ETV Bharat / briefs

ಮೂತ್ರ ವಿಸರ್ಜನೆಗೆ ತೆರಳಿದ್ದ ಅತ್ಯಾಚಾರ ಪ್ರಕರಣದ ಆರೋಪಿ ಎಸ್ಕೇಪ್

author img

By

Published : Jun 7, 2020, 11:36 AM IST

ನ್ಯಾಯಾಲಯಕ್ಕೆ ಹಾಜರುಪಡಿಸಲೆಂದು ಕರೆದುಕೊಂಡು ಹೋಗುತ್ತಿದ್ದ ವೇಳೆ ಅತ್ಯಾಚಾರ ಪ್ರಕರಣ ಆರೋಪಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

Karwar
Karwar

ಕಾರವಾರ: ಮೂತ್ರ ವಿಸರ್ಜನೆಗೆ ತೆರಳಿದ್ದ ಅತ್ಯಾಚಾರ ಆರೋಪಿಯೊಬ್ಬ ಪರಾರಿಯಾಗಿರುವ ಘಟನೆ ಕುಮಟಾ ಪಟ್ಟಣದಲ್ಲಿ ನಡೆದಿದೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಈಶ್ವರ ಮುಕ್ರಿ (22) ಯನ್ನು ಕಾರವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಹೊನ್ನಾವರ ಪೊಲೀಸ್ ಠಾಣೆಯಿಂದ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು.

ಈ ವೇಳೆ ಆರೋಪಿ ಕುಮಟಾದ ಬಳಿ ಮೂತ್ರವಿಸರ್ಜನೆಗೆ ತೆರಳಬೇಕು ಎಂದಿದ್ದಾನೆ. ಪೊಲೀಸರು ಆತನನ್ನು ಬಸ್ ನಿಲ್ದಾಣದ ಶೌಚಾಲಯಕ್ಕೆ ಕಳುಹಿಸಿದ್ದರು. ಇದೇ ಸಮಯಕ್ಕಾಗಿ ಕಾಯುತ್ತಿದ್ದ ಆರೋಪಿ ಪರಾರಿಯಾಗಿದ್ದಾನೆ.

ಈ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರವಾರ: ಮೂತ್ರ ವಿಸರ್ಜನೆಗೆ ತೆರಳಿದ್ದ ಅತ್ಯಾಚಾರ ಆರೋಪಿಯೊಬ್ಬ ಪರಾರಿಯಾಗಿರುವ ಘಟನೆ ಕುಮಟಾ ಪಟ್ಟಣದಲ್ಲಿ ನಡೆದಿದೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಈಶ್ವರ ಮುಕ್ರಿ (22) ಯನ್ನು ಕಾರವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಹೊನ್ನಾವರ ಪೊಲೀಸ್ ಠಾಣೆಯಿಂದ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು.

ಈ ವೇಳೆ ಆರೋಪಿ ಕುಮಟಾದ ಬಳಿ ಮೂತ್ರವಿಸರ್ಜನೆಗೆ ತೆರಳಬೇಕು ಎಂದಿದ್ದಾನೆ. ಪೊಲೀಸರು ಆತನನ್ನು ಬಸ್ ನಿಲ್ದಾಣದ ಶೌಚಾಲಯಕ್ಕೆ ಕಳುಹಿಸಿದ್ದರು. ಇದೇ ಸಮಯಕ್ಕಾಗಿ ಕಾಯುತ್ತಿದ್ದ ಆರೋಪಿ ಪರಾರಿಯಾಗಿದ್ದಾನೆ.

ಈ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.