ETV Bharat / city

ಬೆಳಗಾವಿ: ಪೋಷಕರ ಜತೆ ಜಗಳವಾಡುತ್ತಿದ್ದ ತಮ್ಮನನ್ನು ಚಾಕುವಿನಿಂದ ಇರಿದು ಕೊಂದ ಅಣ್ಣ

ತಂದೆ- ತಾಯಿಯ ಜೊತೆ ಜಗಳವಾಡುತ್ತಿದ್ದ ವೇಳೆ ತಡೆಯಲು ಹೋದಾಗ ಅಣ್ತಮ್ಮನ ಮಧ್ಯೆ ಗಲಾಟೆಯಾಗಿ ಅಣ್ಣನೇ ತಮ್ಮನ ಹೊಟ್ಟೆಗೆ ಚಾಕುವಿನಿಂದ ಇರಿದು ಕೊಂದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

author img

By

Published : May 16, 2022, 4:49 PM IST

killed-his-o
ಇರಿದು ಕೊಂದ ಅಣ್ಣಇರಿದು ಕೊಂದ ಅಣ್ಣ

ಬೆಳಗಾವಿ: ಯಾವುದೋ ಕಾರಣಕ್ಕೆ ಸಹೋದರರ ಮಧ್ಯೆ ನಡೆದ ಗಲಾಟೆಯಲ್ಲಿ ಒಡಹುಟ್ಟಿದ ತಮ್ಮನನ್ನೇ ಚಾಕುವಿನಿಂದ ಇರಿದು ಅಣ್ಣ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್​ ನಗರದಲ್ಲಿ ನಡೆದಿದೆ. ಗೋಕಾಕ್​ ನಗರದ ನಿವಾಸಿ ಮುನಾಫ್ ದೇಸಾಯಿ (24) ಕೊಲೆಗೀಡಾದ ಸಹೋದರ. ರಮಜಾನ್ ದೇಸಾಯಿ(26) ಕೊಲೆ ಮಾಡಿದ ಆರೋಪಿ.

ಮುನಾಫ್ ದೇಸಾಯಿ ತನ್ನ ತಂದೆ- ತಾಯಿಯೊಂದಿಗೆ ಯಾವುದೋ ಕಾರಣಕ್ಕೆ ಗಲಾಟೆ ಮಾಡುತ್ತಿದ್ದನಂತೆ. ಈ ವೇಳೆ ಮಧ್ಯಪ್ರವೇಶಿಸಿದ ಆತನ ಸಹೋದರ ರಮಜಾನ್ ತಂದೆ-ತಾಯಿ ಜೊತೆ ಯಾಕೆ ಕಿತ್ತಾಡುತ್ತೀಯಾ ಎಂದು ಪ್ರಶ್ನೆ ಮಾಡಿದ್ದಾನೆ. ಇದರಿಂದ ಸಹೋದರರ ಮಧ್ಯೆ ವಾಗ್ವಾದ ಉಂಟಾಗಿದೆ. ಗಲಾಟೆ ತಾರಕಕ್ಕೇರಿ ಮನೆಯಲ್ಲಿದ್ದ ಚಾಕುವಿನಿಂದ ಅಣ್ಣ ರಮಜಾನ್​ನು ತಮ್ಮ ಮುನಾಫ್ ಹೊಟ್ಟೆಗೆ ಇರಿದಿದ್ದಾನೆ.

ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಮುನಾಫ್​ನನ್ನು ಪೋಷಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮುನಾಫ್ ಸಾವನ್ನಪ್ಪಿದ್ದಾನೆ. ತಮ್ಮನ ಹೊಟ್ಟೆಗೆ ಚಾಕು ಇರಿದ ಆರೋಪಿ ರಮಜಾನ್​ನನ್ನು ಗೋಕಾಕ್​ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗೋಕಾಕ್​ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ: ಮಾನಸಿಕ, ದೈಹಿಕ ಕಿರುಕುಳ ಆರೋಪ.. ಬೆಂಗಳೂರಲ್ಲಿ ಹೆಡ್ ಕಾನ್ಸ್​ಟೇಬಲ್​ ವಿರುದ್ಧ ದೂರು ನೀಡಿದ ಪತ್ನಿ

ಬೆಳಗಾವಿ: ಯಾವುದೋ ಕಾರಣಕ್ಕೆ ಸಹೋದರರ ಮಧ್ಯೆ ನಡೆದ ಗಲಾಟೆಯಲ್ಲಿ ಒಡಹುಟ್ಟಿದ ತಮ್ಮನನ್ನೇ ಚಾಕುವಿನಿಂದ ಇರಿದು ಅಣ್ಣ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್​ ನಗರದಲ್ಲಿ ನಡೆದಿದೆ. ಗೋಕಾಕ್​ ನಗರದ ನಿವಾಸಿ ಮುನಾಫ್ ದೇಸಾಯಿ (24) ಕೊಲೆಗೀಡಾದ ಸಹೋದರ. ರಮಜಾನ್ ದೇಸಾಯಿ(26) ಕೊಲೆ ಮಾಡಿದ ಆರೋಪಿ.

ಮುನಾಫ್ ದೇಸಾಯಿ ತನ್ನ ತಂದೆ- ತಾಯಿಯೊಂದಿಗೆ ಯಾವುದೋ ಕಾರಣಕ್ಕೆ ಗಲಾಟೆ ಮಾಡುತ್ತಿದ್ದನಂತೆ. ಈ ವೇಳೆ ಮಧ್ಯಪ್ರವೇಶಿಸಿದ ಆತನ ಸಹೋದರ ರಮಜಾನ್ ತಂದೆ-ತಾಯಿ ಜೊತೆ ಯಾಕೆ ಕಿತ್ತಾಡುತ್ತೀಯಾ ಎಂದು ಪ್ರಶ್ನೆ ಮಾಡಿದ್ದಾನೆ. ಇದರಿಂದ ಸಹೋದರರ ಮಧ್ಯೆ ವಾಗ್ವಾದ ಉಂಟಾಗಿದೆ. ಗಲಾಟೆ ತಾರಕಕ್ಕೇರಿ ಮನೆಯಲ್ಲಿದ್ದ ಚಾಕುವಿನಿಂದ ಅಣ್ಣ ರಮಜಾನ್​ನು ತಮ್ಮ ಮುನಾಫ್ ಹೊಟ್ಟೆಗೆ ಇರಿದಿದ್ದಾನೆ.

ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಮುನಾಫ್​ನನ್ನು ಪೋಷಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮುನಾಫ್ ಸಾವನ್ನಪ್ಪಿದ್ದಾನೆ. ತಮ್ಮನ ಹೊಟ್ಟೆಗೆ ಚಾಕು ಇರಿದ ಆರೋಪಿ ರಮಜಾನ್​ನನ್ನು ಗೋಕಾಕ್​ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗೋಕಾಕ್​ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ: ಮಾನಸಿಕ, ದೈಹಿಕ ಕಿರುಕುಳ ಆರೋಪ.. ಬೆಂಗಳೂರಲ್ಲಿ ಹೆಡ್ ಕಾನ್ಸ್​ಟೇಬಲ್​ ವಿರುದ್ಧ ದೂರು ನೀಡಿದ ಪತ್ನಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.