ETV Bharat / briefs

ಮಸ್ಕಿ ಮತದಾರರಿಗೆ ಅಭಿನಂದನೆ ಸಲ್ಲಿಸಿದ ಡಾ. ಯತೀಂದ್ರ ಸಿದ್ದರಾಮಯ್ಯ

author img

By

Published : May 2, 2021, 8:59 PM IST

ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಿ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಹಾಗೂ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಧನ್ಯವಾದಗಳು..

Yathindra Siddaramaiah
Yathindra Siddaramaiah

ಬೆಂಗಳೂರು : ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದ ಮತದಾರರಿಗೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್ ಮೂಲಕ ಮಸ್ಕಿಯಲ್ಲಿ ಗೆಲುವು ಸಾಧಿಸಿದ ಬಸನಗೌಡ ತುರವಿಹಾಳ್​ಗೆ ಅಭಿನಂದನೆ ಸಲ್ಲಿಸಿರುವ ಡಾ. ಯತೀಂದ್ರ ಸಿದ್ದರಾಮಯ್ಯ, ಮತನೀಡಿ ಗೆಲ್ಲಿಸಿದವರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್​ನಲ್ಲಿ ಅವರು, ಬಸವಕಲ್ಯಾಣ ಉಪಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಮತನೀಡಿದ ಮತದಾರರಿಗೆ ಧನ್ಯವಾದಗಳು. ಈ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುವಂತಹ ಎಲ್ಲ ಅವಕಾಶವಿತ್ತು.

ಆದರೆ, ಜಾತ್ಯಾತೀತ ಮುಖವಾಡ ಧರಿಸಿರುವ ಕೋಮುವಾದಿಗಳ ರಾಜಕೀಯ ಕುತಂತ್ರದಿಂದ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ. ಈ ರೀತಿಯ ನಕಲಿ ಜಾತ್ಯಾತೀತರ ಬಗ್ಗೆ ಮುಂದಿನ ದಿನಗಳಲ್ಲಿ ಜನತೆ ಜಾಗೃತರಾಗಬೇಕು ಎಂದಿದ್ದಾರೆ.

ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಿ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಹಾಗೂ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಧನ್ಯವಾದಗಳು ಮತ್ತು ಜಯಗಳಿಸಿದ ಬಸನಗೌಡ ತುರವಿಹಾಳ್ ಅವರಿಗೆ ಅಭಿನಂದನೆಗಳು ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು : ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದ ಮತದಾರರಿಗೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್ ಮೂಲಕ ಮಸ್ಕಿಯಲ್ಲಿ ಗೆಲುವು ಸಾಧಿಸಿದ ಬಸನಗೌಡ ತುರವಿಹಾಳ್​ಗೆ ಅಭಿನಂದನೆ ಸಲ್ಲಿಸಿರುವ ಡಾ. ಯತೀಂದ್ರ ಸಿದ್ದರಾಮಯ್ಯ, ಮತನೀಡಿ ಗೆಲ್ಲಿಸಿದವರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್​ನಲ್ಲಿ ಅವರು, ಬಸವಕಲ್ಯಾಣ ಉಪಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಮತನೀಡಿದ ಮತದಾರರಿಗೆ ಧನ್ಯವಾದಗಳು. ಈ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುವಂತಹ ಎಲ್ಲ ಅವಕಾಶವಿತ್ತು.

ಆದರೆ, ಜಾತ್ಯಾತೀತ ಮುಖವಾಡ ಧರಿಸಿರುವ ಕೋಮುವಾದಿಗಳ ರಾಜಕೀಯ ಕುತಂತ್ರದಿಂದ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ. ಈ ರೀತಿಯ ನಕಲಿ ಜಾತ್ಯಾತೀತರ ಬಗ್ಗೆ ಮುಂದಿನ ದಿನಗಳಲ್ಲಿ ಜನತೆ ಜಾಗೃತರಾಗಬೇಕು ಎಂದಿದ್ದಾರೆ.

ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಿ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಹಾಗೂ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಧನ್ಯವಾದಗಳು ಮತ್ತು ಜಯಗಳಿಸಿದ ಬಸನಗೌಡ ತುರವಿಹಾಳ್ ಅವರಿಗೆ ಅಭಿನಂದನೆಗಳು ಎಂದು ಅಭಿಪ್ರಾಯಪಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.