ETV Bharat / briefs

ಒಡಿಶಾದಲ್ಲಿ ಭೀಕರ ಚಂಡಮಾರುತ: 1,000 ಕೋಟಿ ರೂ ಬಿಡುಗಡೆ​ ಮಾಡಿದ ಪ್ರಧಾನಿ - ಸಹಾಯ

ಒಡಿಶಾ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಎಲ್ಲ ರೀತಿಯ ಸೌಲಭ್ಯ ಒದಗಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.

ಪ್ರಧಾನಿ ಮೋದಿ ಅಭಯ
author img

By

Published : May 3, 2019, 4:11 PM IST

ನವದೆಹಲಿ: ಒಡಿಶಾಕ್ಕೆ ಬಂದಪ್ಪಳಿಸಿರುವ ಫಣಿ ಚಂಡಮಾರುತ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ಈಗಾಗಲೇ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. 200ಕಿ.ಮೀ ರಭಸದಲ್ಲಿ ಗಾಳಿ ಬೀಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇದೇ ವೇಳೆ ಕೇಂದ್ರ ಸರ್ಕಾರ 1,000 ಕೋಟಿ ರೂ ಪರಿಹಾರ ಬಿಡುಗಡೆ ಮಾಡಿದೆ.

ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಒಡಿಶಾ, ಪಶ್ಚಿಮ ಬಂಗಾಳ,ಆಂಧ್ರಪ್ರದೇಶ,ತಮಿಳುನಾಡು ಹಾಗೂ ಪುದುಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ತಿಳಿಸಿದರು.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಸಾವಿರ ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಎನ್​ಡಿಆರ್​ಎಫ್​,ಇಂಡಿಯನ್​ ಕೋಸ್ಟ್​ ಗಾರ್ಡ್​​, ಭೂಸೇನೆ, ವಾಯುಪಡೆ ಒಡಿಶಾದಲ್ಲಿ ಕಾರ್ಯಾಚರಣೆ ಶುರು ಮಾಡಿವೆ.

ಒಡಿಶಾ ಸರ್ಕಾರ ಕೂಡ ಯಾವುದೇ ರೀತಿಯ ಹೆಚ್ಚಿನ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುತ್ತಿದ್ದು, ಸಕಲ ಕ್ರಮ ಕೈಗೊಂಡಿದೆ.

ನವದೆಹಲಿ: ಒಡಿಶಾಕ್ಕೆ ಬಂದಪ್ಪಳಿಸಿರುವ ಫಣಿ ಚಂಡಮಾರುತ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ಈಗಾಗಲೇ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. 200ಕಿ.ಮೀ ರಭಸದಲ್ಲಿ ಗಾಳಿ ಬೀಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇದೇ ವೇಳೆ ಕೇಂದ್ರ ಸರ್ಕಾರ 1,000 ಕೋಟಿ ರೂ ಪರಿಹಾರ ಬಿಡುಗಡೆ ಮಾಡಿದೆ.

ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಒಡಿಶಾ, ಪಶ್ಚಿಮ ಬಂಗಾಳ,ಆಂಧ್ರಪ್ರದೇಶ,ತಮಿಳುನಾಡು ಹಾಗೂ ಪುದುಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ತಿಳಿಸಿದರು.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಸಾವಿರ ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಎನ್​ಡಿಆರ್​ಎಫ್​,ಇಂಡಿಯನ್​ ಕೋಸ್ಟ್​ ಗಾರ್ಡ್​​, ಭೂಸೇನೆ, ವಾಯುಪಡೆ ಒಡಿಶಾದಲ್ಲಿ ಕಾರ್ಯಾಚರಣೆ ಶುರು ಮಾಡಿವೆ.

ಒಡಿಶಾ ಸರ್ಕಾರ ಕೂಡ ಯಾವುದೇ ರೀತಿಯ ಹೆಚ್ಚಿನ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುತ್ತಿದ್ದು, ಸಕಲ ಕ್ರಮ ಕೈಗೊಂಡಿದೆ.

Intro:Body:

ನಾವು ನಿಮ್ಮೊಂದಿಗಿದ್ದೇವೆ... ಫಣಿಗೆ ಹೆದರಬೇಡಿ; 1000 ಕೋಟಿ ರೂ ರಿಲೀಸ್​ ಮಾಡಿದ ಪ್ರಧಾನಿ!



ನವದೆಹಲಿ: ಒಡಿಶಾಕ್ಕೆ ಬಂದಪ್ಪಳಿಸಿರುವ ಫಣಿ ಚಂಡಮಾರುತ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ಈಗಾಗಲೇ ಮೂವರು ತಮ್ಮ ಪ್ರಾಣಕಳೆದುಕೊಂಡಿದ್ದಾರೆ. 200ಕಿ.ಮೀ ರಭಸದಲ್ಲಿ ಗಾಳಿ ಬೀಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. 



ಇತ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಒಡಿಶಾ, ಪಶ್ಚಿಮ ಬಂಗಾಳ,ಆಂಧ್ರಪ್ರದೇಶ,ತಮಿಳನಾಡು ಹಾಗೂ ಪುದುಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ. 



ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಸಾವಿರ ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಎನ್​ಡಿಆರ್​ಎಫ್​,ಇಂಡಿಯನ್​ ಕೋಸ್ಟ್​ ಗಾರ್ಡ್​​, ಆರ್ಮಿ,ವಾಯುಪಡೆ ಒಡಿಶಾದಲ್ಲಿ ಕಾರ್ಯಾಚರಣೆ ಶುರು ಮಾಡಿವೆ. ಇನ್ನು ಒಡಿಶಾ ಸರ್ಕಾರ ಕೂಡ ಯಾವುದೇ ರೀತಿಯ ಹೆಚ್ಚಿನ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುತ್ತಿದ್ದು, ಎಲ್ಲ ರೀತಿಯ ಕ್ರಮ ಕೈಗೊಂಡಿದೆ.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.