ಬೆಳಗಾವಿ: ಕಾಲೇಜ್ ಬಸ್ಸಿನ ಹಿಂಬದಿಗೆ ಕೆಎಸ್ಆರ್ಟಿಸಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಜತ್ತ-ಜಾಂಬೋಟಿ ಹೆದ್ದಾರಿ ಸಮೀಪದ ಗುರ್ಲಾಪುರ ಗ್ರಾಮದ ಬಳಿ ಅಪಘಾತ ಸಂಬಭವಿಸಿದ್ದು, ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಕೆಎಸ್ಆರ್ಟಿಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮೂಡಲಗಿ ಪಟ್ಟಣದ ಖಾಸಗಿ ಕಾಲೇಜಿಗೆ ತೆರಳುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಕಾಲೇಜು ಬಸ್ಸನ್ನು ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ನಿಲ್ಲಿಸಿದಾಗ ಈ ಅವಘಡ ಸಂಭವಿಸಿದೆ.
ಈ ವೇಳೆ ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆ ಬಸ್ಸು ಹಿಂಬದಿಗೆ ಗುದ್ದಿದ ಪರಿಣಾಮ ಕಾಲೇಜ್ ಬಸ್ಸಿನಲ್ಲಿದ್ದ 10 ಹಾಗೂ ಸರ್ಕಾರಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ . ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಬೈಕ್-ಲಾರಿ ಮುಖಾಮುಖಿ ಡಿಕ್ಕಿ: ಕಿಚ್ಚನ ಹಳ್ಳಿಮನೆ ಹೋಟೆಲ್ ಮ್ಯಾನೇಜರ್ ಸಾವು