ಬೆಳಗಾವಿ : ಗೋಡಂಬಿ ಆರಿಸಲು ಹೋದಾಗ ಯುವಕನ ಮೇಲೆ ಕರಡಿಯೊಂದು ದಾಳಿ ಮಾಡಿರುವ ಘಟನೆ ತಾವರಗಟ್ಟಿ ಗ್ರಾಮದಲ್ಲಿ ಕಂಡು ಬಂದಿದೆ.
ತಾವರಗಟ್ಟಿ ಗ್ರಾಮದ ಗಣೇಶ್ ಪಾಟೀಲ್ ಎಂಬಾತ ಕರಡಿ ದಾಳಿಯಿಂದಾಗಿ ಗಂಭೀರವಾಗಿ ಗಾಯಗೊಂಡ ಯುವಕ. ಗಣೇಶ್ನ ತಲೆಗೆ ಗಂಭೀರ ಗಾಯಗಳಾಗಿದ್ದು, ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಆರ್ಎಫ್ಒ ರತ್ನಾಕರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.