ETV Bharat / city

ಮೈಸೂರು, ಬೆಳಗಾವಿಯಲ್ಲಿನ ಸೋಲಿನ ಬಗ್ಗೆ ಸಮಗ್ರ ತನಿಖೆ ಮಾಡಿ ಸಿಎಂ ಸೂಕ್ತ ಕ್ರಮಕೈಗೊಳ್ತಾರೆ : ಬಿಎಸ್​​ವೈ

author img

By

Published : Dec 15, 2021, 12:50 PM IST

ಬೆಳಗಾವಿ ಮತ್ತು ಮೈಸೂರಿನಲ್ಲಿ ಅಷ್ಟು ಜನ ಶಾಸಕರು, ಸಂಸದರಿದ್ದರೂ ಸೋತಿದ್ದೇವೆ. ಆ ಸೋಲಿನ ಬಗ್ಗೆ ಚಿಂತನೆ ಮಾಡಬೇಕಿದೆ. ಸಮಗ್ರ ತನಿಖೆ ಮಾಡಿ ಯಾರು ನಮಗೆ ಸಹಕಾರ ನೀಡಿಲ್ಲ ಎಂಬ ತನಿಖೆ ಆಗಬೇಕಿದೆ..

B. S. Yediyurappa
ಬಿ.ಎಸ್.ಯಡಿಯೂರಪ್ಪ

ಬೆಳಗಾವಿ : ಮೈಸೂರು ಮತ್ತು ಬೆಳಗಾವಿಯಲ್ಲಿನ ಸೋಲಿನ ಬಗ್ಗೆ ಸಮಗ್ರ ತನಿಖೆ ಮಾಡಿ ವಾಸ್ತವಿಕ ಸ್ಥಿತಿಗತಿಗಳನ್ನ ತಿಳಿದುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಕ್ತ ಕ್ರಮಕೈಗೊಳ್ಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಿಧಾನ ಪರಿಷತ್​​ ಚುನಾವಣೆ ಫಲಿತಾಂಶದ ಬಗ್ಗೆ ಬಿಎಸ್​​ವೈ ಪ್ರತಿಕ್ರಿಯೆ ನೀಡಿರುವುದು..

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ಮತ್ತು ಬೆಳಗಾವಿಯಲ್ಲಿ ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ತೀವಿ ಎಂಬ ವಿಶ್ವಾಸವಿತ್ತು. ಆದರೆ, ನಮಗೆ ಹಿನ್ನೆಡೆಯಾಗಿದೆ.

ಬೆಳಗಾವಿ ಮತ್ತು ಮೈಸೂರಿನಲ್ಲಿ ಅಷ್ಟು ಜನ ಶಾಸಕರು, ಸಂಸದರಿದ್ದರೂ ಸೋತಿದ್ದೇವೆ. ಆ ಸೋಲಿನ ಬಗ್ಗೆ ಚಿಂತನೆ ಮಾಡಬೇಕಿದೆ. ಸಮಗ್ರ ತನಿಖೆ ಮಾಡಿ ಯಾರು ನಮಗೆ ಸಹಕಾರ ನೀಡಿಲ್ಲ ಎಂಬ ತನಿಖೆ ಆಗಬೇಕಿದೆ ಎಂದರು.

ನಿನ್ನೆ (ಮಂಗಳವಾರ) ಸಿಎಂ ಬೊಮ್ಮಾಯಿ ನನ್ನ ಜತೆಗೆ ಚರ್ಚೆ ಮಾಡಿದ್ದಾರೆ. ಸಮಗ್ರ ತನಿಖೆ ಮಾಡಿ ವಾಸ್ತವಿಕ ಸ್ಥಿತಿಗತಿ ತಿಳಿದುಕೊಂಡು ಆ ಬಗ್ಗೆ ಸಿಎಂ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಇದಲ್ಲದೇ ಉತ್ತರಕರ್ನಾಟಕ ಅಭಿವೃದ್ಧಿಗೆ ಎರಡು ದಿನ ಚರ್ಚೆ ಮಾಡುವಂತೆ ಸ್ಪೀಕರ್ ಹೇಳಿದ್ದಾರೆ. ಸಿಎಂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಸಿಎಂ ಬಿಎಸ್​​ವೈ ಹೇಳಿದರು.

