ETV Bharat / business

ಸರ್ಕಾರಿ ಬ್ಯಾಂಕ್​ಗಳ ಖಾಸಗೀಕರಣ: ಸರ್ಕಾರದ ಜತೆ ಆರ್‌ಬಿಐ ಚರ್ಚಿಸುತ್ತಿದೆ - ಗವರ್ನರ್​ ಶಕ್ತಿಕಾಂತ್

ಫೆಬ್ರವರಿ 1ರಂದು ತಮ್ಮ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಮುಂದಿನ ದಿನಗಳಲ್ಲಿ ಎರಡು ಸಾರ್ವಜನಿಕ ವಲಯದ ಬ್ಯಾಂಕ್​ಗಳನ್ನು ಸರ್ಕಾರ ಖಾಸಗೀಕರಣಗೊಳಿಸಲಿ ಎಂದು ಘೋಷಿಸಿದ್ದರು.

author img

By

Published : Mar 25, 2021, 12:59 PM IST

ಗವರ್ನರ್​ ಶಕ್ತಿಕಾಂತ್
ಗವರ್ನರ್​ ಶಕ್ತಿಕಾಂತ್

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್​ಗಳ (ಪಿಎಸ್‌ಬಿ) ಖಾಸಗೀಕರಣದ ಕುರಿತು ಸರ್ಕಾರದೊಂದಿಗೆ ಚರ್ಚೆಗಳು ನಡೆಯುತ್ತಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಪಿಎಸ್‌ಬಿಗಳ ಖಾಸಗೀಕರಣದ ಕುರಿತು ನಾವು ಸರ್ಕಾರದೊಂದಿಗೆ ಚರ್ಚಿಸುತ್ತಿದ್ದೇವೆ. ಈ ಪ್ರಕ್ರಿಯೆಯು ಮುಂದುವರಿಯುತ್ತದೆ ಎಂದು ಇಂಡಿಯಾ ಎಕನಾಮಿಕ್ ಕನ್​ಕ್ಲೇವ್‌ನಲ್ಲಿ ಆರ್‌ಬಿಐ ಗವರ್ನರ್ ಹೇಳಿದರು.

ಖಾಸಗೀಕರಣಗೊಳ್ಳುವ ಸಾಧ್ಯತೆ ಇರುವ ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಎಲ್ಲ ಉದ್ಯೋಗಿಗಳ ಹಿತಾಸಕ್ತಿ ಕಾಪಾಡಲಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಂಗಳವಾರ ಭರವಸೆ ನೀಡಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬ್ಯಾಂಕಿಂಗ್ ಜಾಗದಲ್ಲಿ ಸಾರ್ವಜನಿಕ ವಲಯದ ಉಪಸ್ಥಿತಿಯು ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ನಿರುದ್ಯೋಗವು ತಮಿಳುನಾಡಿನಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ: ವೀರಪ್ಪ ಮೊಯ್ಲಿ

ಖಾಸಗೀಕರಣಗೊಂಡ ಸಂಸ್ಥೆಯ ಮೇಲ್ವಿಚಾರಣೆಯ ಕಾರ್ಯವನ್ನೂ ಸಹ ಸರ್ಕಾರವೇ ಕಾರ್ಯನಿರ್ವಹಿಸುತ್ತದೆ. ಖಾಸಗೀಕರಣದ ನಂತರ, ಅಲ್ಲಿರುವ ಅಧಿಕಾರಿಗಳು ಅಥವಾ ಸಿಬ್ಬಂದಿ, ಅವರ ಪ್ರತಿಯೊಬ್ಬರ ರಕ್ಷಣೆ ಮಾಡಲಾಗುವುದು ಎಂದಿದ್ದರು.

ಸರ್ಕಾರವು ಈಗಾಗಲೇ ಐಡಿಬಿಐ ಬ್ಯಾಂಕ್ ಅನ್ನು 2019ರಲ್ಲಿ ಎಲ್‌ಐಸಿಗೆ ಮಾರಾಟ ಮಾಡುವ ಮೂಲಕ ಖಾಸಗೀಕರಣಗೊಳಿಸಿದೆ. ಕಳೆದ ನಾಲ್ಕು ವರ್ಷಗಳಲ್ಲಿ 14 ಸಾರ್ವಜನಿಕ ವಲಯದ ಬ್ಯಾಂಕ್​ಗಳನ್ನು ವಿಲೀನಗೊಳಿಸಿದೆ.

