ETV Bharat / business

ಕೇಂದ್ರ ಬಜೆಟ್​: ಚುನಾವಣೆ ಎದುರಿಸಲಿರುವ ರಾಜ್ಯಗಳ ಅಭಿವೃದ್ಧಿಗೆ ಬಂಪರ್​ ಆಫರ್​

author img

By

Published : Feb 1, 2021, 1:42 PM IST

Updated : Feb 1, 2021, 2:02 PM IST

ಈ ವರ್ಷ ಕೇರಳ, ತಮಿಳುನಾಡು, ಅಸ್ಸೋಂ, ಪಶ್ಚಿಮ ಬಂಗಾಳ ಹಾಗೂ ಪುದುಚೆರಿ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಬಹುಶಃ ಇದನ್ನೇ ಗಮನದಲ್ಲಿಟ್ಟುಕೊಂಡು ಈ ರಾಜ್ಯಗಳಿಗೆ ವಿಶೇಷ ಯೋಜನೆಗಳನ್ನು ಬಜೆಟ್​ನಲ್ಲಿ ಪ್ರಕಟಿಸಲಾಗಿದೆ.

Nirmala Sitharaman
ನಿರ್ಮಲಾ ಸೀತಾರಾಮನ್​

ನವದೆಹಲಿ: 2021-22ನೇ ಸಾಲಿನ ಕೇಂದ್ರ ಬಜೆಟ್​ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸುತ್ತಿದ್ದು, ಈ ಬಾರಿ ವಿಧಾನಸಭಾ ಚುನಾವಣೆಗಳು ನಡೆಸಲಿರುವ ರಾಜ್ಯಗಳ ಅಭಿವೃದ್ಧಿಗೆ ಬಂಪರ್​ ಆಫರ್​ ನೀಡಿದ್ದಾರೆ.

ಈ ವರ್ಷ ಕೇರಳ, ತಮಿಳುನಾಡು, ಅಸ್ಸೋಂ, ಪಶ್ಚಿಮ ಬಂಗಾಳ ಹಾಗೂ ಪುದುಚೆರಿ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಬಹುಶಃ ಇದನ್ನೇ ಗಮನದಲ್ಲಿಟ್ಟುಕೊಂಡು ಈ ರಾಜ್ಯಗಳಿಗೆ ವಿಶೇಷ ಯೋಜನೆಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ.

2022 ರೊಳಗಾಗಿ 8,500 ಕಿ.ಮೀ ಹೆದ್ದಾರಿ ನಿರ್ಮಾಣ ಯೋಜನೆ ಗುರಿ ಹೊಂದಿರುವುದಾಗಿ ಸಚಿವರು ಹೇಳಿದ್ದು, ಕೇರಳ, ತಮಿಳುನಾಡು, ಅಸ್ಸೋಂ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ರಸ್ತೆ ಮೂಲಸೌಕರ್ಯಗಳನ್ನು ಹೆಚ್ಚಿಸಲು ಮುಂದಾಗಿದ್ದಾರೆ. ಇದಕ್ಕಾಗಿ ನೀಡಿದ ಅನುದಾನ ಹೀಗಿದೆ.

  • ಕೇರಳದಲ್ಲಿ 65,000 ಕೋಟಿ ರೂ.ಗಳ 1,100 ಕಿ.ಮೀ ಹೆದ್ದಾರಿ ಯೋಜನೆ
  • ಪಶ್ಚಿಮ ಬಂಗಾಳದಲ್ಲಿ 25 ಸಾವಿರ ಕೋಟಿ ರೂ.ಗಳ 675 ಕಿ.ಮೀ ಹೆದ್ದಾರಿ ಯೋಜನೆ
  • ತಮಿಳುನಾಡಿನಲ್ಲಿ 1 ಲಕ್ಷ ಕೋಟಿ ರೂ. ಗಳ 3,500 ಕಿ.ಮೀ ಹೆದ್ದಾರಿ ಯೋಜನೆ
  • ಅಸ್ಸೋಂನಲ್ಲಿ 3,400 ಕೋಟಿ ರೂ.ಗಳ ಹೆದ್ದಾರಿ ಯೋಜನೆ

ರಸ್ತೆ ಅಪಘಾತಗಳು ಮತ್ತು ಅದಕ್ಕೆ ಸಂಬಂಧಿಸಿದ ಸಾವುಗಳ ಪ್ರಮಾಣವನ್ನು 2025ರ ಒಳಗಾಗಿ ಶೇ.50 ರಷ್ಟು ಇಳಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. 2,500 ಕಿ.ಮೀ ಎಕ್ಸ್‌ಪ್ರೆಸ್ ಹೆದ್ದಾರಿಗಳನ್ನು ಒಳಗೊಂಡಂತೆ ಮುಂದಿನ ಐದು ವರ್ಷಗಳಲ್ಲಿ 60,000 ಕಿ.ಮೀ ಹೆದ್ದಾರಿಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ ಎಂದು ಈ ಹಿಂದೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನಿತಿನ್​ ಗಡ್ಕರಿ ಹೇಳಿದ್ದರು.

ಚಹಾ ಕಾರ್ಮಿಕರಿಗಾಗಿ 1,000 ಕೋಟಿ ರೂ.

