ETV Bharat / city

ಉಪ ಚುನಾವಣೆ ಏಕೆ ಬಂತು ಎಂದು ಮತದಾರರು ಯೋಚಿಸಬೇಕಿದೆ: ಗೋವಿಂದ ಕಾರಜೋಳ - Election campaign BJP Candidate Shreemanth patil

ಕಾಗವಾಡ ವಿಧಾನಸಭಾ ಕ್ಷೇತ್ರದ ಮದಭಾವಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಪರವಾಗಿ ಡಿಸಿಎಂ ಗೋವಿಂದ ಕಾರಜೋಳ ಮತಯಾಚಿಸಿದರು.

deputy chief minister Govinda Karajola
ಡಿಸಿಎಂ ಗೋವಿಂದ ಕಾರಜೋಳ
author img

By

Published : Nov 26, 2019, 8:01 PM IST

ಚಿಕ್ಕೋಡಿ: ಉಪ ಚುನಾವಣೆ ಏಕೆ ಬಂತು ಎಂದು ಮತದಾರರು ಆಲೋಚಿಸಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ (2018) ಯಡಿಯೂರಪ್ಪ ಮುಖ್ಯಮಂತ್ರಿಯಾಗ್ತಾರೆ. ರಾಜ್ಯ ಅಭಿವೃದ್ಧಿ ಆಗುತ್ತದೆ ಎಂದು ಜನ ಅಪೇಕ್ಷೆಪಟ್ಟಿದ್ದರು. ಆದರೆ, ಕೊಂಚ ಅಂತರದಲ್ಲಿ ಅದು ಸಾಧ್ಯವಾಗಲಿಲ್ಲ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಕಾಗವಾಡ ವಿಧಾನಸಭಾ ಕ್ಷೇತ್ರದ ಮದಭಾವಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರದಲ್ಲಿದ್ದ ಅಪವಿತ್ರ ಮೈತ್ರಿ ಸರ್ಕಾರ ಪತನ ಕಂಡಿದೆ. ಇದರ ಪ್ರತಿಫಲವಾಗಿ ಬಿಎಸ್​ವೈ ಮತ್ತೆ ಸಿಎಂ ಆಗಿದ್ದಾರೆ. ಅಂದು ರಾಜಕೀಯ ಲೆಕ್ಕಾಚಾರ ತಪ್ಪಿದ್ದರಿಂದ 8 ಸೀಟು ಕಡಿಮೆಯಾದವು. ಇದನ್ನೇ ಅಸ್ತ್ರ ಮಾಡಿಕೊಂಡು ಕಾಂಗ್ರೆಸ್‌, ಜೆಡಿಎಸ್​ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದವು ಎಂದರು.

ಮತಯಾಚಿಸಿದ ಡಿಸಿಎಂ ಗೋವಿಂದ ಕಾರಜೋಳ

ರಾಜ್ಯದಲ್ಲಿ ದುರಾಡಳಿತ ನೀಡಿದ ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸದ ಕಾರಣ ಬೇಸತ್ತು ಕಾಂಗ್ರೆಸ್​ ಹಾಗೂ ಜೆಡಿಎಸ್​ನ​​ 17 ಶಾಸಕರು ರಾಜೀನಾಮೆ ಕೊಟ್ಟರು. ಇದರ ಪ್ರತಿಫಲವಾಗಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ನಾಡಿನ ಒಳತಿಗಾಗಿ ಈ ಎಲ್ಲಾ ಅನರ್ಹ ಶಾಸಕರನ್ನು ಗೆಲ್ಲಿಸಬೇಕಾದದ್ದು ನಮ್ಮ ಕರ್ತವ್ಯ ಎಂದು ಹೇಳಿದರು.

ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಶ್ರೀಮಂತ ಪಾಟೀಲ‌ ಹಣಕ್ಕಾಗಿ ಪಕ್ಷ ಬಿಡಲಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಹಾಸನ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಮಾತ್ರ ಹೆಚ್ಚಿನ ಅನುದಾನ ಬಿಡುಗಡೆ ಮಾಡುತ್ತಿದ್ದರು. ಅವುಗಳಿಗೆ ಮಾತ್ರ ಸರ್ಕಾರ ಸೀಮಿತವಾಗಿತ್ತು. ಉತ್ತರ ಕರ್ನಾಟಕ ಭಾಗಕ್ಕೆ ಮಲತಾಯಿ ಧೋರಣೆ ತೋರಿದರು. ಆದ್ದರಿಂದ 17 ಶಾಸಕರು ರಾಜೀನಾಮೆ ಕೊಟ್ಟರು. ಈಗ ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತೊಮ್ಮೆ ಅವಕಾಶ ಕಲ್ಪಿಸಿಕೊಡಿ. ಶ್ರೀಮಂತ ಪಾಟೀಲಗೆ ಮತ ನೀಡಿ ಎಂದು ಎಂದು ಮನವಿ ಮಾಡಿದರು.

