ETV Bharat / city

ಚೀನಾದವರು ದೇಶದೊಳಗೆ ಕೊರೊನಾ ಬಿಟ್ಟು, ಗಡಿಯಲ್ಲಿ ತಂಟೆ ಮಾಡುತ್ತಿದ್ದಾರೆ: ಸುರೇಶ್​ ಅಂಗಡಿ

author img

By

Published : Jun 24, 2020, 8:43 PM IST

ಚೀನಾ ಸರ್ಕಾರ ಕೊರೊನಾ ವೈರಸ್ ಬಿಟ್ಟು, ಗಡಿಯಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡುತ್ತಿದೆ. ಕೊರೊನಾದಂತಹ ಹಲವು ವೈರಸ್​ಗಳನ್ನ ಭಾರತ ಈಗಾಗಲೇ ಮೆಟ್ಟಿ ನಿಂತಿದೆ‌. ಈ ವೈರಸ್​ಗೆ ಯಾರೂ ಭಯ ಪಡುವ ಅವಶ್ಯಕತೆಯಿಲ್ಲ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಹೇಳಿದ್ದಾರೆ.

centeral minister suresh angadi statement
ಚೀನಾದವರು ಕೊರೊನಾ ದೇಶದೊಳಗೆ ಬಿಟ್ಟು, ಗಡಿಯಲ್ಲಿ ತಂಟೆ ಮಾಡುತ್ತಿದ್ದಾರೆ..ಕೇಂದ್ರ ಸಚಿವ ಸುರೇಶ ಅಂಗಡಿ

ಬೆಳಗಾವಿ: ಕೊರೊನಾ ವೈರಸ್ ಜೊತೆಗೆ ನಾವು ಬದುಕಬೇಕಿದೆ. ಚೀನಾದವರು ಕೊರೊನಾವನ್ನ ದೇಶದೊಳಗೆ ಬಿಟ್ಟು, ಗಡಿಯಲ್ಲಿ ತಂಟೆ ಮಾಡುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಹೇಳಿದರು.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚೀನಾ ಸರ್ಕಾರ ಕೊರೊನಾ ವೈರಸ್ ಬಿಟ್ಟು, ಗಡಿಯಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡುತ್ತಿದೆ. ಕೊರೊನಾದಂತಹ ಹಲವು ವೈರಸ್​ಗಳನ್ನ ಭಾರತ ಈಗಾಗಲೇ ಮೆಟ್ಟಿ ನಿಂತಿದೆ‌. ಈ ವೈರಸ್​ಗೆ ಯಾರೂ ಭಯ ಪಡುವ ಅವಶ್ಯಕತೆಯಿಲ್ಲ.‌ ಇದರೊಂದಿಗೆ ಜೀವನ ನಡೆಸುವುದು ಅನಿವಾರ್ಯವಾಗಿದ್ದು, ಇದೇನು ಮಾರಣಾಂತಿಕ ರೋಗವಲ್ಲ. ಸರಿಯಾದ ಕಾಳಜಿ ವಹಿಸಿದ್ರೆ ಗುಣಮುಖರಾಗಬಹುದು ಎಂದರು.

ನಾಳೆ ನಡೆಯುವ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಆಗಮಿಸುವ ಮಕ್ಕಳು ಯಾವುದೇ ಕಾರಣಕ್ಕೂ ಭಯ ಪಡುವ ಅವಶ್ಯಕತೆ ಇಲ್ಲ. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್​ ಧರಿಸಿಕೊಂಡು ಬರಬೇಕು. ಶಿಕ್ಷಣ ಇಲಾಖೆ ಅಧಿಕಾರಿಗಳ ಸೂಚನೆ ಮೇರೆಗೆ ಎಲ್ಲಾ ವಿದ್ಯಾರ್ಥಿಗಳು ಒಂದೂವರೆ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಬೇಕು. ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳನ್ನ ಪಾಲಕರು ಪಾಲಿಸಬೇಕು ಎಂದರು.

