ETV Bharat / city

ಮಹಾರಾಷ್ಟ್ರದ ಸತಾರಾ ಬಳಿ ಭೀಕರ ರಸ್ತೆ ಅಪಘಾತ.. ಧಾರವಾಡದ ಒಂದೇ ಕುಟುಂಬದ 6 ಮಂದಿ ಸಾವು

ಚಾಲಕನ‌ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕಾಶೀಳ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ರಸ್ತೆ ಅಪಘಾತ ನಡೆದಿದ್ದು, ಧಾರವಾಡದ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

author img

By

Published : Jul 31, 2019, 9:13 AM IST

Updated : Jul 31, 2019, 9:20 AM IST

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ

ಚಿಕ್ಕೋಡಿ: ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕಾಶೀಳ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಧಾರವಾಡದ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಾಲಕನ‌ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಎರಡೂವರೆ ವರ್ಷದ ಒಬ್ಬ ಬಾಲಕ ಮತ್ತು 5 ವರ್ಷದ ಬಾಲಕಿ ಮೃತಪಟ್ಟಿದ್ದು, ಇವರು ಕರ್ನಾಟಕದ ಧಾರವಾಡದ ನಿಜಾಮೋದಿನ ಸೌದಾಗರ ಎಂಬ ಕುಟುಂಬದವರು ಎಂದು ಮಾಹಿತಿ ಲಭ್ಯವಾಗಿದೆ. ಇನ್ನು, ಘಟನೆಯಲ್ಲಿ ಕಾರು ಚಾಲಕ ಮತ್ತು ಒಂದು ಹೆಣ್ಣ ಮಗುವಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ನೀಡಲಾಗುತ್ತಿದೆ.

ಮಹಾರಾಷ್ಟ್ರದ ಸತಾರಾದಲ್ಲಿ ಭೀಕರ ರಸ್ತೆ ಅಪಘಾತ..

ಸ್ಥಳಕ್ಕೆ ಬೋರೆಗಾಂವ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಈ ಕುರಿತು ಕಾಶೀಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕೋಡಿ: ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕಾಶೀಳ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಧಾರವಾಡದ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಾಲಕನ‌ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಎರಡೂವರೆ ವರ್ಷದ ಒಬ್ಬ ಬಾಲಕ ಮತ್ತು 5 ವರ್ಷದ ಬಾಲಕಿ ಮೃತಪಟ್ಟಿದ್ದು, ಇವರು ಕರ್ನಾಟಕದ ಧಾರವಾಡದ ನಿಜಾಮೋದಿನ ಸೌದಾಗರ ಎಂಬ ಕುಟುಂಬದವರು ಎಂದು ಮಾಹಿತಿ ಲಭ್ಯವಾಗಿದೆ. ಇನ್ನು, ಘಟನೆಯಲ್ಲಿ ಕಾರು ಚಾಲಕ ಮತ್ತು ಒಂದು ಹೆಣ್ಣ ಮಗುವಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ನೀಡಲಾಗುತ್ತಿದೆ.

ಮಹಾರಾಷ್ಟ್ರದ ಸತಾರಾದಲ್ಲಿ ಭೀಕರ ರಸ್ತೆ ಅಪಘಾತ..

ಸ್ಥಳಕ್ಕೆ ಬೋರೆಗಾಂವ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಈ ಕುರಿತು ಕಾಶೀಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಭೀಕರ ರಸ್ತೆ ಅಪಘಾತ ಒಂದೇ ಕುಟುಂಬದ 6 ಜನರು ಸಾವು 2 ಗಂಭೀರ ಗಾಯBody:

ಚಿಕ್ಕೋಡಿ :

ಚಾಲಕನ‌ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ 6 ಜನರು ಸಾವನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕಾಶೀಳ ಬಳಿ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರ ಮೇಲೆ ಸಂಭವಿಸಿದೆ.

ಮೃತರಲ್ಲಿ ಇಬ್ಬರು ಪುರುಷರು ಇಬ್ಬರು ಮಹಿಳೆಯರು ಹಾಗೂ 2.5 ವರ್ಷದ ಒಂದು ಬಾಲಕ ಮತ್ತು 5 ವರ್ಷದ ಬಾಲಕಿ ವೃತಪಟ್ಟಿದ್ದು, ಇವರು ಕರ್ನಾಟಕದ ಧಾರವಾಡದ ನೀಜಾಮೋದಿನ ಸೌದಾಗರ ಎಂಬ ಕುಟುಂಬದವರು ಎಂದು ಮಾಹಿತಿ ಲಭ್ಯವಾಗಿದೆ. ಕಾರ ಚಾಲಕ ಮತ್ತು ಒಂದು ಹೆಣ್ಣ ಮಗುವಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ನೀಡಲಾಗುತ್ತಿದೆ. ಸ್ಥಳಕ್ಕೆ ಬೋರೆಗಾಂವ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಕಾಶೀಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಈ ಅಪಘಾತ ಮಹಾರಾಷ್ಟ್ರದ ಸಾತಾರ ಜಿಲ್ಲೆಯಲ್ಲಿ ನಡೆದಿದೆ. ಆದರೆ, ಮೃತರು ಧಾರವಾಡದ ನಿವಾಸಿಗಳು)

Conclusion:ಸಂಜಯ ಕೌಲಗಿ
ಚಿಕ್ಕೋಡಿ
Last Updated : Jul 31, 2019, 9:20 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.