ಎರಡು ಸಾರ್ವಜನಿಕ ವಲಯದ ಬ್ಯಾಂಕ್​ಗಳ ಖಾಸಗೀಕರಣವು ಅವುಗಳ ರೇಟಿಂಗ್‌ಗಳ ಮೇಲೆ ಪರಿಣಾಮ ಬೀರಬಹುದು. ಎರಡು ಘಟಕಗಳಿಗೆ ಸರ್ಕಾರದ ಬೆಂಬಲ ಕಣ್ಮರೆಯಾಗುತ್ತದೆ ಎಂದು ಇಂಡಿಯಾ ರೇಟಿಂಗ್ಸ್ ಅಂಡ್​ ರಿಸರ್ಚ್ ಬುಧವಾರ ತಿಳಿಸಿದೆ.

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್​ಗಳ (ಪಿಎಸ್‌ಬಿ) ಖಾಸಗೀಕರಣದ ಕುರಿತು ಸರ್ಕಾರದೊಂದಿಗೆ ಚರ್ಚೆಗಳು ನಡೆಯುತ್ತಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಪಿಎಸ್‌ಬಿಗಳ ಖಾಸಗೀಕರಣದ ಕುರಿತು ನಾವು ಸರ್ಕಾರದೊಂದಿಗೆ ಚರ್ಚಿಸುತ್ತಿದ್ದೇವೆ. ಈ ಪ್ರಕ್ರಿಯೆಯು ಮುಂದುವರಿಯುತ್ತದೆ ಎಂದು ಇಂಡಿಯಾ ಎಕನಾಮಿಕ್ ಕನ್​ಕ್ಲೇವ್‌ನಲ್ಲಿ ಆರ್‌ಬಿಐ ಗವರ್ನರ್ ಹೇಳಿದರು.

ಖಾಸಗೀಕರಣಗೊಳ್ಳುವ ಸಾಧ್ಯತೆ ಇರುವ ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಎಲ್ಲ ಉದ್ಯೋಗಿಗಳ ಹಿತಾಸಕ್ತಿ ಕಾಪಾಡಲಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಂಗಳವಾರ ಭರವಸೆ ನೀಡಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬ್ಯಾಂಕಿಂಗ್ ಜಾಗದಲ್ಲಿ ಸಾರ್ವಜನಿಕ ವಲಯದ ಉಪಸ್ಥಿತಿಯು ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ನಿರುದ್ಯೋಗವು ತಮಿಳುನಾಡಿನಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ: ವೀರಪ್ಪ ಮೊಯ್ಲಿ

ಖಾಸಗೀಕರಣಗೊಂಡ ಸಂಸ್ಥೆಯ ಮೇಲ್ವಿಚಾರಣೆಯ ಕಾರ್ಯವನ್ನೂ ಸಹ ಸರ್ಕಾರವೇ ಕಾರ್ಯನಿರ್ವಹಿಸುತ್ತದೆ. ಖಾಸಗೀಕರಣದ ನಂತರ, ಅಲ್ಲಿರುವ ಅಧಿಕಾರಿಗಳು ಅಥವಾ ಸಿಬ್ಬಂದಿ, ಅವರ ಪ್ರತಿಯೊಬ್ಬರ ರಕ್ಷಣೆ ಮಾಡಲಾಗುವುದು ಎಂದಿದ್ದರು.

ಸರ್ಕಾರವು ಈಗಾಗಲೇ ಐಡಿಬಿಐ ಬ್ಯಾಂಕ್ ಅನ್ನು 2019ರಲ್ಲಿ ಎಲ್‌ಐಸಿಗೆ ಮಾರಾಟ ಮಾಡುವ ಮೂಲಕ ಖಾಸಗೀಕರಣಗೊಳಿಸಿದೆ. ಕಳೆದ ನಾಲ್ಕು ವರ್ಷಗಳಲ್ಲಿ 14 ಸಾರ್ವಜನಿಕ ವಲಯದ ಬ್ಯಾಂಕ್​ಗಳನ್ನು ವಿಲೀನಗೊಳಿಸಿದೆ.

ಎರಡು ಸಾರ್ವಜನಿಕ ವಲಯದ ಬ್ಯಾಂಕ್​ಗಳ ಖಾಸಗೀಕರಣವು ಅವುಗಳ ರೇಟಿಂಗ್‌ಗಳ ಮೇಲೆ ಪರಿಣಾಮ ಬೀರಬಹುದು. ಎರಡು ಘಟಕಗಳಿಗೆ ಸರ್ಕಾರದ ಬೆಂಬಲ ಕಣ್ಮರೆಯಾಗುತ್ತದೆ ಎಂದು ಇಂಡಿಯಾ ರೇಟಿಂಗ್ಸ್ ಅಂಡ್​ ರಿಸರ್ಚ್ ಬುಧವಾರ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.