ಇದನ್ನೂ ಓದಿ: ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ​​ ಮತ ಎಣಿಕೆ : 35 ನಿರ್ದೇಶಕ ಸ್ಥಾನಗಳ ಫಲಿತಾಂಶಕ್ಕೆ ಕ್ಷಣಗಣನೆ

ಬೆಳಗಾವಿ : ಮೈಸೂರು ಮತ್ತು ಬೆಳಗಾವಿಯಲ್ಲಿನ ಸೋಲಿನ ಬಗ್ಗೆ ಸಮಗ್ರ ತನಿಖೆ ಮಾಡಿ ವಾಸ್ತವಿಕ ಸ್ಥಿತಿಗತಿಗಳನ್ನ ತಿಳಿದುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಕ್ತ ಕ್ರಮಕೈಗೊಳ್ಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಿಧಾನ ಪರಿಷತ್​​ ಚುನಾವಣೆ ಫಲಿತಾಂಶದ ಬಗ್ಗೆ ಬಿಎಸ್​​ವೈ ಪ್ರತಿಕ್ರಿಯೆ ನೀಡಿರುವುದು..

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ಮತ್ತು ಬೆಳಗಾವಿಯಲ್ಲಿ ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ತೀವಿ ಎಂಬ ವಿಶ್ವಾಸವಿತ್ತು. ಆದರೆ, ನಮಗೆ ಹಿನ್ನೆಡೆಯಾಗಿದೆ.

ಬೆಳಗಾವಿ ಮತ್ತು ಮೈಸೂರಿನಲ್ಲಿ ಅಷ್ಟು ಜನ ಶಾಸಕರು, ಸಂಸದರಿದ್ದರೂ ಸೋತಿದ್ದೇವೆ. ಆ ಸೋಲಿನ ಬಗ್ಗೆ ಚಿಂತನೆ ಮಾಡಬೇಕಿದೆ. ಸಮಗ್ರ ತನಿಖೆ ಮಾಡಿ ಯಾರು ನಮಗೆ ಸಹಕಾರ ನೀಡಿಲ್ಲ ಎಂಬ ತನಿಖೆ ಆಗಬೇಕಿದೆ ಎಂದರು.

ನಿನ್ನೆ (ಮಂಗಳವಾರ) ಸಿಎಂ ಬೊಮ್ಮಾಯಿ ನನ್ನ ಜತೆಗೆ ಚರ್ಚೆ ಮಾಡಿದ್ದಾರೆ. ಸಮಗ್ರ ತನಿಖೆ ಮಾಡಿ ವಾಸ್ತವಿಕ ಸ್ಥಿತಿಗತಿ ತಿಳಿದುಕೊಂಡು ಆ ಬಗ್ಗೆ ಸಿಎಂ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಇದಲ್ಲದೇ ಉತ್ತರಕರ್ನಾಟಕ ಅಭಿವೃದ್ಧಿಗೆ ಎರಡು ದಿನ ಚರ್ಚೆ ಮಾಡುವಂತೆ ಸ್ಪೀಕರ್ ಹೇಳಿದ್ದಾರೆ. ಸಿಎಂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಸಿಎಂ ಬಿಎಸ್​​ವೈ ಹೇಳಿದರು.

ಇದನ್ನೂ ಓದಿ: ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ​​ ಮತ ಎಣಿಕೆ : 35 ನಿರ್ದೇಶಕ ಸ್ಥಾನಗಳ ಫಲಿತಾಂಶಕ್ಕೆ ಕ್ಷಣಗಣನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.