ಜಿಲ್ಲೆಯಲ್ಲಿ 33,000ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲ್ಲಿದ್ದಾರೆ. ಪ್ರತಿ ತಾಲೂಕಿನಲ್ಲಿ ಪತ್ಯೇಕವಾಗಿ ಎರಡು ಸೆಂಟರ್​ಗಳನ್ನ ತೆರೆಯಲಾಗಿದ್ದು, ಮಕ್ಕಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ‌. ವಿದ್ಯಾರ್ಥಿಗಳನ್ನ ಕರೆ ತರಲು ಸರ್ಕಾರಿ ಬಸ್​ಗಳನ್ನ ಬಳಸಿಕೊಳ್ಳಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಎದುರಿಸುವ ಮೂಲಕ‌ ತಮ್ಮ ಮುಂದಿನ ಜೀವನ‌ ರೂಪಿಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.

ಬೆಳಗಾವಿ: ಕೊರೊನಾ ವೈರಸ್ ಜೊತೆಗೆ ನಾವು ಬದುಕಬೇಕಿದೆ. ಚೀನಾದವರು ಕೊರೊನಾವನ್ನ ದೇಶದೊಳಗೆ ಬಿಟ್ಟು, ಗಡಿಯಲ್ಲಿ ತಂಟೆ ಮಾಡುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಹೇಳಿದರು.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚೀನಾ ಸರ್ಕಾರ ಕೊರೊನಾ ವೈರಸ್ ಬಿಟ್ಟು, ಗಡಿಯಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡುತ್ತಿದೆ. ಕೊರೊನಾದಂತಹ ಹಲವು ವೈರಸ್​ಗಳನ್ನ ಭಾರತ ಈಗಾಗಲೇ ಮೆಟ್ಟಿ ನಿಂತಿದೆ‌. ಈ ವೈರಸ್​ಗೆ ಯಾರೂ ಭಯ ಪಡುವ ಅವಶ್ಯಕತೆಯಿಲ್ಲ.‌ ಇದರೊಂದಿಗೆ ಜೀವನ ನಡೆಸುವುದು ಅನಿವಾರ್ಯವಾಗಿದ್ದು, ಇದೇನು ಮಾರಣಾಂತಿಕ ರೋಗವಲ್ಲ. ಸರಿಯಾದ ಕಾಳಜಿ ವಹಿಸಿದ್ರೆ ಗುಣಮುಖರಾಗಬಹುದು ಎಂದರು.

ನಾಳೆ ನಡೆಯುವ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಆಗಮಿಸುವ ಮಕ್ಕಳು ಯಾವುದೇ ಕಾರಣಕ್ಕೂ ಭಯ ಪಡುವ ಅವಶ್ಯಕತೆ ಇಲ್ಲ. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್​ ಧರಿಸಿಕೊಂಡು ಬರಬೇಕು. ಶಿಕ್ಷಣ ಇಲಾಖೆ ಅಧಿಕಾರಿಗಳ ಸೂಚನೆ ಮೇರೆಗೆ ಎಲ್ಲಾ ವಿದ್ಯಾರ್ಥಿಗಳು ಒಂದೂವರೆ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಬೇಕು. ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳನ್ನ ಪಾಲಕರು ಪಾಲಿಸಬೇಕು ಎಂದರು.

ಜಿಲ್ಲೆಯಲ್ಲಿ 33,000ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲ್ಲಿದ್ದಾರೆ. ಪ್ರತಿ ತಾಲೂಕಿನಲ್ಲಿ ಪತ್ಯೇಕವಾಗಿ ಎರಡು ಸೆಂಟರ್​ಗಳನ್ನ ತೆರೆಯಲಾಗಿದ್ದು, ಮಕ್ಕಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ‌. ವಿದ್ಯಾರ್ಥಿಗಳನ್ನ ಕರೆ ತರಲು ಸರ್ಕಾರಿ ಬಸ್​ಗಳನ್ನ ಬಳಸಿಕೊಳ್ಳಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಎದುರಿಸುವ ಮೂಲಕ‌ ತಮ್ಮ ಮುಂದಿನ ಜೀವನ‌ ರೂಪಿಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.