ಚಿಕ್ಕೋಡಿ: ಉಪ ಚುನಾವಣೆ ಏಕೆ ಬಂತು ಎಂದು ಮತದಾರರು ಆಲೋಚಿಸಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ (2018) ಯಡಿಯೂರಪ್ಪ ಮುಖ್ಯಮಂತ್ರಿಯಾಗ್ತಾರೆ. ರಾಜ್ಯ ಅಭಿವೃದ್ಧಿ ಆಗುತ್ತದೆ ಎಂದು ಜನ ಅಪೇಕ್ಷೆಪಟ್ಟಿದ್ದರು. ಆದರೆ, ಕೊಂಚ ಅಂತರದಲ್ಲಿ ಅದು ಸಾಧ್ಯವಾಗಲಿಲ್ಲ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಕಾಗವಾಡ ವಿಧಾನಸಭಾ ಕ್ಷೇತ್ರದ ಮದಭಾವಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರದಲ್ಲಿದ್ದ ಅಪವಿತ್ರ ಮೈತ್ರಿ ಸರ್ಕಾರ ಪತನ ಕಂಡಿದೆ. ಇದರ ಪ್ರತಿಫಲವಾಗಿ ಬಿಎಸ್​ವೈ ಮತ್ತೆ ಸಿಎಂ ಆಗಿದ್ದಾರೆ. ಅಂದು ರಾಜಕೀಯ ಲೆಕ್ಕಾಚಾರ ತಪ್ಪಿದ್ದರಿಂದ 8 ಸೀಟು ಕಡಿಮೆಯಾದವು. ಇದನ್ನೇ ಅಸ್ತ್ರ ಮಾಡಿಕೊಂಡು ಕಾಂಗ್ರೆಸ್‌, ಜೆಡಿಎಸ್​ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದವು ಎಂದರು.

ಮತಯಾಚಿಸಿದ ಡಿಸಿಎಂ ಗೋವಿಂದ ಕಾರಜೋಳ

ರಾಜ್ಯದಲ್ಲಿ ದುರಾಡಳಿತ ನೀಡಿದ ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸದ ಕಾರಣ ಬೇಸತ್ತು ಕಾಂಗ್ರೆಸ್​ ಹಾಗೂ ಜೆಡಿಎಸ್​ನ​​ 17 ಶಾಸಕರು ರಾಜೀನಾಮೆ ಕೊಟ್ಟರು. ಇದರ ಪ್ರತಿಫಲವಾಗಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ನಾಡಿನ ಒಳತಿಗಾಗಿ ಈ ಎಲ್ಲಾ ಅನರ್ಹ ಶಾಸಕರನ್ನು ಗೆಲ್ಲಿಸಬೇಕಾದದ್ದು ನಮ್ಮ ಕರ್ತವ್ಯ ಎಂದು ಹೇಳಿದರು.

ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಶ್ರೀಮಂತ ಪಾಟೀಲ‌ ಹಣಕ್ಕಾಗಿ ಪಕ್ಷ ಬಿಡಲಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಹಾಸನ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಮಾತ್ರ ಹೆಚ್ಚಿನ ಅನುದಾನ ಬಿಡುಗಡೆ ಮಾಡುತ್ತಿದ್ದರು. ಅವುಗಳಿಗೆ ಮಾತ್ರ ಸರ್ಕಾರ ಸೀಮಿತವಾಗಿತ್ತು. ಉತ್ತರ ಕರ್ನಾಟಕ ಭಾಗಕ್ಕೆ ಮಲತಾಯಿ ಧೋರಣೆ ತೋರಿದರು. ಆದ್ದರಿಂದ 17 ಶಾಸಕರು ರಾಜೀನಾಮೆ ಕೊಟ್ಟರು. ಈಗ ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತೊಮ್ಮೆ ಅವಕಾಶ ಕಲ್ಪಿಸಿಕೊಡಿ. ಶ್ರೀಮಂತ ಪಾಟೀಲಗೆ ಮತ ನೀಡಿ ಎಂದು ಎಂದು ಮನವಿ ಮಾಡಿದರು.

