ETV Bharat / city

ಬೆಳಗಾವಿ, ಉತ್ತರಕನ್ನಡ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ - ನೀತಿ ಸಂಹಿತೆ ಜಾರಿ

ಉಪ ಚುನಾವಣೆ ಹಿನ್ನಲೆ ಬೆಳಗಾವಿ ಹಾಗು ಉತ್ತರಕನ್ನಡ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.

ಬೆಳಗಾವಿ, ಉತ್ತರಕನ್ನಡ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ
author img

By

Published : Sep 21, 2019, 10:53 PM IST

ಬೆಳಗಾವಿ/ ಕಾರವಾರ : ರಾಜ್ಯದ 15 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆ ಹಿನ್ನಲೆ ಬೆಳಗಾವಿ ಹಾಗು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.

ಬೆಳಗಾವಿ, ಉತ್ತರಕನ್ನಡ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ- ಜಿಲ್ಲಾದ್ಯಂತ

ಬೆಳಗಾವಿ ಜಿಲ್ಲೆಯ ಮೂರು ಕ್ಷೇತ್ರಗಳಾದ ಅಥಣಿ, ಗೋಕಾಕ್ ಹಾಗೂ ಕಾಗವಾಡ ತೆರವಾದ ವಿಧಾನಸಭೆ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದ್ದು. ಸಂಪೂರ್ಣ ಬೆಳಗಾವಿ ಜಿಲ್ಲೆಗೆ ತಕ್ಷಣವೇ ಜಾರಿಯಾಗುವಂತೆ ನೀತಿ ಸಂಹಿತೆಗೆ ಆದೇಶ ನೀಡಲಾಗಿದೆ. ಜೊತೆಗೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಡೆಯುವ ಪರಿಹಾರ ಕೆಲಸಕ್ಕೆ ಯವುದೇ ರೀತಿಯ ಅಡಚಣೆ ಆಗುವುದಿಲ್ಲ ಎಂದು ಜಿಲ್ಲಾಧಿಕಾರಿ ಎಸ್. ಬಿ ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರಕ್ಕೆ ಸಹ ಉಪ ಚುನಾವಣೆ ಘೋಷಣೆಯಾಗಿದ್ದು, ಸೆ. 23 ರಿಂದ ಚುನಾವಣೆ ಮುಗಿಯುವವರೆಗೆ ಉತ್ತರಕನ್ನಡ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ್​ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಯಲ್ಲಾಪುರ ವಿಧಾನಸಭಾ ವ್ಯಾಪ್ತಿಯಲ್ಲಿ ಒಟ್ಟು 1,72,630 ಮತದಾರರಿದ್ದು, ಅದರಲ್ಲಿ 87,942 ಪುರುಷರು, 84,689 ಮಹಿಳಾ ಮತ್ತು ಒಬ್ಬರು ಇತರೆ ಮತದಾರರು ಇದ್ದಾರೆ. ಉಪಚುನಾವಣೆಯು ಯಲ್ಲಾಪುರ ಹಾಗೂ ಮುಂಡಗೋಡ ಸಂಪೂರ್ಣ ತಾಲ್ಲೂಕು ಮತ್ತು ಶಿರಸಿಯ ಬನವಾಸಿ ಭಾಗದ ಒಟ್ಟು 231 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

ಇನ್ನು ಚುನಾವಣೆಯಲ್ಲಿ ನೆರೆ ಪರಿಹಾರಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ. ನೀತಿ ಸಂಹಿತೆ ಇದ್ದರೂ, ಕೆಲ ಮೂಲಭೂತ ಸೌಕರ್ಯ ಒದಗಿಸುವ ಕಾಮಗಾರಿಗಳಿಗೆ ಚುನಾವಣಾ ಆಯೋಗದಿಂದ ತಕ್ಷಣ ಅನುಮತಿ ಪಡೆದು ಮಾಡಲು ಅವಕಾಶವಿದೆ. ಚುನಾವಣಾ ವ್ಯಾಪ್ತಿಯ ಅಭ್ಯರ್ಥಿಗಳು ಹೊರ ಭಾಗದಲ್ಲಿ ನಡೆಸುವ ಕಾರ್ಯಕ್ರಮಗಳ ಮೇಲೆ ನಿಗಾ ಇಡಲಾಗುತ್ತದೆ. ಚುನಾವಣಾ ನೀತಿ ಸಂಹಿತೆ ವ್ಯಾಪ್ತಿಯಲ್ಲಿ ನಡೆಸುವ ಚಟುವಟಿಕೆಗಳಿಗೆ ಮುಕ್ತವಾಗಿ ಅವಕಾಶವಿದೆ ಎಂದು ತಿಳಿಸಿದರು.

ಬೆಳಗಾವಿ/ ಕಾರವಾರ : ರಾಜ್ಯದ 15 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆ ಹಿನ್ನಲೆ ಬೆಳಗಾವಿ ಹಾಗು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.

