ಬೆಳಗಾವಿ: ತಾಲೂಕಿನ ರಾಕಸಕೊಪ್ಪ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ ಪರಿಣಾಮ ಮಾರ್ಕಂಡೇಯ ನದಿ ಪ್ರವಾಹಕ್ಕೆ ಮತ್ತೆ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ.
ಕಳೆದ ಎರಡು ದಿನಗಳಿಂದ ಮತ್ತೆ ಜಿಲ್ಲೆಯಲ್ಲಿ ಸುರಿಯುತ್ತಿರೋ ಮಳೆಗೆ ತಾಲೂಕಿನ ಅಂಬೇವಾಡಿ, ಕಡೋಲಿ, ಯಳ್ಳೂರ, ಹಲಗಾ ಗ್ರಾಮದ ನದಿ ಪಾತ್ರದ ಐದು ಸಾವಿರ ಹೆಕ್ಟೇರ್ಗೂ ಅಧಿಕ ಬೆಳೆ ಜಲಾವೃತವಾಗಿದೆ. ಈ ಪೈಕಿ ಅತೀ ಹೆಚ್ಚು ಕಬ್ಬು ಮತ್ತು ಭತ್ತದ ಬೆಳೆಗಳಿಗೆ ಹಾನಿ ಆಗಿದ್ದು, ಗೋವಿನಜೋಳ ಕೂಡ ಸೇರಿದೆ.
ಕಳೆದ ವರ್ಷವೂ ಇದೇ ಭಾಗದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಈ ವರ್ಷ ಕೂಡ ಬೆಳೆ ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ. ಈದೀಗ ಬೆಳೆ ಸರ್ವೆ ಮಾಡಿಸಿ ಸೂಕ್ತ ಪರಿಹಾರ ನೀಡಲು ಸರ್ಕಾರಕ್ಕೆ ರೈತರು ಒತ್ತಾಯಿಸಿದ್ದಾರೆ.