ಲಂಡನ್: ಜೂನ್ 16ರಂದು ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಸಾಂಪ್ರದಾಯಿಕ ಎದುರಾಳಿ ತಂಡ ಭಾರತ-ಪಾಕಿಸ್ತಾನ ಮುಖಾಮುಖಿಯಾಗಲಿವೆ. ಪಂದ್ಯ ಆರಂಭಕ್ಕೂ ಮೊದಲೇ ಪಾಕ್ ನಾಯಕನಿಗೆ ಸೋಲಿನ ಭೀತಿ ಎದುರಾಗಿದೆ.
ಪಾಕಿಸ್ತಾನ ತಾನಾಡಿರುವ ನಾಲ್ಕು ಪಂದ್ಯಗಳ ಪೈಕಿ ಎರಡಲ್ಲಿ ಸೋತು, ಮತ್ತೊಂದು ಪಂದ್ಯ ಮಳೆಗಾಹುತಿಯಾಗಿರುವ ಕಾರಣ ಕೇವಲ 3 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದೆ. ಸೆಮಿಫೈನಲ್ಗೆ ಲಗ್ಗೆ ಹಾಕಬೇಕಾದರೆ ಮುಂದಿನ ಪಂದ್ಯಗಳಲ್ಲಿ ಗೆಲುವು ದಾಖಲು ಮಾಡಬೇಕಾದ ಅನಿವಾರ್ಯತೆ ತಂಡಕ್ಕಿದೆ. ಹಾಗಾಗಿ ತಂಡದ ಕ್ಯಾಪ್ಟನ್ ಸರ್ಫರಾಜ್ ಅಹ್ಮದ್ ಸಹ ಆಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ.
ಪಾಕ್ ಜೂನ್ 16ರಂದು ಬಲಿಷ್ಠ ಭಾರತದ ವಿರುದ್ಧ ಸೆಣಸಾಟ ನಡೆಸಲಿರುವ ಕಾರಣ, ಕ್ಷೇತ್ರ ರಕ್ಷಣೆ ಸೇರಿದಂತೆ ಬ್ಯಾಟಿಂಗ್ ಹಾಗೂ ಬೌಲಿಂಗ್ವಿಭಾಗದ ಗುಣಮಟ್ಟ ಸುಧಾರಿಸಿಕೊಳ್ಳುವಂತೆ ಸೂಚನೆ ಕೊಟ್ಟಿದ್ದಾರೆ.
ಟೀಂ ಇಂಡಿಯಾ ಎಲ್ಲ ವಿಭಾಗಗಳಲ್ಲೂ ಬಲಾಢ್ಯವಾಗಿರುವ ಕಾರಣ, ಈಗಾಗಲೇ ತಾನು ಆಡಿರುವ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಈ ಮಧ್ಯೆ ಆಸ್ಟ್ರೇಲಿಯಾ ವಿರುದ್ಧ 41ರನ್ಗಳ ಸೋಲು ಕಂಡಿರುವ ಪಾಕಿಸ್ತಾನ, ಈಗಾಗಲೇ ಒತ್ತಡಕ್ಕೆ ಸಿಲುಕಿದ್ದು ಗೆಲುವಿನ ಲಯಕ್ಕೆ ಮರಳಲು ಹರಸಾಹಸ ಪಡಬೇಕಾಗಿದೆ.