ಬೆಳಗಾವಿ, ಉತ್ತರಕನ್ನಡ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ- ಜಿಲ್ಲಾದ್ಯಂತ

ಬೆಳಗಾವಿ ಜಿಲ್ಲೆಯ ಮೂರು ಕ್ಷೇತ್ರಗಳಾದ ಅಥಣಿ, ಗೋಕಾಕ್ ಹಾಗೂ ಕಾಗವಾಡ ತೆರವಾದ ವಿಧಾನಸಭೆ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದ್ದು. ಸಂಪೂರ್ಣ ಬೆಳಗಾವಿ ಜಿಲ್ಲೆಗೆ ತಕ್ಷಣವೇ ಜಾರಿಯಾಗುವಂತೆ ನೀತಿ ಸಂಹಿತೆಗೆ ಆದೇಶ ನೀಡಲಾಗಿದೆ. ಜೊತೆಗೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಡೆಯುವ ಪರಿಹಾರ ಕೆಲಸಕ್ಕೆ ಯವುದೇ ರೀತಿಯ ಅಡಚಣೆ ಆಗುವುದಿಲ್ಲ ಎಂದು ಜಿಲ್ಲಾಧಿಕಾರಿ ಎಸ್. ಬಿ ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರಕ್ಕೆ ಸಹ ಉಪ ಚುನಾವಣೆ ಘೋಷಣೆಯಾಗಿದ್ದು, ಸೆ. 23 ರಿಂದ ಚುನಾವಣೆ ಮುಗಿಯುವವರೆಗೆ ಉತ್ತರಕನ್ನಡ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ್​ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಯಲ್ಲಾಪುರ ವಿಧಾನಸಭಾ ವ್ಯಾಪ್ತಿಯಲ್ಲಿ ಒಟ್ಟು 1,72,630 ಮತದಾರರಿದ್ದು, ಅದರಲ್ಲಿ 87,942 ಪುರುಷರು, 84,689 ಮಹಿಳಾ ಮತ್ತು ಒಬ್ಬರು ಇತರೆ ಮತದಾರರು ಇದ್ದಾರೆ. ಉಪಚುನಾವಣೆಯು ಯಲ್ಲಾಪುರ ಹಾಗೂ ಮುಂಡಗೋಡ ಸಂಪೂರ್ಣ ತಾಲ್ಲೂಕು ಮತ್ತು ಶಿರಸಿಯ ಬನವಾಸಿ ಭಾಗದ ಒಟ್ಟು 231 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

ಇನ್ನು ಚುನಾವಣೆಯಲ್ಲಿ ನೆರೆ ಪರಿಹಾರಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ. ನೀತಿ ಸಂಹಿತೆ ಇದ್ದರೂ, ಕೆಲ ಮೂಲಭೂತ ಸೌಕರ್ಯ ಒದಗಿಸುವ ಕಾಮಗಾರಿಗಳಿಗೆ ಚುನಾವಣಾ ಆಯೋಗದಿಂದ ತಕ್ಷಣ ಅನುಮತಿ ಪಡೆದು ಮಾಡಲು ಅವಕಾಶವಿದೆ. ಚುನಾವಣಾ ವ್ಯಾಪ್ತಿಯ ಅಭ್ಯರ್ಥಿಗಳು ಹೊರ ಭಾಗದಲ್ಲಿ ನಡೆಸುವ ಕಾರ್ಯಕ್ರಮಗಳ ಮೇಲೆ ನಿಗಾ ಇಡಲಾಗುತ್ತದೆ. ಚುನಾವಣಾ ನೀತಿ ಸಂಹಿತೆ ವ್ಯಾಪ್ತಿಯಲ್ಲಿ ನಡೆಸುವ ಚಟುವಟಿಕೆಗಳಿಗೆ ಮುಕ್ತವಾಗಿ ಅವಕಾಶವಿದೆ ಎಂದು ತಿಳಿಸಿದರು.

Intro:ಉಪ ಚುನಾವಣೆ ಹಿನ್ನಲೆ : ಬೆಳಗಾವಿ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಎಸ್. ಬಿ ಬೊಮ್ಮನಹಳ್ಳಿ

ಬೆಳಗಾವಿ : ರಾಜ್ಯದ 15 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆ ಹಿನ್ನಲೆ. ಬೆಳಗಾವಿ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲ್ಲಿದ್ದು, ಸಂಪೂರ್ಣ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಬಿ ಬೊಮ್ಮನಹಳ್ಳಿ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಘೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ. ಜಿಲ್ಲೆಯ ಮೂರು ಕ್ಷೇತ್ರಗಳಾದ ಅಥಣಿ, ಗೋಕಾಕ್ ಹಾಗೂ ಕಾಗವಾಡ ತೆರವಾದ ವಿಧಾನಸಭೆ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದ್ದು. ಸಂಪೂರ್ಣ ಬೆಳಗಾವಿ ಜಿಲ್ಲೆಗೆ ತಕ್ಷಣವೇ ಜಾರಿಯಾಗುವಂತೆ ನೀತಿ ಸಂಹಿತೆಗೆ ಆದೇಶ ನೀಡಲಾಗಿದೆ. ಜೊತೆಗೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಡೆಯುವ ಪರಿಹಾರ ಕೆಲಸಕ್ಕೆ ಯವುದೇ ರೀತಿಯ ಅಡಚಣೆ ಆಗುವುದಿಲ್ಲ ಎಂದು ತಿಳಿಸಿದ್ದಾರೆ.

Body:ನಾಮಪತ್ರ ಸ್ವೀಕಾರ ಸೆ.23 ರಿಂದ ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಸಲು ಸೆ.30 ಕಡೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ ಕಾರ್ಯ ಅ.1 ರಂದು ನಡೆಯಲಿದ್ದು, ನಾಮಪತ್ರಗಳನ್ನು ವಾಪಸ್ ಪಡೆಯಲು ಅ.3 ಕಡೆಯ ದಿನವಾಗಿರುತ್ತದೆ. ಅಕ್ಟೋಬರ್ 21 ರಂದು ಮತದಾನ ನಡೆಯಲಿದ್ದು, ಅ.24 ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Conclusion:ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಕ್ರಮ : ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಯಾವುದೇ ರೀತಿಯ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಚುನಾವಣಾ ಆಯೋಗ ನೀಡಿರುವ ಸುತ್ತೋಲೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.