ETV Bharat / business

ಮೋದಿ ಕನಸಿನ ಮನೆ ಮನೆಗೂ 'ಜಲಧಾರೆ' ಯೋಜನೆಗೆ ಎಷ್ಟು ಲಕ್ಷ ಕೋಟಿ ರೂ. ಬೇಕು ಗೊತ್ತೆ? - finance minister nirmala sitharaman

'ಹರ್‌ ಘರ್‌ ಜಲ್‌' ಯೋಜನೆ ಜಾರಿಗೆ ತಂದು ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಪೂರೈಸುವುದು ಕೇಂದ್ರ ಸರ್ಕಾರದ ಆದ್ಯತೆ. ಈ ದಿಸೆಯಲ್ಲಿ ಪ್ರಮುಖ ಹೆಜ್ಜೆಯಾಗಿ ಜಲ ಶಕ್ತಿ ಸಚಿವಾಲಯವನ್ನು ರೂಪಿಸಲಾಗಿದೆ. ಜಲ್‌ ಜೀವನ್‌ ಮಿಷನ್‌ನಡಿ ಪ್ರತಿ ಮನೆಗೆ ನೀರು ಪೂರೈಸಲು ಈ ಸಚಿವಾಲಯವು ರಾಜ್ಯಗಳ ಜತೆಗೆ ಕಾರ್ಯ ನಿರ್ವಹಿಸಲಿದೆ' ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಮೊದಲ ಬಜೆಟ್​ನಲ್ಲಿ ಘೋಷಿಸಿದ್ದರು.

ಸಾಂದರ್ಭಿಕ ಚಿತ್ರ
author img

By

Published : Sep 5, 2019, 1:34 PM IST

ನವದೆಹಲಿ: ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ 2024ರ ವೇಳೆಗೆ ಪೈಪ್‌ಲೈನ್‌ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆಯ 'ಹರ್‌ ಘರ್‌ ಜಲ್‌' ಯೋಜನೆ ಅನುಷ್ಠಾನಕ್ಕೆ ₹ 7.88 ಲಕ್ಷ ಕೋಟಿ ವೆಚ್ಚ ತಗುಲಲಿದೆ.

'ಹರ್‌ ಘರ್‌ ಜಲ್‌' ಯೋಜನೆ ಜಾರಿಗೆ ತಂದು ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಪೂರೈಸುವುದು ಕೇಂದ್ರ ಸರ್ಕಾರದ ಆದ್ಯತೆ. ಈ ದಿಸೆಯಲ್ಲಿ ಪ್ರಮುಖ ಹೆಜ್ಜೆಯಾಗಿ ಜಲ ಶಕ್ತಿ ಸಚಿವಾಲಯವನ್ನು ರೂಪಿಸಲಾಗಿದೆ. ಜಲ್‌ ಜೀವನ್‌ ಮಿಷನ್‌ನಡಿ ಪ್ರತಿ ಮನೆಗೆ ನೀರು ಪೂರೈಸಲು ಈ ಸಚಿವಾಲಯವು ರಾಜ್ಯಗಳ ಜತೆಗೆ ಕಾರ್ಯ ನಿರ್ವಹಿಸಲಿದೆ' ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಮೊದಲ ಬಜೆಟ್​ನಲ್ಲಿ ಘೋಷಿಸಿದ್ದರು.

ರಾಜ್ಯಗಳು ಜಲಶಕ್ತಿ ಸಚಿವಾಲಯಕ್ಕೆ ಸಲ್ಲಿಸಿದ ಯೋಜನಾ ವರದಿಗಳ ಆಧಾರದ ಮೇಲೆ ಮತ್ತು ದೇಶದಲ್ಲಿನ ಪ್ರಸ್ತುತ ಶೇ 18ರಷ್ಟು ಕೊಳವೆ ನೀರಿನ ವ್ಯಾಪ್ತಿಯನ್ನು ಪರಿಗಣಿಸಿ ಯೋಜನಾ ವೆಚ್ಚವನ್ನು ನಿಗದಿಪಡಿಸಲಾಗಿದೆ.

ಮಹತ್ವಾಕಾಂಕ್ಷೆಯ ಯೋಜನೆಗೆ ಭಾರಿ ಪ್ರಮಾಣದ ನಿಧಿಯ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು, ರಸ್ತೆ ವಲಯದಲ್ಲಿ ಯಶಸ್ವಿಯಾಗಿ ಜಾರಿಗೆ ತಂದಿರುವ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮತ್ತು ಹೈಬ್ರಿಡ್ ಮಾದರಿಯಂತಹ ನವೀನ ಹಣಕಾಸು ಆಯ್ಕೆಗಳತ್ತ ಕೇಂದ್ರ ಸರ್ಕಾರ ಮುಖಮಾಡಿದೆ.

ಯೋಜನೆ ಜಾರಿಗೆ ಲಭ್ಯವಿರುವ ನವೀನ ಹಣಕಾಸು ಮಾದರಿಗಳನ್ನು ರಾಜ್ಯಗಳು ಆರಿಸಿಕೊಳ್ಳಬಹುದು ಎಂದು ಅಧಿಕಾರಿ ಹೇಳಿದರು.