ರಸ್ತೆ ಅಭಿವೃದ್ಧಿಯಲ್ಲದೇ ಪಶ್ಚಿಮ ಬಂಗಾಳ ಮತ್ತು ಅಸ್ಸೋಂನಲ್ಲಿ ಚಹಾ ವ್ಯಾಪಾರಿಗಳಿಗಾಗಿ 1,000 ಕೋಟಿ ರೂ. ಅನುದಾನವನ್ನು ಬಜೆಟ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಎರಡು ರಾಜ್ಯಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಕ್ಕಾಗಿ ವಿಶೇಷ ಯೋಜನೆಯನ್ನು ಜಾರಿ ತರಲಾಗುವುದು ಎಂದು ಸೀತಾರಾಮನ್​ ಹೇಳಿದ್ದಾರೆ.

ನವದೆಹಲಿ: 2021-22ನೇ ಸಾಲಿನ ಕೇಂದ್ರ ಬಜೆಟ್​ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸುತ್ತಿದ್ದು, ಈ ಬಾರಿ ವಿಧಾನಸಭಾ ಚುನಾವಣೆಗಳು ನಡೆಸಲಿರುವ ರಾಜ್ಯಗಳ ಅಭಿವೃದ್ಧಿಗೆ ಬಂಪರ್​ ಆಫರ್​ ನೀಡಿದ್ದಾರೆ.

ಈ ವರ್ಷ ಕೇರಳ, ತಮಿಳುನಾಡು, ಅಸ್ಸೋಂ, ಪಶ್ಚಿಮ ಬಂಗಾಳ ಹಾಗೂ ಪುದುಚೆರಿ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಬಹುಶಃ ಇದನ್ನೇ ಗಮನದಲ್ಲಿಟ್ಟುಕೊಂಡು ಈ ರಾಜ್ಯಗಳಿಗೆ ವಿಶೇಷ ಯೋಜನೆಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ.

2022 ರೊಳಗಾಗಿ 8,500 ಕಿ.ಮೀ ಹೆದ್ದಾರಿ ನಿರ್ಮಾಣ ಯೋಜನೆ ಗುರಿ ಹೊಂದಿರುವುದಾಗಿ ಸಚಿವರು ಹೇಳಿದ್ದು, ಕೇರಳ, ತಮಿಳುನಾಡು, ಅಸ್ಸೋಂ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ರಸ್ತೆ ಮೂಲಸೌಕರ್ಯಗಳನ್ನು ಹೆಚ್ಚಿಸಲು ಮುಂದಾಗಿದ್ದಾರೆ. ಇದಕ್ಕಾಗಿ ನೀಡಿದ ಅನುದಾನ ಹೀಗಿದೆ.

  • ಕೇರಳದಲ್ಲಿ 65,000 ಕೋಟಿ ರೂ.ಗಳ 1,100 ಕಿ.ಮೀ ಹೆದ್ದಾರಿ ಯೋಜನೆ
  • ಪಶ್ಚಿಮ ಬಂಗಾಳದಲ್ಲಿ 25 ಸಾವಿರ ಕೋಟಿ ರೂ.ಗಳ 675 ಕಿ.ಮೀ ಹೆದ್ದಾರಿ ಯೋಜನೆ
  • ತಮಿಳುನಾಡಿನಲ್ಲಿ 1 ಲಕ್ಷ ಕೋಟಿ ರೂ. ಗಳ 3,500 ಕಿ.ಮೀ ಹೆದ್ದಾರಿ ಯೋಜನೆ
  • ಅಸ್ಸೋಂನಲ್ಲಿ 3,400 ಕೋಟಿ ರೂ.ಗಳ ಹೆದ್ದಾರಿ ಯೋಜನೆ

ರಸ್ತೆ ಅಪಘಾತಗಳು ಮತ್ತು ಅದಕ್ಕೆ ಸಂಬಂಧಿಸಿದ ಸಾವುಗಳ ಪ್ರಮಾಣವನ್ನು 2025ರ ಒಳಗಾಗಿ ಶೇ.50 ರಷ್ಟು ಇಳಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. 2,500 ಕಿ.ಮೀ ಎಕ್ಸ್‌ಪ್ರೆಸ್ ಹೆದ್ದಾರಿಗಳನ್ನು ಒಳಗೊಂಡಂತೆ ಮುಂದಿನ ಐದು ವರ್ಷಗಳಲ್ಲಿ 60,000 ಕಿ.ಮೀ ಹೆದ್ದಾರಿಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ ಎಂದು ಈ ಹಿಂದೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನಿತಿನ್​ ಗಡ್ಕರಿ ಹೇಳಿದ್ದರು.

ಚಹಾ ಕಾರ್ಮಿಕರಿಗಾಗಿ 1,000 ಕೋಟಿ ರೂ.

ರಸ್ತೆ ಅಭಿವೃದ್ಧಿಯಲ್ಲದೇ ಪಶ್ಚಿಮ ಬಂಗಾಳ ಮತ್ತು ಅಸ್ಸೋಂನಲ್ಲಿ ಚಹಾ ವ್ಯಾಪಾರಿಗಳಿಗಾಗಿ 1,000 ಕೋಟಿ ರೂ. ಅನುದಾನವನ್ನು ಬಜೆಟ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಎರಡು ರಾಜ್ಯಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಕ್ಕಾಗಿ ವಿಶೇಷ ಯೋಜನೆಯನ್ನು ಜಾರಿ ತರಲಾಗುವುದು ಎಂದು ಸೀತಾರಾಮನ್​ ಹೇಳಿದ್ದಾರೆ.

Last Updated : Feb 1, 2021, 2:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.