Intro:ಕಾಗವಾಡ ಉಪಚುನಾವಣೆ ಹಿನ್ನಲೆಯಲ್ಲಿ ಡಿಸಿಎಂ ಕಾರಜೋಳ ಭರ್ಜರಿ ಪ್ರಚಾರBody:

ಚಿಕ್ಕೋಡಿ :

ಮತದಾರರೂ ಆಲೋಚನೆ ಮಾಡಬೇಕು ಯಾಕೆ ಈ ಉಪಚುನಾವಣೆ ಬಂತು. 2018 ರಲ್ಲಿ ನಡೆದ ಚುನಾವಣೆಯಲ್ಲಿ ಜನರು ಅಪೇಕ್ಷ ಪಟ್ಟಿದ್ದರು, ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ರಾಜ್ಯದ ಅಭಿವೃದ್ಧಿ ಆಗತ್ತದೆ. ಆದರೆ, ಈಗ ಮತ್ತೆ ಯಡಿಯೂರಪ್ಪ ಸಿಎಂ ಆಗಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಕಾಗವಾಡ ವಿಧಾನಸಭಾ ಮತಕ್ಷೇತ್ರದ ಮದಭಾವಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ರಾಜಕೀಯ ಲೆಕ್ಕಾಚಾರ ತಪ್ಪಿದ್ದರಿಂದ 9 ಸೀಟು ಕಡಿಮೆ ಬಿದ್ದವು. ಇದನ್ನೆ ಅಸ್ತ್ರ ಮಾಡಿಕೊಂಡು ಕಾಂಗ್ರೆಸ್‌, ಬಿಜೆಪಿ ಅಪವಿತ್ರ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿದರು.

ರಾಜ್ಯದಲ್ಲಿ ದುರಾಡಳಿತ ಮಾಡಿದ್ದು, ಅಭಿವೃದ್ಧಿ ಮಾಡದೇ ಇರುವುದರಿಂದ ಕಾಂಗ್ರೆಸ್‌ ಪಕ್ಷದಿಂದ ಬೇಸತ್ತು 17 ಶಾಸಕರು ರಾಜೀನಾಮೆ ಕೊಟ್ಟರು. ಇದರ ಪ್ರತಿಫಲವಾಗಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ನಮ್ಮ ಪಕ್ಷಕ್ಕಾಗಿ ನಾಡಿನ ಒಳತಿಗಾಗಿ ಈ 17 ಶಾಸಕರನ್ನು ಗೆಲ್ಲಿಸಬೇಕಾದದ್ದು ನಮ್ಮ ಕರ್ತವ್ಯ. ಶ್ರೀಮಂತ ಪಾಟೀಲ‌ ಹಣಕ್ಕಾಗಿ ಪಕ್ಷ ಬಿಡಲಿಲ್ಲ. ಕಾಂಗ್ರೆಸ್‌-ಜೆಡಿಎಸ್ ದುರಾಡಳಿತ ಅವರ ಭ್ರಷ್ಟಾಚಾರ, ಕುಮಾರಸ್ವಾಮಿ ಸರ್ಕಾರ ಹಾಸನ, ಮಂಡ್ಯ, ರಾಮನಗರ ಮೂರು ಜಿಲ್ಲೆಗೆ ಸೀಮಿತವಾಗಿರೊದರಿಂದ ಇವರು ರಾಜೀನಾಮೆ ನೀಡಿ ಬಂದಿದ್ದಾರೆ.

ಉ.ಕ ಮಲತಾಯಿ ದೊರಣೆ ಮಾಡಿದಕ್ಕೆ ಅವರು ರಾಜೀನಾಮೆ ನೀಡಿ ಬಂದಿದ್ದಾರೆ. ಈಗ ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತೊಮ್ಮೆ ಅವಕಾಶ ಕಲ್ಪಿಸಿ ಕೊಡಿ ಶ್ರೀಮಂತ ಪಾಟೀಲ ಅವರಿಗೆ ಮತ ನೀಡಿ ಎಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.