ETV Bharat / business

ಬಜೆಟ್​ನಲ್ಲಿ 'ಬಡವರು' ಪದ ಉಲ್ಲೇಖ: ದೇಶದಲ್ಲಿ ಬಡವರಿದ್ದಾರೆಂಬುದನ್ನ ನೆನಪಿಸಿಕೊಂಡ ಸಚಿವರಿಗೆ ಧನ್ಯವಾದ ಎಂದ ಚಿದಂಬರಂ

author img

By

Published : Feb 1, 2022, 8:14 PM IST

Ex-FM Chidambaram on Union Budget: ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿರುವ ಕೇಂದ್ರದ ಬಜೆಟ್ ಕುರಿತು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಮಾತನಾಡಿದ್ದು, ಇದೊಂದು ಬಂಡವಾಳಶಾಹಿ ಪರವಾದ ಬಜೆಟ್​ ಎಂದು ಕರೆದಿದ್ದಾರೆ.

Ex-FM Chidambaram on Union Budget
Ex-FM Chidambaram on Union Budget

ನವದಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಸುಮಾರು 90 ನಿಮಿಷಗಳ ಕಾಲ ಆಯವ್ಯಯ ಪ್ರತಿಯನ್ನು ಲೋಕಸಭೆಯಲ್ಲಿ ಮಂಡಿಸಿದರು. ಕೇಂದ್ರದಿಂದ ಮಂಡನೆಯಾಗಿರುವ ಬಜೆಟ್​ಗೆ ಪ್ರತಿಪಕ್ಷಗಳು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿವೆ.

ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ ಬಜೆಟ್ ಬಗ್ಗೆ ಚಿದಂಬರಂ ವಾಗ್ದಾಳಿ

ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಮಾಧ್ಯಮಗೋಷ್ಟಿ ನಡೆಸಿ, ಹಣಕಾಸು ಸಚಿವೆ ವಿರುದ್ಧ ನೇರ ವಾಗ್ದಾಳಿ ನಡೆಸಿದರು. ಈ ವೇಳೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರ ಮಂಡನೆ ಮಾಡಿರುವ ಬಜೆಟ್​​ ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಬಂಡವಾಳಶಾಹಿ ಪರವಾದ ಬಜೆಟ್​​ ಆಗಿದೆ ಎಂದರು. ನಿರ್ಮಲಾ ಸೀತಾರಾಮನ್​ ಅವರು ಬಜೆಟ್​ನಲ್ಲಿ ಕೇವಲ ಎರಡು ಸಲ 'ಬಡವರು'(poor) ಎಂಬ ಪದದ ಉಲ್ಲೇಖವಾಗಿದೆ. ಈ ಮೂಲಕ ದೇಶದಲ್ಲಿ ಬಡವರು ಇದ್ದಾರೆ ಎಂಬುದನ್ನ ನೆನಪಿಸಿಕೊಂಡಿರುವ ಅವರಿಗೆ ಧನ್ಯವಾದ ಹೇಳಬೇಕು ಎಂದು ವ್ಯಂಗ್ಯವಾಡಿದರು. ಬಡವರು ಈ ಬಜೆಟ್​​ ಅನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತಾರೆ ಎಂದರು.

  • Today's budget speech was the most capitalist speech to be ever read by an FM. The word 'poor' occurs only twice in para 6 & we thank FM for remembering that there are poor people in this country; people will reject this capitalist budget: Former FM &Congress leader P Chidambaram pic.twitter.com/NHBTlO46Pv

    — ANI (@ANI) February 1, 2022 " class="align-text-top noRightClick twitterSection" data=" ">

ಇದನ್ನೂ ಓದಿರಿ: 'ಇದೊಂದು ಶೂನ್ಯ ಬಜೆಟ್' ಎಂದ ರಾಹುಲ್​ ಗಾಂಧಿಗೆ ಸೀತಾರಾಮನ್ ತಿರುಗೇಟು..