ಅನುಷ್ಠಾನವು ಸವಾಲಿನಂತೆ ಕಾಣುತ್ತಿದ್ದರೂ, ಸ್ವಚ್ಛ ಭಾರತ್ ಮಿಷನ್‌ನಲ್ಲಿ ವೆಚ್ಚವಾದ ಹಣದಂತೆ ಎತ್ತಿ ತೋರಿಸುತ್ತಿದೆ. ಆದರೂ ಕೊಳವೆಗಳ ಮೂಲಕ ಶುದ್ಧ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸುವ ವಿಶ್ವಾಸ ಸರ್ಕಾರದ ಮಟ್ಟದಲ್ಲಿದೆ.

ನವದೆಹಲಿ: ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ 2024ರ ವೇಳೆಗೆ ಪೈಪ್‌ಲೈನ್‌ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆಯ 'ಹರ್‌ ಘರ್‌ ಜಲ್‌' ಯೋಜನೆ ಅನುಷ್ಠಾನಕ್ಕೆ ₹ 7.88 ಲಕ್ಷ ಕೋಟಿ ವೆಚ್ಚ ತಗುಲಲಿದೆ.

'ಹರ್‌ ಘರ್‌ ಜಲ್‌' ಯೋಜನೆ ಜಾರಿಗೆ ತಂದು ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಪೂರೈಸುವುದು ಕೇಂದ್ರ ಸರ್ಕಾರದ ಆದ್ಯತೆ. ಈ ದಿಸೆಯಲ್ಲಿ ಪ್ರಮುಖ ಹೆಜ್ಜೆಯಾಗಿ ಜಲ ಶಕ್ತಿ ಸಚಿವಾಲಯವನ್ನು ರೂಪಿಸಲಾಗಿದೆ. ಜಲ್‌ ಜೀವನ್‌ ಮಿಷನ್‌ನಡಿ ಪ್ರತಿ ಮನೆಗೆ ನೀರು ಪೂರೈಸಲು ಈ ಸಚಿವಾಲಯವು ರಾಜ್ಯಗಳ ಜತೆಗೆ ಕಾರ್ಯ ನಿರ್ವಹಿಸಲಿದೆ' ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಮೊದಲ ಬಜೆಟ್​ನಲ್ಲಿ ಘೋಷಿಸಿದ್ದರು.

ರಾಜ್ಯಗಳು ಜಲಶಕ್ತಿ ಸಚಿವಾಲಯಕ್ಕೆ ಸಲ್ಲಿಸಿದ ಯೋಜನಾ ವರದಿಗಳ ಆಧಾರದ ಮೇಲೆ ಮತ್ತು ದೇಶದಲ್ಲಿನ ಪ್ರಸ್ತುತ ಶೇ 18ರಷ್ಟು ಕೊಳವೆ ನೀರಿನ ವ್ಯಾಪ್ತಿಯನ್ನು ಪರಿಗಣಿಸಿ ಯೋಜನಾ ವೆಚ್ಚವನ್ನು ನಿಗದಿಪಡಿಸಲಾಗಿದೆ.

ಮಹತ್ವಾಕಾಂಕ್ಷೆಯ ಯೋಜನೆಗೆ ಭಾರಿ ಪ್ರಮಾಣದ ನಿಧಿಯ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು, ರಸ್ತೆ ವಲಯದಲ್ಲಿ ಯಶಸ್ವಿಯಾಗಿ ಜಾರಿಗೆ ತಂದಿರುವ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮತ್ತು ಹೈಬ್ರಿಡ್ ಮಾದರಿಯಂತಹ ನವೀನ ಹಣಕಾಸು ಆಯ್ಕೆಗಳತ್ತ ಕೇಂದ್ರ ಸರ್ಕಾರ ಮುಖಮಾಡಿದೆ.

ಯೋಜನೆ ಜಾರಿಗೆ ಲಭ್ಯವಿರುವ ನವೀನ ಹಣಕಾಸು ಮಾದರಿಗಳನ್ನು ರಾಜ್ಯಗಳು ಆರಿಸಿಕೊಳ್ಳಬಹುದು ಎಂದು ಅಧಿಕಾರಿ ಹೇಳಿದರು.

ಅನುಷ್ಠಾನವು ಸವಾಲಿನಂತೆ ಕಾಣುತ್ತಿದ್ದರೂ, ಸ್ವಚ್ಛ ಭಾರತ್ ಮಿಷನ್‌ನಲ್ಲಿ ವೆಚ್ಚವಾದ ಹಣದಂತೆ ಎತ್ತಿ ತೋರಿಸುತ್ತಿದೆ. ಆದರೂ ಕೊಳವೆಗಳ ಮೂಲಕ ಶುದ್ಧ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸುವ ವಿಶ್ವಾಸ ಸರ್ಕಾರದ ಮಟ್ಟದಲ್ಲಿದೆ.

Intro:Body:Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.