ETV Bharat / business

ಮೂಲಸೌಕರ್ಯ ಅಭಿವೃದ್ಧಿಗಾಗಿ 6 ಸಾವಿರ ಕೋಟಿ ರೂ. ಹೂಡಿಕೆಗೆ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ

author img

By

Published : Nov 25, 2020, 5:06 PM IST

ಸದ್ಯಕ್ಕೆ 6 ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಿದ್ದು, ಇದೇ ಆರ್ಥಿಕ ವರ್ಷದಲ್ಲಿ ಮತ್ತೆ 2,400 ಕೋಟಿ ರೂಪಾಯಿ ಘೋಷಣೆ ಮಾಡಲಾಗುತ್ತದೆ ಎಂದು ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.

Union Minister Prakash Javadekar
ಕೇಂದ್ರ ಸಚಿವ ಪ್ರಕಾಶ ಜಾವ್ಡೇಕರ್

ನವದೆಹಲಿ: ದೇಶದಲ್ಲಿ ಮೂಲ ಸೌಕರ್ಯಗಳ ಸೃಷ್ಟಿಗಾಗಿ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಹಣದ ಹರಿವನ್ನು ಹೆಚ್ಚಳ ಮಾಡಲು 6 ಸಾವಿರ ಕೋಟಿ ರೂಪಾಯಿ ಬಂಡವಾಳದ ಒಳಹರಿವಿಗೆ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಕಾಶ ಜಾವ್ಡೇಕರ್ ಹೇಳಿದ್ದಾರೆ.

ಅಸೀಮ್ ಇನ್​ಫ್ರಾಸ್ಟ್ರಕ್ಚರ್ ಫೈನಾನ್ಸ್ ಲಿಮಿಟೆಡ್ ಹಾಗೂ ಎನ್​ಐಐಎಫ್ ಇನ್​​ಫ್ರಾಸ್ಟ್ರಕ್ಚರ್​ ಫೈನಾನ್ಸ್​ ಲಿಮಿಟೆಡ್ ಒಕ್ಕೂಟವಿರುವ ರಾಷ್ಟ್ರೀಯ ಹೂಡಿಕೆ ಹಾಗೂ ಮೂಲ ಸೌಕರ್ಯ ನಿಧಿಯ ಅಡಿಯಲ್ಲಿ ಸಾಲ ನೀಡಲಾಗುತ್ತದೆ.

2025ರ ವೇಳೆಗೆ 1.10 ಲಕ್ಷ ಕೋಟಿ ಮೌಲ್ಯದ ಮೂಲ ಸೌಕರ್ಯ ಯೋಜನೆಗಳಿಗೆ ಹಣ ಹೂಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ 6 ಸಾವಿರ ಕೋಟಿ ರೂಪಾಯಿಗೆ ಒಪ್ಪಿಗೆ ನೀಡಿರುವುದರಿಂದ ಯೋಜನೆಗಳಿಗೆ ಚಾಲನೆ ಸಿಗಲಿದೆ.

ಖಾಸಗಿ ಕಂಪನಿಗಳು ಮೂಲ ಸೌಕರ್ಯ ಅಭಿವೃದ್ಧಿಗೆ ಸಾಲದ ಅವಶ್ಯಕತೆ ಇದ್ದರೆ ತಮಗಿರುವ ಷೇರುಗಳ ಆಧಾರದಲ್ಲಿ ರಾಷ್ಟ್ರೀಯ ಹೂಡಿಕೆ ಹಾಗೂ ಮೂಲ ಸೌಕರ್ಯ ನಿಧಿಯ ಮೂಲಕ ಸಾಲ ಪಡೆಯಬಹುದಾಗಿದೆ.

ಈಗ ಸದ್ಯಕ್ಕೆ 6 ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಿದ್ದು, ಇದೇ ಆರ್ಥಿಕ ವರ್ಷದಲ್ಲಿ ಮತ್ತೆ 2,400 ಕೋಟಿ ರೂಪಾಯಿ ಘೋಷಣೆ ಮಾಡಲಾಗುತ್ತದೆ ಎಂದು ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.

ಎಲ್​ವಿಬಿಯೊಂದಿಗೆ ಡಿಬಿಐಎಲ್ ವಿಲೀನ

ಇತ್ತೀಚಿಗೆ ಲಕ್ಷ್ಮಿ ವಿಲಾಸ್​ ಬ್ಯಾಂಕ್​ನ ಮೇಲೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಲವು ನಿರ್ಬಂಧಗಳನ್ನು ಹೇರಿದ್ದು, ಗ್ರಾಹಕರು ಬ್ಯಾಂಕ್​ನಿಂದ ಹಣ ಪಡೆಯುವುದರ ಮೇಲೆ ಮಿತಿ ಹೇರಿತ್ತು.

ಈಗ ಡೆವಲಪ್‌ಮೆಂಟ್ ಬ್ಯಾಂಕ್ ಇಂಡಿಯಾ ಲಿಮಿಟೆಡ್ (ಡಿಬಿಐಎಲ್)ನೊಂದಿಗೆ ಲಕ್ಷ್ಮಿ ವಿಲಾಸ್ ಬ್ಯಾಂಕ್​ ವಿಲೀನಗೊಳಿಸಲು ಕೇಂದ್ರ ಕ್ಯಾಬಿನೆಟ್ ಅನುಮೋದಿಸಿದೆ ಎಂದು ಕೇಂದ್ರ ಸಚಿವ ಪ್ರಕಾಶ್​ ಜಾವ್ಡೇಕರ್ ಮಾಹಿತಿ ನೀಡಿದ್ದಾರೆ.