ಕೇಂದ್ರದ ಬಜೆಟ್​ನಲ್ಲಿ ಮುಂದಿನ 25 ವರ್ಷಗಳ ಯೋಜನೆಯ ರೂಪುರೇಷ ಇದೆ ಎನ್ನಲಾಗ್ತಿದೆ. ಆದರೆ, ಪ್ರಸಕ್ತ ಸನ್ನಿವೇಶದ ಬಗ್ಗೆ ಯಾವುದೇ ರೀತಿಯ ಗಮನ ಹರಿಸಿಲ್ಲ. ಕೊರೊನಾ ಸಂಕಷ್ಟದ ಕಾಲದಲ್ಲಿ ಬಡವರು, ಜನಸಾಮಾನ್ಯರಿಗೆ ಯಾವುದೇ ರೀತಿಯ ಯೋಜನೆ ಘೋಷಣೆ ಮಾಡಿಲ್ಲ. ಕೇಂದ್ರ ಬಜೆಟ್​ನಲ್ಲಿ ಜನಸಾಮಾನ್ಯರ ನಿರೀಕ್ಷೆ ಈಡೇರಿಸುವಲ್ಲಿ ಕೇಂದ್ರ ಸಂಪೂರ್ಣವಾಗಿ ವಿಫಲವಾಗಿದ್ದು, ಕೇವಲ ಉದ್ಯಮಿಗಳ ಪರವಾದ ಬಜೆಟ್ ಮಂಡನೆಯಾಗಿದೆ ಎಂದು ಟೀಕಿಸಿದರು.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ನವದಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಸುಮಾರು 90 ನಿಮಿಷಗಳ ಕಾಲ ಆಯವ್ಯಯ ಪ್ರತಿಯನ್ನು ಲೋಕಸಭೆಯಲ್ಲಿ ಮಂಡಿಸಿದರು. ಕೇಂದ್ರದಿಂದ ಮಂಡನೆಯಾಗಿರುವ ಬಜೆಟ್​ಗೆ ಪ್ರತಿಪಕ್ಷಗಳು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿವೆ.

ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ ಬಜೆಟ್ ಬಗ್ಗೆ ಚಿದಂಬರಂ ವಾಗ್ದಾಳಿ

ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಮಾಧ್ಯಮಗೋಷ್ಟಿ ನಡೆಸಿ, ಹಣಕಾಸು ಸಚಿವೆ ವಿರುದ್ಧ ನೇರ ವಾಗ್ದಾಳಿ ನಡೆಸಿದರು. ಈ ವೇಳೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರ ಮಂಡನೆ ಮಾಡಿರುವ ಬಜೆಟ್​​ ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಬಂಡವಾಳಶಾಹಿ ಪರವಾದ ಬಜೆಟ್​​ ಆಗಿದೆ ಎಂದರು. ನಿರ್ಮಲಾ ಸೀತಾರಾಮನ್​ ಅವರು ಬಜೆಟ್​ನಲ್ಲಿ ಕೇವಲ ಎರಡು ಸಲ 'ಬಡವರು'(poor) ಎಂಬ ಪದದ ಉಲ್ಲೇಖವಾಗಿದೆ. ಈ ಮೂಲಕ ದೇಶದಲ್ಲಿ ಬಡವರು ಇದ್ದಾರೆ ಎಂಬುದನ್ನ ನೆನಪಿಸಿಕೊಂಡಿರುವ ಅವರಿಗೆ ಧನ್ಯವಾದ ಹೇಳಬೇಕು ಎಂದು ವ್ಯಂಗ್ಯವಾಡಿದರು. ಬಡವರು ಈ ಬಜೆಟ್​​ ಅನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತಾರೆ ಎಂದರು.

  • Today's budget speech was the most capitalist speech to be ever read by an FM. The word 'poor' occurs only twice in para 6 & we thank FM for remembering that there are poor people in this country; people will reject this capitalist budget: Former FM &Congress leader P Chidambaram pic.twitter.com/NHBTlO46Pv

    — ANI (@ANI) February 1, 2022 " class="align-text-top noRightClick twitterSection" data=" ">

ಇದನ್ನೂ ಓದಿರಿ: 'ಇದೊಂದು ಶೂನ್ಯ ಬಜೆಟ್' ಎಂದ ರಾಹುಲ್​ ಗಾಂಧಿಗೆ ಸೀತಾರಾಮನ್ ತಿರುಗೇಟು..

ಕೇಂದ್ರದ ಬಜೆಟ್​ನಲ್ಲಿ ಮುಂದಿನ 25 ವರ್ಷಗಳ ಯೋಜನೆಯ ರೂಪುರೇಷ ಇದೆ ಎನ್ನಲಾಗ್ತಿದೆ. ಆದರೆ, ಪ್ರಸಕ್ತ ಸನ್ನಿವೇಶದ ಬಗ್ಗೆ ಯಾವುದೇ ರೀತಿಯ ಗಮನ ಹರಿಸಿಲ್ಲ. ಕೊರೊನಾ ಸಂಕಷ್ಟದ ಕಾಲದಲ್ಲಿ ಬಡವರು, ಜನಸಾಮಾನ್ಯರಿಗೆ ಯಾವುದೇ ರೀತಿಯ ಯೋಜನೆ ಘೋಷಣೆ ಮಾಡಿಲ್ಲ. ಕೇಂದ್ರ ಬಜೆಟ್​ನಲ್ಲಿ ಜನಸಾಮಾನ್ಯರ ನಿರೀಕ್ಷೆ ಈಡೇರಿಸುವಲ್ಲಿ ಕೇಂದ್ರ ಸಂಪೂರ್ಣವಾಗಿ ವಿಫಲವಾಗಿದ್ದು, ಕೇವಲ ಉದ್ಯಮಿಗಳ ಪರವಾದ ಬಜೆಟ್ ಮಂಡನೆಯಾಗಿದೆ ಎಂದು ಟೀಕಿಸಿದರು.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.