಬಿಡುಗಡೆಯಲ್ಲಿ ಆಗುತ್ತಿರುವ ವಿಳಂಭ ನೀತಿ ಹಾಗೂ ನದಿ ನೀರು ಹಂಚಿಕೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವರಿಂದ ಇಂದು ಬೆಳಗಾವಿಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಬೆಳಗಾವಿಯ ನಿರಾವರಿ ನಿಗಮದ ಮುಖ್ಯ ಎಂಜಿನಿಯರ್ ಕಚೇರಿಯಲ್ಲಿ ಡಿಕೆಶಿ ನೇತೃತ್ವದಲ್ಲಿ ನಡೆಯುತ್ತಿರುವ ಇಂದಿನ ಸಭೆಯಲ್ಲಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಒಳಗೊಂಡಂತೆ. ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಿದ್ದಾರೆ. ಪ್ರತಿ ವರ್ಷವೂ ಬರಗಾಲದಿಂದ ಕೃಷ್ಣಾ ನದಿ ಬತ್ತಿ ಹೋಗುತ್ತಿದೆ. ನದಿ ನೀರು ಹಂಚಿಕೆಯ ಕುರಿತು ಶಾಶ್ವತ ಪರಿಹಾರ ಹುಡುಕುವ ನಿಟ್ಟಿನಲ್ಲಿ ಇಂದಿನ ಸಭೆ ತುಂಬಾ ಮಹತ್ವ ಪಡೆದಿದ್ದು ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆದಿದೆ. ಸಭೆಗೆ ಭಾರದ ರೆಬಲ್ ಶಾಸಕ : ಕಾಂಗ್ರೆಸ್ ಪಕ್ಷದ ಜೊತೆ ಮುನಿಸಿಕೊಂಡಿರುವ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಇಂದಿನ ಸಭೆಗೆ ಹಾಜರಾಗಿಲ್ಲ. ಸಚಿವ ಡಿಕೆಶಿ ಜೊತೆಗಿನ ಭಿನ್ನಾಭಿಪ್ರಾಯ ಒಂದುಕಡೆಯಾದರೆ ಸ್ಥಳಿಯ ಸಮಸ್ಯೆ ಪರಿಹಾರಕ್ಕೆ ಕರೆದ ಸಭೆಯಲ್ಲಿಯೂ ಭಾಗವಹಿಸದೆ ದೂರ ಉಳಿದಿದ್ದಾರೆ. ವಿನಾಯಕ ಮಠಪತಿ ಬೆಳಗಾವಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.