ಈ ವಿಲೀನದ ನಂತರ ಗ್ರಾಹಕರು ಬ್ಯಾಂಕ್​ನಲ್ಲಿ ಹಣ ಜಮಾವಣೆ ಮಾಡಲು ಅಥವಾ ಹಣ ಹಿಂಪಡೆಯಲು ಯಾವುದೇ ರೀತಿಯ ಮಿತಿ ಇರುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ನವದೆಹಲಿ: ದೇಶದಲ್ಲಿ ಮೂಲ ಸೌಕರ್ಯಗಳ ಸೃಷ್ಟಿಗಾಗಿ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಹಣದ ಹರಿವನ್ನು ಹೆಚ್ಚಳ ಮಾಡಲು 6 ಸಾವಿರ ಕೋಟಿ ರೂಪಾಯಿ ಬಂಡವಾಳದ ಒಳಹರಿವಿಗೆ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಕಾಶ ಜಾವ್ಡೇಕರ್ ಹೇಳಿದ್ದಾರೆ.

ಅಸೀಮ್ ಇನ್​ಫ್ರಾಸ್ಟ್ರಕ್ಚರ್ ಫೈನಾನ್ಸ್ ಲಿಮಿಟೆಡ್ ಹಾಗೂ ಎನ್​ಐಐಎಫ್ ಇನ್​​ಫ್ರಾಸ್ಟ್ರಕ್ಚರ್​ ಫೈನಾನ್ಸ್​ ಲಿಮಿಟೆಡ್ ಒಕ್ಕೂಟವಿರುವ ರಾಷ್ಟ್ರೀಯ ಹೂಡಿಕೆ ಹಾಗೂ ಮೂಲ ಸೌಕರ್ಯ ನಿಧಿಯ ಅಡಿಯಲ್ಲಿ ಸಾಲ ನೀಡಲಾಗುತ್ತದೆ.

2025ರ ವೇಳೆಗೆ 1.10 ಲಕ್ಷ ಕೋಟಿ ಮೌಲ್ಯದ ಮೂಲ ಸೌಕರ್ಯ ಯೋಜನೆಗಳಿಗೆ ಹಣ ಹೂಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ 6 ಸಾವಿರ ಕೋಟಿ ರೂಪಾಯಿಗೆ ಒಪ್ಪಿಗೆ ನೀಡಿರುವುದರಿಂದ ಯೋಜನೆಗಳಿಗೆ ಚಾಲನೆ ಸಿಗಲಿದೆ.

ಖಾಸಗಿ ಕಂಪನಿಗಳು ಮೂಲ ಸೌಕರ್ಯ ಅಭಿವೃದ್ಧಿಗೆ ಸಾಲದ ಅವಶ್ಯಕತೆ ಇದ್ದರೆ ತಮಗಿರುವ ಷೇರುಗಳ ಆಧಾರದಲ್ಲಿ ರಾಷ್ಟ್ರೀಯ ಹೂಡಿಕೆ ಹಾಗೂ ಮೂಲ ಸೌಕರ್ಯ ನಿಧಿಯ ಮೂಲಕ ಸಾಲ ಪಡೆಯಬಹುದಾಗಿದೆ.

ಈಗ ಸದ್ಯಕ್ಕೆ 6 ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಿದ್ದು, ಇದೇ ಆರ್ಥಿಕ ವರ್ಷದಲ್ಲಿ ಮತ್ತೆ 2,400 ಕೋಟಿ ರೂಪಾಯಿ ಘೋಷಣೆ ಮಾಡಲಾಗುತ್ತದೆ ಎಂದು ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.

ಎಲ್​ವಿಬಿಯೊಂದಿಗೆ ಡಿಬಿಐಎಲ್ ವಿಲೀನ

ಇತ್ತೀಚಿಗೆ ಲಕ್ಷ್ಮಿ ವಿಲಾಸ್​ ಬ್ಯಾಂಕ್​ನ ಮೇಲೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಲವು ನಿರ್ಬಂಧಗಳನ್ನು ಹೇರಿದ್ದು, ಗ್ರಾಹಕರು ಬ್ಯಾಂಕ್​ನಿಂದ ಹಣ ಪಡೆಯುವುದರ ಮೇಲೆ ಮಿತಿ ಹೇರಿತ್ತು.

ಈಗ ಡೆವಲಪ್‌ಮೆಂಟ್ ಬ್ಯಾಂಕ್ ಇಂಡಿಯಾ ಲಿಮಿಟೆಡ್ (ಡಿಬಿಐಎಲ್)ನೊಂದಿಗೆ ಲಕ್ಷ್ಮಿ ವಿಲಾಸ್ ಬ್ಯಾಂಕ್​ ವಿಲೀನಗೊಳಿಸಲು ಕೇಂದ್ರ ಕ್ಯಾಬಿನೆಟ್ ಅನುಮೋದಿಸಿದೆ ಎಂದು ಕೇಂದ್ರ ಸಚಿವ ಪ್ರಕಾಶ್​ ಜಾವ್ಡೇಕರ್ ಮಾಹಿತಿ ನೀಡಿದ್ದಾರೆ.

ಈ ವಿಲೀನದ ನಂತರ ಗ್ರಾಹಕರು ಬ್ಯಾಂಕ್​ನಲ್ಲಿ ಹಣ ಜಮಾವಣೆ ಮಾಡಲು ಅಥವಾ ಹಣ ಹಿಂಪಡೆಯಲು ಯಾವುದೇ ರೀತಿಯ ಮಿತಿ ಇರುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.